March 12, 2026

Newsnap Kannada

The World at your finger tips!

cows

ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆಯ ಕಾನೂನಿಗೆ ರಾಜ್ಯಪಾಲರ ಅಂಕಿತ

Spread the love

ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಮಸೂದೆ ಜಾರಿಗೆ ಬಂದಿದೆ. ವಿಧಾನ ಪರಿಷತ್ ನಲ್ಲಿ ಮಸೂದೆ ಅಂಗೀಕಾರ ಆಗದೇ ಇರುವುದರಿಂದ ಸುಗ್ರಿವಾಜ್ಙೆಗೆ ರಾಜ್ಯಪಾಲರು ಮುದ್ರೆ ಒತ್ತಿದ್ದಾರೆ

ವಿಧಾನ ಸಭೆಯಲ್ಲಿ ವಿರೋಧ ಪಕ್ಷಗಳ ತೀವ್ರ ವಿರೋಧದ ನಡುವೆಯೂ ಗೋಹತ್ಯೆ ನಿಷೇಧ ಕಾನೂನು ಮಸೂದೆ ಅಂಗೀಕಾರ ಮಾಡಲಾಗಿತ್ತು. ಇಂತಹ ಕಾಯ್ದೆ ಪರಿಷತ್ ನಲ್ಲಿ ಅಂಗೀಕರಿಸುವ ಮುನ್ನವೇ ಅನಿರ್ಧಿಷ್ಠಾವಧಿಗೆ ಮುಂದೂಡಲ್ಪಟ್ಟಿತ್ತು.

ಕಾಯ್ದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಸೂಚಿಸಲಾಗಿತ್ತು. ಇದೀಗ ಕಾನೂನಿಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾನೂನು ಜಾರಿಗೊಂಡಿದೆ.

ರಾಜ್ಯದಲ್ಲಿ ವಿರೋಧ ಪಕ್ಷಗಳ ತೀವ್ರ ವಿರೋಧದ ನಡುವೆಯೂ ಗೋಹತ್ಯೆ ನಿಷೇಧ ಕಾಯ್ದೆ ವಿಧಾನಸಭೆಯಲ್ಲಿ ಅಂಗೀಕರಿಸಲ್ಪಟ್ಟ ನಂತರ, ವಿಧಾನ ಪರಿಷತ್ ನಲ್ಲಿ ಅಂಗೀಕಾರಕ್ಕೂ ಮುನ್ನಾ ಅನಿರ್ಧಿಷ್ಠಾವಧಿಗೆ ಮುಂದೂಡಲಾಗಿತ್ತು.

error: Content is protected !!