“ವಿಧಾನಸಭೆಯಲ್ಲಿ ರಾಜ್ಯದ ಆರೂವರೆಕೋಟಿ ಜನರ ಸಮಸ್ಯೆಗಳ ಕುರಿತು ಚರ್ಚೆಯಾಗಬೇಕೇ ಹೊರತು 224 ಶಾಸಕರ ಬಗ್ಗೆ ಅಲ್ಲ ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಖಡಕ್ಕಾಗಿ ಹೇಳಿದ ಪ್ರಸಂಗ ನಡೆಯಿತು.
ಟೋಲ್ಗಳಲ್ಲಿ ತಮ್ಮನ್ನು ಪ್ರಶ್ನಿಸುವ ಬಗ್ಗೆ ಜೆಡಿಎಸ್ನ ಶಾಸಕರಾದ ಡಾ. ಕೆ. ಅನ್ನದಾನಿ ಮತ್ತು ಕೆ.ಎಂ.ಶಿವಲಿಂಗೇಗೌಡ ಸದನದಲ್ಲಿ ಪ್ರಸ್ತಾಪಿಸಿದಾಗ ಸ್ಪೀಕರ್ ಮೇಲಿನಂತೆ ನುಡಿದರು. ನಿಮ್ಮ ಸಮಸ್ಯೆಗಳ್ನು ಸಚಿವರೊಂದಿಗೆ ಕೂತು ಚರ್ಚಿಸಿಕೊಳ್ಳಿ ಎಂದು ಸಲಹೆ ನೀಡಿದರು.
ಇದಕ್ಕೂ ಮುನ್ನ, “ನಾವು ಶಾಸಕರು, ಟೋಲ್ಗಳಲ್ಲಿ ನಮ್ಮ ವಾಹನ ತಡೆಯುತ್ತಾರೆ, ಗುರುತಿನ ಚೀಟಿ ಕೇಳುವುದೆಂದರೇನು? ನಮಗೇನು ಘನತೆ, ಗೌರವ ಇಲ್ಲವೇ ಎಂದು ಜೆಡಿಎಸ್ನ ಈ ಇಬ್ಬರು ಶಾಸಕರು ತಮ್ಮ ಅಸಮಾಧಾನ ಹೊರಹಾಕಿದರು.
ಗಮನಸೆಳೆಯುವ ಸೂಚನೆಯಡಿ ಡಾ. ಅನ್ನದಾನಿ, ರಾಜ್ಯದ ಟೋಲ್ಗಳಲ್ಲಿ ಗಣ್ಯ, ಅತಿಗಣ್ಯ ವ್ಯಕ್ತಿಗಳಿಗೆ ಸಂಬಂಧಿಸಿದಂತೆ ಪ್ರತ್ಯೇಕ ಪಥ ಗುರುತಿಸಬೇಕೆಂದು ಅಭಿಪ್ರಾಯಪಟ್ಟರು.
ಇದೇ ವೇಳೆ ಮಾತನಾಡಿದ ಶಿವಲಿಂಗೇಗೌಡ, ಟೋಲ್ಗಳಲ್ಲಿ ನಮಗೆ ಗೌರವ ಸಿಗದಿದ್ದರೆ ಊರಿನ ಜನ ಏನೆಂದುಕೊಂಡಾರು? ಜನಪ್ರತಿನಿಧಿಗಳಿಗೆ ಗೌರವ,ಘನತೆ ಇಲ್ಲವೇ? ಪ್ರತ್ಯೇಕ ಪಥ ಮಾಡಲು ಸಾಧ್ಯವಾಗದಿದ್ದರೆ ನಮಗೆ ಕೊಟ್ಟಿರುವ ಪಾಸ್ ಹಿಂದಕ್ಕೆ ಪಡೆಯಿರಿ ಎಂದರು.
ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More
ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More
ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More
ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More
This website uses cookies.
Leave a Comment