ರಾಜ್ಯದಲ್ಲಿ ನಡೆಯುತ್ತಿರುವ ಹಿಜಾಬ್ ವಿವಾದಕ್ಕೆ ಸಂಬಂಧಿಸಿ ತುರ್ತು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ರಾಜ್ಯದಲ್ಲಿ ಹಿಜಾಬ್ ಮತ್ತು ಕೇಸರಿ ಶಾಲು ವಿವಾದ ಜೋರಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಕಪಿಲ್ ಸಿಬಲ್, ತುರ್ತು ವಿಚಾರಣೆ ನಡೆಸುವಂತೆ ಮನವಿ ಮಾಡಿಕೊಂಡಿದ್ದರು.
ಸುಪ್ರೀಂ ಕೋರ್ಟ್ ಈ ವಿಚಾರದಲ್ಲಿ ಮಧ್ಯಪ್ರವೇಶ ಮಾಡಲು ನಿರಾಕರಿಸಿದೆ.
ಸದ್ಯ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ಪೀಠ ವಿಚಾರಣೆ ನಡೆಸುತ್ತಿದೆ. ಹೈಕೋರ್ಟ್ನ ವಿಸ್ತೃತ ಪೀಠ ವಿಚಾರಣೆ ನಡೆಸಿ ಆದೇಶ ನೀಡಲಿ.
ಆದೇಶದ ಬಳಿಕವೂ ಅಗತ್ಯ ಬಿದ್ದರೆ, ಮುಂದೆ ನೋಡೋಣ. ಸದ್ಯ ಸುಪ್ರೀಂಕೋರ್ಟ್ ಈ ವಿಚಾರದಲ್ಲಿ ಮಧ್ಯಪ್ರವೇಶ ಮಾಡಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ.