ಕೋವಿಡ್ 4 ನೇ ಅಲೆ ನಿಯಂತ್ರಿಸುವ ಕ್ರಮಗಳ ಮಾರ್ಗದರ್ಶಿ ಸೂತ್ರಗಳನ್ನು ಏ.27 ರ ನಂತರ ಪ್ರಕಟಿಸಲಾಗುವುದು ಎಂದು ಮುಖ್ಯಮಂತ್ರಿ ಬೊಮ್ಮಾಯಿ ತಿಳಿಸಿದರು.
ಹುಬ್ಬಳ್ಳಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಬೊಮ್ಮಾಯಿ ದೆಹಲಿಯಲ್ಲಿ ಕೊರೋನಾ 4 ನೇ ಅಲೆ ಅಬ್ಬರ ಹೆಚ್ಚಾಗುತ್ತಿದೆ. ಹೀಗಾಗಿ ಪ್ರಧಾನ ಮಂತ್ರಿಗಳು ಏ. 27 ರಂದು ವಿಡಿಯೋ ಕಾನ್ಪರೆನ್ಸ್ ನಡೆಸಲಿದ್ದಾರೆ . ನಂತರ ರಾಜ್ಯದಲ್ಲಿ ಕೈಗೊಳ್ಳುವ ಕ್ರಮಗಳ ಬಗ್ಗೆ ಮಾಹಿತಿ ಸಿದ್ದಪಡಿಸಲಾಗುವುದು ಎಂದರು.
ನಮಗೆ ಈಗಾಗಲೇ ಕಳೆದ ಮೂರು ಕೊರೊನಾ ಅಲೆಗಳಿಂದ ಆಗಿರುವ ಸಮಸ್ಯೆ , ಪರಿಹಾರದ ದಾರಿಗಳನ್ನು ಕಂಡುಕೊಳ್ಳುವ ಬಗ್ಗೆ ನಮಗೆ ಅನುಭವ ಇದೆ. ಅಲ್ಲದೆ 4 ನೇ ಅಲೆಯ ಸ್ವರೂಪದ ಬಗ್ಗೆ ತಜ್ಞರು ಮಾಹಿತಿ ಕಲೆ ಹಾಕಿದ್ದಾರೆ ಎಂದು ಹೇಳಿದರು.
ಈ ಎಲ್ಲಾ ಅಂಶಗಳನ್ನು ಗಮನದಲ್ಲಿ ಇಟ್ಟುಕೊಂಡು, ಪ್ರಧಾನಿ ಸಭೆಯ ನಂತರ ಅವರು ನೀಡುವ ಸೂಚನೆಗಳನ್ನು ತೆಗೆದುಕೊಂಡು ಹೊಸ ಮಾರ್ಗದರ್ಶಿ ಸೂತ್ರಗಳನ್ನು ತಯಾರಿಸಲಾಗುವುದು ಎಂದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು