ಮದುವೆ ಮಂಟಪದಲ್ಲಿ ಮೂರ್ಛೆ ಹೋದ ವರನ ತಲೆಯಿಂದ ಜಾರಿದ ವಿಗ್ ನಿಂದಾಗಿ ಬೋಳು ತಲೆ ನೋಡಿದ ವಧು ಮದುವೆಯನ್ನೇ ರದ್ದು ಮಾಡಿದ ಘಟನೆ ಉತ್ತರ ಪ್ರದೇಶದಲ್ಲಿ ಜರುಗಿದೆ. ಹಸೆಮಣೆಯಲ್ಲಿ ಕುಳಿತಿದ್ದ ವಧು ವಿವಾಹದ ಸಂಪ್ರದಾಯಗಳನ್ನು ನಡೆಸುತ್ತಿರುವಂತೆಯೇ ಬೋಳು ವರನನ್ನು ಮದುವೆಯಾಗಲು ವಧು ನಿರಾಕರಿಸಿದಳು.
ಇದನ್ನು ಓದಿ -ವೀರೇಂದ್ರ ಹೆಗ್ಗಡೆ ಪತ್ನಿ ಹೇಮಾವತಿ ಸಹೋದರ ಡಾ.ಬಿ.ಯಶೋವರ್ಮ ನಿಧನ
ಮದುವೆಯ ಅರ್ಧದಷ್ಟು ಸಂಪ್ರದಾಯಗಳು ಮುಗಿದಿದ್ದವು. ಇನ್ನೇನು ಮಾಂಗಲ್ಯಧಾರಣೆ ಮಾಡಬೇಕು ಅನ್ನುವ ವೇಳೆ ಇಡೀ ಸನ್ನಿವೇಶವು ಬದಲಾಗಿದೆ. ವರ, ಮಂಟಪಕ್ಕೆ ಕಾಲಿಡುವ ಮೊದಲು, ಮೂರ್ಛೆ ತಪ್ಪಿದ್ದಾನೆ. ಆತ ತಲೆಸುತ್ತಿ ಕೆಳಕ್ಕೆ ಬಿದ್ದಾಗ, ವರನ ಅಸಲಿಯತ್ತು ಬಯಲಾಗಿದೆ. ಆತ ಧರಿಸಿದ್ದ ವಿಗ್ ಹೊರಬಂದಿದೆ. ಈ ವೇಳೆ ವಧುವಿನ ಕುಟುಂಬದಿಂದ ಮರೆಮಾಡಲ್ಪಟ್ಟ ಸತ್ಯವನ್ನು ಎಲ್ಲರೂ ನೋಡಿದ್ದಾರೆ.
ವರನ ಬೋಳು ತಲೆ ಕಂಡು ವಧು ಮದುವೆಗೆ ಸುತರಾಂ ಒಲ್ಲೆ ಎಂದಿದ್ದಾಳೆ. ಅನೇಕರು ಆಕೆಯನ್ನು ಮನವೊಲಿಸಲು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ. ಕೊನೆಗೆ ಈ ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಪೊಲೀಸರು ಮಧ್ಯ ಪ್ರವೇಶಿಸಿದರೂ ಸಹ ವಧು ತನ್ನ ನಿರ್ಧಾರದಿಂದ ಹಿಂದೆ ಸರಿಯಲಿಲ್ಲ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ



More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ