ಕ್ರೀಡೆ

WTC2023 ಫೈನಲ್ ಗೆ ಭಾರತ – ಆಸೀಸ್ ಸರಣಿಯೇ ನಿರ್ಣಾಯಕ

ಬಾಂಗ್ಲಾದೇಶ ವಿರುದ್ಧ ಟೀಂ ಇಂಡಿಯಾ 2-0 ಅಂತರದಲ್ಲಿ ಟೆಸ್ಟ್ ಸರಣಿ ಗೆದ್ದುಕೊಂಡ ಬೆನ್ನಲ್ಲೇ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಅಂಕಪಟ್ಟಿಯಲ್ಲಿ ಭಾರತ ಎರಡನೇ ಸ್ಥಾನಕ್ಕೆ ಲಗ್ಗೆ ಇಟ್ಟಿದೆ.

ಈ ಮೂಲಕ ಫೈನಲ್ ಆಸೆ ಇನ್ನೂ ಜೀವಂತವಾಗಿದೆ.ಕೇರಳದಲ್ಲಿ ಹಕ್ಕಿ ಜ್ವರದ ಭೀತಿ – 6,000ಕ್ಕೂ ಹೆಚ್ಚು ಪಕ್ಷಿಗಳ ಹತ್ಯೆ

ಭಾರತ, ಬಾಂಗ್ಲಾದೇಶ ವಿರುದ್ಧ ಸರಣಿ ಗೆದ್ದ ಖುಷಿಯೊಂದಿಗೆ ಡಬ್ಲ್ಯೂಟಿಸಿ ಅಂಕಪಟ್ಟಿಯಲ್ಲಿ ಪ್ರಗತಿ ಸಾಧಿಸಿದೆ . ಆದರೆ ಭಾರತ ಫೈನಲ್ ಖಚಿತ ಪಡಿಸಿಕೊಳ್ಳಬೇಕಾದರೆ ಮುಂದಿನ ಆಸ್ಟ್ರೇಲಿಯಾ ವಿರುದ್ಧದ 4 ಪಂದ್ಯಗಳ ಟೆಸ್ಟ್ ಸರಣಿ ನಿರ್ಣಾಯಕ ಎನಿಸಿಕೊಂಡಿದೆ.

ಫೈನಲ್ ಲೆಕ್ಕಾಚಾರ ಏನು? :

ಡಬ್ಲ್ಯೂಟಿಸಿ ಅಂಕಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿ ಆಸ್ಟ್ರೇಲಿಯಾ ತಂಡವಿದೆ.

1) ಆಸ್ಟ್ರೇಲಿಯಾ ಒಟ್ಟು 13 ಪಂದ್ಯಗಳಲ್ಲಿ 9 ಜಯ, 1 ಸೋಲು ಮತ್ತು 3 ಡ್ರಾ ಸಾಧಿಸಿ 76.92 ಸರಾಸರಿಯೊಂದಿಗೆ 120 ಅಂಕ ಪಡೆದುಕೊಂಡಿದೆ.

2) ಎರಡನೇ ಸ್ಥಾನದಲ್ಲಿ ಭಾರತವಿದೆ, 8 ಜಯ, 4 ಸೋಲು ಮತ್ತು 2 ಡ್ರಾ ಸಾಧಿಸಿ 58.93 ಸರಾಸರಿಯೊಂದಿಗೆ 99 ಅಂಕ ಸಂಪಾದಿಸಿದೆ.

3) ಮೂರನೇ ಸ್ಥಾನದಲ್ಲಿ ದಕ್ಷಿಣ ಆಫ್ರಿಕಾವಿದೆ 11 ಪಂದ್ಯಗಳಿಂದ 54.55 ಸರಾಸರಿಯಲ್ಲಿ 72 ಅಂಕ ಪಡೆದಿದೆ.

4) 4ನೇ ಸ್ಥಾನದಲ್ಲಿ ಶ್ರೀಲಂಕಾವಿದ್ದು 10 ಪಂದ್ಯಗಳಿಂದ 53.33 ಸರಾಸರಿಯಲ್ಲಿ 64 ಅಂಕ ಗಳಿಸಿಕೊಂಡಿದೆ.

5) ಇಂಗ್ಲೆಂಡ್, ವೆಸ್ಟ್ ಇಂಡೀಸ್, ಪಾಕಿಸ್ತಾನ, ನ್ಯೂಜಿಲೆಂಡ್ ಮತ್ತು ಬಾಂಗ್ಲಾದೇಶ ಕ್ರಮವಾಗಿ 5,6,7,8,9ನೇ ಸ್ಥಾನದಲ್ಲಿದೆ. ಈ 5 ತಂಡಗಳು ಬಹತೇಕ ಫೈನಲ್ ರೇಸ್‍ನಿಂದ ಹೊರಬಿದ್ದಿವೆ. ಇದೀಗ ಅಂಕಪಟ್ಟಿಯಲ್ಲಿ ಮೊದಲ ನಾಲ್ಕು ಸ್ಥಾನದಲ್ಲಿರುವ ತಂಡಗಳ ನಡುವೆ ಪೈಪೋಟಿ ಇದೆ.

Team Newsnap
Leave a Comment

Recent Posts

ಹೆಚ್‌.ಡಿ ರೇವಣ್ಣಗೆ ಹೊಟ್ಟೆ ಉರಿ, ಎದೆನೋವು: ದಿಢೀರ್‌ ಆಸ್ಪತ್ರೆಗೆ ಶಿಫ್ಟ್‌!

ಹೆಚ್‌.ಡಿ ರೇವಣ್ಣಗೆ ಮಧ್ಯಾಹ್ನದಿಂದ ಹೊಟ್ಟೆ ಉರಿ, ಎದೆನೋವು ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್‌ ಟೆಸ್ಟ್ ಮಾಡಿಸಿದ್ದ ಎಸ್‌ಐಟಿ ಅಧಿಕಾರಿಗಳು ಎದೆ ಉರಿ… Read More

May 7, 2024

ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಇಬ್ಬರು ಸರ್ಕಾರಿ ನೌಕರರು ಸಾವು

ಬೆಂಗಳೂರು : ಸೋಮವಾರ ಬಾಗಲಕೋಟೆ ಮತ್ತು ಬೀದರ್ ಜಿಲ್ಲೆಗಳಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿತರಾಗಿದ್ದ ಸರ್ಕಾರಿ ಶಾಲಾ ಮುಖ್ಯೋಪಾಧ್ಯಾಯರು ಮತ್ತು ಸಹಾಯಕ… Read More

May 7, 2024

Lok Sabha Election 2024 : ಕರ್ನಾಟಕದಲ್ಲಿ ಶೇ. 9.45% ರಷ್ಟು ಮತದಾನ

ನವದೆಹಲಿ : ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನದಲ್ಲಿ ಶೇ. 9.45% ರಷ್ಟು ಮತದಾನವಾಗಿದೆ ಎಂದು ಎಂದು ಚುನಾವಣಾ… Read More

May 7, 2024

ಪ್ರಜ್ವಲ್‌ ಮಾತ್ರವಲ್ಲ , ತುಂಬ ರಾಜಕಾರಣಿಗಳ ವಿಡಿಯೋಗಳು ಸದ್ಯದಲ್ಲೇ ಹೊರಬರಲಿದೆ : ಕೆ ಎಸ್‌ ಈಶ್ವರಪ್ಪ

ಶಿವಮೊಗ್ಗ : ರಾಷ್ಟ್ರ ಮಟ್ಟದಲ್ಲಿ ಹಾಸನದ ಹಾಲಿ ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ ಡ್ರೈ ಪ್ರಕರಣ ಸದ್ದು ಮಾಡುತ್ತಿದ್ದು, ಪ್ರಜ್ವಲ್‌… Read More

May 7, 2024

ರಾಜ್ಯ ಸರ್ಕಾರವೇ ಪ್ರಜ್ವಲ್‌ ರೇವಣ್ಣ ವಿದೇಶಕ್ಕೆ ಹಾರಲು ಹೊಣೆ : ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (PM Narendra Modi) ಮೊದಲ ಬಾರಿಗೆ ಪ್ರಜ್ವಲ್ ರೇವಣ್ಣ (Prajwal Revanna) ವಿಡಿಯೋ ಪ್ರಕರಣಕ್ಕೆ… Read More

May 7, 2024

ಮಂಡ್ಯ : ಭಾರಿ ಮಳೆಗೆ ಕಾರಿನ ಮೇಲೆ ಮರ ಬಿದ್ದು ವ್ಯಕ್ತಿ ದುರ್ಮರಣ

ಮಂಡ್ಯ :ನೆನ್ನೆ ಮಳೆಯಿಂದಾಗಿ ಮರವೊಂದು ಕಾರಿನ ಮೇಲೆ ಬಿದ್ದ ಪರಿಣಾಮ ವ್ಯಕ್ತಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ನಗರದ ಜನರಲ್… Read More

May 7, 2024