ರಾಜ್ಯದಲ್ಲಿ ಯಾರೂ ನಿರೀಕ್ಷೆ ಮಾಡದ ವ್ಯಕ್ತಿ ಸಿಎಂ ಆಗುತ್ತಾರೆ ಎಂದು ಶಾಸಕ ಬಸವನ ಗೌಡ ಪಾಟೀಲ್ ಯತ್ನಾಳ್ ಚಾಮರಾಜ ನಗರದಲ್ಲಿ ಭವಿಷ್ಯ ನುಡಿದಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಯತ್ನಾಳ್ ಭ್ರಷ್ಟಾಚಾರದ ಬಗ್ಗೆ ಹೈಕಮಾಂಡ್ ಸಮಗ್ರವಾಗಿ ಕಾದು ನೋಡುತ್ತಿದೆ. ಎಷ್ಟು ಬೇಗ ಸಿಎಂ ಬಗಲಾಗುತ್ತಾರೋ ಅಷ್ಟು ಬೇಗ ಒಳ್ಳೆಯದು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಯಾರೂ ನಿರೀಕ್ಷೆ ಮಾಡದ ವ್ಯಕ್ತಿ ಸಿಎಂ ಆಗುತ್ತಾರೆ. ಒಳ್ಳೆಯವರು, ಪ್ರಾಮಾಣಿಕರು, ಹಿಂದುತ್ವದ ಪರ ಇರುವವರು ಸಿಎಂ ಆಗುತ್ತಾರೆ ಎಂದಿದ್ದಾರೆ.
ಹೈಕಮಾಂಡ್ ಒಂದು ವೇಳೆ ನನಗೆ ಅವಕಾಶ ಕೊಟ್ಟರೆ ಬೇಡ ಅನ್ನಲ್ಲ. ಅಲ್ಲದೇ ಕೆಲವು ಶಾಸಕರು ಟಿಕೆಟ್ ಕೊಡಲ್ಲ ಅನ್ನೋ ಭಯದಿಂದ ಮಾತನಾಡುತ್ತಿಲ್ಲ ಅಂತಾ ತಮ್ಮದೇ ಪಕ್ಷದವರ ಬಗ್ಗೆ ಕಿಡಿಕಾರಿದ್ದಾರೆ.
ನಾನು ಸಿಎಂ ಆದರೆ ಚಾಮರಾಜ ನಗರಕ್ಕೆ ಭೇಟಿ ನೀಡುತ್ತೇನೆ. ಯಡಿಯೂರಪ್ಪ ಇದುವರೆಗೂ ಬಂದಿಲ್ಲ. ಏಕೆಂದರೆ ಇಲ್ಲಿಗೆ ಬಂದ್ರೆ ಅಧಿಕಾರ ಹೋಗುತ್ತದೆ ಎನ್ನುವ ಭೀತಿ. ಆದರೆ ಸಿದ್ದರಾಮಯ್ಯ ಚಾಮರಾಜನಗರ ಕ್ಕೆ ಬಂದಿದ್ದರು. ಐದು ವರ್ಷ ಅಧಿಕಾರ ಮಾಡಲಿಲ್ವಾ ? ಎಂದು ಮರು ಪ್ರಶ್ನೆ ಮಾಡಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ