ಗೃಹ ಸಚಿವರು ಸಮರ್ಥರಿದ್ದಾರೆ: ಯತ್ನಾಳ್

Team Newsnap
0 Min Read

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ, ಅತ್ಯಾಚಾರ, ದೌರ್ಜನ್ಯ ನಿಗ್ರಹ ಮಾಡಲು ಗೃಹ ಸಚಿವ ಅರಗ ಜ್ಞಾನೇಂದ್ರ ಸಮರ್ಥರಿದ್ದಾರೆ. ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಹೇಳಿದ್ದಾರೆ.


ಮಲೆಮಹದೇಶ್ವರ ಬೆಟ್ಟದಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಅವರು ಪ್ರಾಮಾಣಿಕರಿದ್ದಾರೆಂದರು. ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಿಬೇಕು. ಅವರನ್ನು ಗಲ್ಲಿಗೇರಿಸಬೇಕೆಂದು ಆಗ್ರಹಿಸಿದರು.


ಆರೋಪಿಗಳು ಪರಾರಿಯಾಗಲು ಯತ್ನಿಸಿದರೆ ಎನ್‌ಕೌಂಟರ್ ಮಾಡಬೇಕಾಗುತ್ತದೆ. ದುಷ್ಟರಿಗೆ ಈ ರೀತಿಯ ಶಿಕ್ಷೆ ಅನಿವಾರ್ಯ ಎಂದು ಅಭಿಪ್ರಾಯಪಟ್ಟರು.

Share This Article
Leave a comment