February 25, 2026

Newsnap Kannada

The World at your finger tips!

yathnal

ಯಾರೂ ನಿರೀಕ್ಷಿಸದ ಪ್ರಾಮಾಣಿಕ, ಹಿಂದುತ್ವದ ಪರ ವ್ಯಕ್ತಿ ರಾಜ್ಯದ ಮುಂದಿನ ಸಿಎಂ – ಶಾಸಕ ಯತ್ನಾಳ್

Spread the love

ರಾಜ್ಯದಲ್ಲಿ ಯಾರೂ ನಿರೀಕ್ಷೆ ಮಾಡದ ವ್ಯಕ್ತಿ ಸಿಎಂ ಆಗುತ್ತಾರೆ ಎಂದು‌ ಶಾಸಕ ಬಸವನ ಗೌಡ ಪಾಟೀಲ್ ಯತ್ನಾಳ್ ಚಾಮರಾಜ ನಗರದಲ್ಲಿ ಭವಿಷ್ಯ ನುಡಿದಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಯತ್ನಾಳ್ ಭ್ರಷ್ಟಾಚಾರದ ಬಗ್ಗೆ ಹೈಕಮಾಂಡ್ ಸಮಗ್ರವಾಗಿ ಕಾದು ನೋಡುತ್ತಿದೆ. ಎಷ್ಟು ಬೇಗ ಸಿಎಂ ಬಗಲಾಗುತ್ತಾರೋ ಅಷ್ಟು ಬೇಗ ಒಳ್ಳೆಯದು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಯಾರೂ ನಿರೀಕ್ಷೆ ಮಾಡದ ವ್ಯಕ್ತಿ ಸಿಎಂ ಆಗುತ್ತಾರೆ. ಒಳ್ಳೆಯವರು, ಪ್ರಾಮಾಣಿಕರು, ಹಿಂದುತ್ವದ ಪರ ಇರುವವರು ಸಿಎಂ ಆಗುತ್ತಾರೆ ಎಂದಿದ್ದಾರೆ.

ಹೈಕಮಾಂಡ್ ಒಂದು ವೇಳೆ ನನಗೆ ಅವಕಾಶ ಕೊಟ್ಟರೆ ಬೇಡ ಅನ್ನಲ್ಲ. ಅಲ್ಲದೇ ಕೆಲವು ಶಾಸಕರು ಟಿಕೆಟ್ ಕೊಡಲ್ಲ ಅನ್ನೋ ಭಯದಿಂದ ಮಾತನಾಡುತ್ತಿಲ್ಲ ಅಂತಾ ತಮ್ಮದೇ ಪಕ್ಷದವರ ಬಗ್ಗೆ ಕಿಡಿಕಾರಿದ್ದಾರೆ.

ನಾನು ಸಿಎಂ ಆದರೆ ಚಾಮರಾಜ ನಗರಕ್ಕೆ ಭೇಟಿ ನೀಡುತ್ತೇನೆ. ಯಡಿಯೂರಪ್ಪ ಇದುವರೆಗೂ ಬಂದಿಲ್ಲ. ಏಕೆಂದರೆ ಇಲ್ಲಿಗೆ ಬಂದ್ರೆ ಅಧಿಕಾರ ಹೋಗುತ್ತದೆ ಎನ್ನುವ ಭೀತಿ. ಆದರೆ ಸಿದ್ದರಾಮಯ್ಯ ಚಾಮರಾಜನಗರ ಕ್ಕೆ ಬಂದಿದ್ದರು. ಐದು ವರ್ಷ ಅಧಿಕಾರ ಮಾಡಲಿಲ್ವಾ ? ಎಂದು ಮರು ಪ್ರಶ್ನೆ ಮಾಡಿದರು.

error: Content is protected !!