ಕಾಂಗ್ರೆಸ್ ನ ನೂತನ ಪದಾಧಿಕಾರಿ ಗಳ ಆಯ್ಕೆ ಕುರಿತಂತೆ ಪಟ್ಟಿ ಕಳುಹಿಸಿಕೊಡಲು ಪಕ್ಷದ ಹೈಕಮಾಂಡ್ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯಗೂ ಸೂಚನೆ ನೀಡಿದೆ.
ರಾಜ್ಯ ಕಾಂಗ್ರೆಸ್ನಲ್ಲಿ ಮುಂದಿನ ಮುಖ್ಯಮಂತ್ರಿ ಯಾರು ಎಂಬ ಚರ್ಚೆ ಜೋರಾಗಿರುವ ನಡುವೆಯೇ ನೂತನ ಪದಾಧಿಕಾರಿಗಳ ಆಯ್ಕೆ ಕುರಿತಂತೆ ಪಟ್ಟಿ ಕಳುಹಿಸಿಕೊಡಲು ಸಿದ್ದರಾಮಯ್ಯ ಅವರನ್ನು ಕೇಳಿರುವುದು ಕುತೂಹಲ ಮೂಡಿಸಿದೆ.
ಇತ್ತೀಚೆಗಷ್ಟೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ದೆಹಲಿಗೆ ಭೇಟಿ ನೀಡಿ ಪಕ್ಷದ ವರಿಷ್ಠರ ಜೊತೆಗೆ ಮಾತುಕತೆ ನಡೆಸಿದ್ದರು. ಶಿವಕುಮಾರ್ ಅವರ ಭೇಟಿ ಬೆನ್ನಲ್ಲೇ ಪದಾಧಿಕಾರಿಗಳ ಆಯ್ಕೆಗೆ ಪಟ್ಟಿ ಕಳುಹಿಸಿಕೊಡಿ ಎಂದು ಸಿದ್ದರಾಮಯ್ಯ ಅವರಿಗೆ ಸೂಚನೆ ನೀಡುವ ಮೂಲಕ ಪದಾಧಿಕಾರಿಗಳ ಆಯ್ಕೆ ಕುರಿತಂತೆ ಸಿದ್ದರಾಮಯ್ಯ ಅವರನ್ನು ಹೈಕಮಾಂಡ್ ವಿಶ್ವಾಸಕ್ಕೆ ತೆಗೆದುಕೊಂಡಿದೆ.
ಪಕ್ಷದ ಪದಾಧಿಕಾರಿಗಳ ನೇಮಕದಲ್ಲಿ ಕೆಪಿಸಿಸಿ ಅಧ್ಯಕ್ಷರಿಗೆ ಪರಮಾಧಿಕಾರವಿದ್ದರೂ ಕೂಡ ಕಾಂಗ್ರೆಸ್ ವರಿಷ್ಠರು ಸಿಎಲ್ಪಿ ನಾಯಕನ ಮೊರೆ ಹೋಗಿದೆ.
ಸದ್ಯ ವರಿಷ್ಠರ ಸೂಚನೆ ಮೇರೆಗೆ ಸಿದ್ದರಾಮಯ್ಯ ಅವರು ಪದಾಧಿಕಾರಿಗಳ ಪಟ್ಟಿ ಸಿದ್ಧಪಡಿಸುವುದರಲ್ಲಿ ಬ್ಯುಸಿಯಾಗಿದ್ದಾರೆ.
ಕುಂದಾಪುರ : ಮೇ 16 ರ ರಾತ್ರಿ ಗೋಪಾಡಿ ಗ್ರಾಮದ ಮೂಡುಗೋಪಾಡಿಯ ನಿವಾಸಿ ಜಯಂತಿ ಶೆಟ್ಟಿ (61) ಅವರ ಮೃತದೇಹ… Read More
2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More
ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More
ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್ನಲ್ಲಿ ಘೋಷಣೆ… Read More
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More
This website uses cookies.
Leave a Comment