ಎರಡು ಹೆಣ್ಣು ಮಕ್ಕಳಾದ ಕಾರಣಕ್ಕಾಗಿ ಕೋರ್ಟ್ ಆವರಣದಲ್ಲೇ ಪತ್ನಿಯ ಕತ್ತು ಕೊಯ್ದು ಗಂಡ ಬರ್ಬರವಾಗಿ ಹತ್ಯೆ ಮಾಡಿದ ಭಯಾನಕ ಘಟನೆ ಹೊಳೆನರಸೀಪುರದಲ್ಲಿ ಶನಿವಾರ ಸಂಭವಿಸಿದೆ.
ಪತ್ನಿ ಚೈತ್ರಾಳನ್ನು ಕೊಂದವನೇ ಹೊಳೆನರಸೀಪುರ ತಾಲೂಕಿನ ತಟ್ಟೆಕೆರೆ ಗ್ರಾಮದ ಶಿವಕುಮಾರ್. ಅಮಾನುಷವಾಗಿ ಪತ್ನಿಯ ಕತ್ತು ಪರಾರಿಯಾಗಲು ಯತ್ನಿಸಿದ್ದ ಈತನನ್ನು ಪೊಲೀಸರಿಗೆ ಒಪ್ಪಿಸಲಾಗಿದೆ.ಇದನ್ನು ಓದಿ –ಮಂಡ್ಯ ವಾರ್ತಾ ಇಲಾಖೆ: ದೇಶ ಇಬ್ಭಾಗ ಕರಾಳ ನೆನಪಿನ ಛಾಯಾಚಿತ್ರ ಪ್ರದರ್ಶನ
ಹೊನಮಾರನಹಳ್ಳಿ ಗ್ರಾಮದ ಚೈತ್ರಾಳನ್ನು 7 ವರ್ಷದ ಹಿಂದೆ ಶಿವಕುಮಾರ್ ಮದುವೆಯಾಗಿದ್ದ. ದಂಪತಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಎರಡೂ ಮಕ್ಕಳು ಹೆಣ್ಣು ಎಂಬ ಕಾರಣಕ್ಕೆ ಪತ್ನಿಗೆ ಚಿತ್ರಹಿಂಸೆ ಕೊಡುತ್ತಿದ್ದ.
ಕರೊನಾ ಲಾಕ್ಡೌನ್ ವೇಳೆ ದೊಡ್ಡ ಗಲಾಟೆಯೇ ಆಗಿತ್ತು. ಚೈತ್ರಾಳ ಸರ, ಕಿವಿಯೋಲೆ ಕಿತ್ತುಕೊಂಡು ಹಲ್ಲೆ ಮಾಡಿದ್ದ. ಅವನ ಕಾಟ ತಾಳಲಾರದೆ ಚೈತ್ರಾ ತವರು ಮನೆಯಲ್ಲೇ ಇದ್ದಳು. ಈಗ ಅವಳನ್ನೇ ಕೊಂದು ಹಾಕಿಬಿಟ್ಟ,ಗಂಡನಿಂದ ಜೀವನಾಂಶ ಕೋರಿ ಚೈತ್ರಾ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ಈ ವಿಚಾರವಾಗಿ ಇಂದು ಹೊಳೆನರಸೀಪುರ ಕೋರ್ಟ್ಗೆ ಚೈತ್ರಾ ಆಗಮಿಸಿದ್ದರು. ಮಧ್ಯಾಹ್ನ 12.30ರ ಸುಮಾರಿನಲ್ಲಿ ಕೋರ್ಟ್ ಆವರಣದ ಶೌಚಗೃಹಕ್ಕೆ ಚೈತ್ರಾ ತೆರಳಿದ್ದಾಗ ಹೊಂಚುಹಾಕಿ ಕಾಯುತ್ತಿದ್ದ ಶಿವಕುಮಾರ್, ಆಕೆಯ ಕತ್ತು ಕೊಯ್ದು ಪರಾರಿಯಾಗಲು ಯತ್ನಿಸಿದ್ದ. ಗಂಭೀರ ಸ್ಥಿತಿಯಲ್ಲಿದ್ದ ಚೈತ್ರಾಳನ್ನು ಕೂಡಲೇ ಹಾಸನದ ಹಿಮ್ಸ್ ಆಸ್ಪತ್ರೆಗೆ ಕರೆತರಲಾಯಿತ್ತಾದರೂ ಬದುಕಲಿಲ್ಲ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ