ಪತ್ನಿ ಚೈತ್ರಾಳನ್ನು ಕೊಂದವನೇ ಹೊಳೆನರಸೀಪುರ ತಾಲೂಕಿನ ತಟ್ಟೆಕೆರೆ ಗ್ರಾಮದ ಶಿವಕುಮಾರ್. ಅಮಾನುಷವಾಗಿ ಪತ್ನಿಯ ಕತ್ತು ಪರಾರಿಯಾಗಲು ಯತ್ನಿಸಿದ್ದ ಈತನನ್ನು ಪೊಲೀಸರಿಗೆ ಒಪ್ಪಿಸಲಾಗಿದೆ.ಇದನ್ನು ಓದಿ –ಮಂಡ್ಯ ವಾರ್ತಾ ಇಲಾಖೆ: ದೇಶ ಇಬ್ಭಾಗ ಕರಾಳ ನೆನಪಿನ ಛಾಯಾಚಿತ್ರ ಪ್ರದರ್ಶನ
ಹೊನಮಾರನಹಳ್ಳಿ ಗ್ರಾಮದ ಚೈತ್ರಾಳನ್ನು 7 ವರ್ಷದ ಹಿಂದೆ ಶಿವಕುಮಾರ್ ಮದುವೆಯಾಗಿದ್ದ. ದಂಪತಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಎರಡೂ ಮಕ್ಕಳು ಹೆಣ್ಣು ಎಂಬ ಕಾರಣಕ್ಕೆ ಪತ್ನಿಗೆ ಚಿತ್ರಹಿಂಸೆ ಕೊಡುತ್ತಿದ್ದ.
ಕರೊನಾ ಲಾಕ್ಡೌನ್ ವೇಳೆ ದೊಡ್ಡ ಗಲಾಟೆಯೇ ಆಗಿತ್ತು. ಚೈತ್ರಾಳ ಸರ, ಕಿವಿಯೋಲೆ ಕಿತ್ತುಕೊಂಡು ಹಲ್ಲೆ ಮಾಡಿದ್ದ. ಅವನ ಕಾಟ ತಾಳಲಾರದೆ ಚೈತ್ರಾ ತವರು ಮನೆಯಲ್ಲೇ ಇದ್ದಳು. ಈಗ ಅವಳನ್ನೇ ಕೊಂದು ಹಾಕಿಬಿಟ್ಟ,ಗಂಡನಿಂದ ಜೀವನಾಂಶ ಕೋರಿ ಚೈತ್ರಾ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ಈ ವಿಚಾರವಾಗಿ ಇಂದು ಹೊಳೆನರಸೀಪುರ ಕೋರ್ಟ್ಗೆ ಚೈತ್ರಾ ಆಗಮಿಸಿದ್ದರು. ಮಧ್ಯಾಹ್ನ 12.30ರ ಸುಮಾರಿನಲ್ಲಿ ಕೋರ್ಟ್ ಆವರಣದ ಶೌಚಗೃಹಕ್ಕೆ ಚೈತ್ರಾ ತೆರಳಿದ್ದಾಗ ಹೊಂಚುಹಾಕಿ ಕಾಯುತ್ತಿದ್ದ ಶಿವಕುಮಾರ್, ಆಕೆಯ ಕತ್ತು ಕೊಯ್ದು ಪರಾರಿಯಾಗಲು ಯತ್ನಿಸಿದ್ದ. ಗಂಭೀರ ಸ್ಥಿತಿಯಲ್ಲಿದ್ದ ಚೈತ್ರಾಳನ್ನು ಕೂಡಲೇ ಹಾಸನದ ಹಿಮ್ಸ್ ಆಸ್ಪತ್ರೆಗೆ ಕರೆತರಲಾಯಿತ್ತಾದರೂ ಬದುಕಲಿಲ್ಲ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು