ರಷ್ಯಾ-ಉಕ್ರೇನ್ (Russia – Ukraine) ಯುದ್ಧದ ಮಧ್ಯೆ, ಉಕ್ರೇನ್ನ ಪೋಲಿಷ್ ಮತ್ತು ಹಂಗೇರಿಯ ಗಡಿಯಲ್ಲಿ ಸಿಲುಕಿಕೊಂಡಿದ್ದ 800ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳನ್ನು ರಕ್ಷಿಸುವ ಮೂಲಕ 24 ವರ್ಷದ ಭಾರತೀಯ ಮಹಿಳಾ ಪೈಲಟ್ ಈಗ ಗಮನ ಸೆಳೆದಿದ್ದಾರೆ.
ಕೋಲ್ಕತ್ತಾದ ಮಹಾಶ್ವೇತಾ ಚಕ್ರವರ್ತಿ ಎನ್ನುವ ಪೈಲಟ್ ಯುದ್ಧ ಪೀಡಿತ ಉಕ್ರೇನ್ನಲ್ಲಿ ಸಿಲುಕಿರುವ 800ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳನ್ನು ಸ್ಥಳಾಂತರಿಸುವಲ್ಲಿ ಕಾರ್ಯ ನಿರ್ವಹಿಸಿದ್ದಾರೆ.
ಆಪರೇಷನ್ ಗಂಗಾದ ಸದಸ್ಯರಾಗಿರುವ ಚಕ್ರವರ್ತಿ, ರಷ್ಯಾ-ಉಕ್ರೇನ್ (Russia – Ukraine ಬಿಕ್ಕಟ್ಟಿನ ನಡುವೆ ಸಿಲುಕಿರುವ ವಿದ್ಯಾರ್ಥಿಗಳನ್ನು ರಕ್ಷಿಸಿದ್ದಾರೆ. ಫೆಬ್ರವರಿ 27 ಮತ್ತು ಮಾರ್ಚ್ 7ರ ನಡುವೆ ಪೋಲೆಂಡ್ನಿಂದ ನಾಲ್ಕು ಮತ್ತು ಹಂಗೇರಿಯಿಂದ ಎರಡು ಸ್ಥಳಾಂತರಿಸುವ ವಿಮಾನಗಳಲ್ಲಿ ವಿದ್ಯಾರ್ಥಿಗಳನ್ನು ಸ್ಥಾಳಾಂತರಿಸುವಲ್ಲಿ ಕಾರ್ಯ ನಿರ್ವಹಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಮಹಾಶ್ವೇತಾ ಚಕ್ರವರ್ತಿ ಮಾತನಾಡಿ, ಇದು ಜೀವಮಾನದ ಅನುಭವವಾಗಿತ್ತು, ಅವರಲ್ಲಿ ಅನೇಕರು ಅನಾರೋಗ್ಯಕ್ಕೆ ಒಳಗಾಗಿದ್ದರು. ನಾನು ಅವರ ಹೋರಾಟದ ಮನೋಭಾವನೆಯನ್ನು ಮೆಚ್ಚುತ್ತೇನೆ. ಅವರ ಮನೆಗೆ ಹಿಂದಿರುಗಿದ ಪ್ರಯಾಣದಲ್ಲಿ ನನ್ನ ಪಾತ್ರವನ್ನು ವಹಿಸಿದ್ದಕ್ಕಾಗಿ ನಾನು ತುಂಬಾ ಹೆಮ್ಮೆಪಡುತ್ತೇನೆ. ಎಂದು ಹೇಳಿದ್ದಾರೆ.
ಕೋಲ್ಕತ್ತಾದ 24 ವರ್ಷದ ಪೈಲಟ್ ಮಹಾಶ್ವೇತಾ ಚಕ್ರವರ್ತಿ ಅವರು ಉಕ್ರೇನ್, ಪೋಲೆಂಡ್ ಮತ್ತು ಹಂಗೇರಿಯ ಗಡಿಯಿಂದ 800ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳನ್ನು ರಕ್ಷಿಸಿದ್ದಾರೆ. ಆಕೆಗೆ ಅಪಾರ ಗೌರವ ಎಂದು ಬಿಜೆಪಿ ಮಹಿಳಾ ಮೋಚಾ ಟ್ವೀಟ್ ಮಾಡಿದ್ದಾರೆ.
- ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ರಸ್ತೆ ಅಪಘಾತ- ಇಬ್ಬರು ಯುವಕರ ಸಾವು
- ಕೆನಡಾ ಸಂಸತ್ತಿನಲ್ಲಿ ಕನ್ನಡದಲ್ಲೇ ಮಾತನಾಡಿದ ಕನ್ನಡಿಗ ಸಂಸದ ಚಂದ್ರ ಆರ್ಯ
- ಜೂ. 3 ನೇ ವಾರದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ: ಶಿಕ್ಷಣ ಸಚಿವ ಬಿ ಸಿ ನಾಗೇಶ್
- ಅವಕಾಶ ಸಿಕ್ಕಾಗ ಖಂಡಿತಾ ಮಂಡ್ಯಕ್ಕೆ ಹೋಗುವೆ – ಸನ್ನಿಲಿಯೋನ್
- ರೋಹಿಣಿಗೆ ಮತ್ತೆ ಸಂಕಷ್ಟ – ಮೈಸೂರು ಡಿಸಿ ಆಗಿದ್ದ ವೇಳೆ ಮಾಡಿದ್ದ ಅಕ್ರಮ ಆರೋಪ ತನಿಖೆಗೆ ಆದೇಶ
- ಚಿನ್ನ ಅಡ ಇಟ್ಟು ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡ ನಟಿ ಚೇತನಾ – ವೈದ್ಯರು ಸಿಬ್ಬಂದಿ ನಾಪತ್ತೆ
More Stories
ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ರಸ್ತೆ ಅಪಘಾತ- ಇಬ್ಬರು ಯುವಕರ ಸಾವು
ಕೆನಡಾ ಸಂಸತ್ತಿನಲ್ಲಿ ಕನ್ನಡದಲ್ಲೇ ಮಾತನಾಡಿದ ಕನ್ನಡಿಗ ಸಂಸದ ಚಂದ್ರ ಆರ್ಯ
ಜೂ. 3 ನೇ ವಾರದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ: ಶಿಕ್ಷಣ ಸಚಿವ ಬಿ ಸಿ ನಾಗೇಶ್