ಬಿಜೆಪಿ – ಜೆಡಿಎಸ್ ಮೈತ್ರಿ ಯ ಫಲವಾಗಿ ಹಿರಿಯ ನಾಯಕ, ವಿಧಾನ ಪರಿಷತ್ ಸದಸ್ಯರಾದ ಬಸವರಾಜ ಹೊರಟ್ಟಿ ವಿಧಾನ ಪರಿಷತ್ ಸಭಾಪತಿಯಾಗಿ ಆಯ್ಕೆಯಾಗಿದ್ದಾರೆ.
ಮಂಗಳವಾರ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಕಾಂಗ್ರೆಸ್ ಭಾಗಿಯಾಗದ ಹಿನ್ನೆಲೆಯಲ್ಲಿ ಬಸವರಾಜ ಹೊರಟ್ಟಿ ಅವಿರೋಧವಾಗಿ ವಿಧಾನ ಪರಿಷತ್ ಸಭಾಪತಿಯಾಗಿ ಆಯ್ಕೆಯಾಗಿ, ಸಭಾಪತಿಗಳ ಸ್ಥಾನದಲ್ಲಿ ಕುಳಿತುಕೊಂಡರು.
ಸಭಾಪತಿಗಳ ಸ್ಥಾನಕ್ಕೆ ಜೆಡಿಎಸ್ನಿಂದ ಬಸವರಾಜ ಹೊರಟ್ಟಿ ಅವರ ಹೆಸರನ್ನು ಕೆ ಟಿ ಶ್ರೀಕಂಠೇಗೌಡರು ಸೂಚಿಸಿದರು. ಆ ಬಳಿಕ ಸಭಾಪತಿಗಳ ಸ್ಥಾನಕ್ಕೆ ಕಾಂಗ್ರೆಸ್ನಿಂದ ನಾಸೀರ್ ಅಹ್ಮದ್ ಪರ ಹೆಸರನ್ನು ಸೂಚಿಸಿದ ಸದಸ್ಯ ಎಂ.ನಾರಾಯಣಸ್ವಾಮಿ ಮೊದಲು ಚುನಾವಣಾ ಪ್ರಕ್ರಿಯೆ ಮುಂದೂಡಿ. ಮೊದಲು ನಿನ್ನೆಯ ಕಾಯಿದೆ ಬಗ್ಗೆಯ ಗೊಂದಲವನ್ನು ಸರಿಪಡಿಸಿ ಎಂದು ಸಭಾಧ್ಯಕ್ಷ ಪ್ರಾಣೇಶ್ ಅವರಲ್ಲಿ ಮನವಿ ಮಾಡಿದರು.
ಎಂ.ನಾರಾಯಣಸ್ವಾಮಿ ಮನವಿ ತಿರಸ್ಕರಿಸಿದ ಸಭಾಧ್ಯಕ್ಷ ಎಂ.ಕೆ. ಪ್ರಾಣೇಶ್, ಮೊದಲು ಚುನಾವಣೆ ನಡೆಸೋಣ. ಅಜೆಂಡಾದ ಪ್ರಕಾರ ಹೋಗಬೇಕಾಗುತ್ತದೆ. ನೀವೆಲ್ಲಾ ನಿಮ್ಮ ನಿಮ್ಮ ಆಸನಕ್ಕೆ ಹೋಗಿ ಎಂದು ಸೂಚನೆ ನೀಡಿದ್ದರು. ಚುನಾವಣಾ ಪ್ರಕ್ರಿಯೆ ನಡೆಯಲು ಅವಕಾಶ ಮಾಡಿಕೊಟ್ಟರು.
ಜನರ ಸಮಸ್ಯೆಗಳಿಗಿಂತ ಟಿವಿ ಚಾನಲ್ ಗಳಿಗೆ ಗಂಡ ಹೆಂಡ್ತಿ ಜಗಳಗಳ ಬಗ್ಗೆಯೇ ಹೆಚ್ಚು ಆಸಕ್ತಿ: ಸಿಎಂ ವ್ಯಂಗ್ಯ ಫೇಕ್ ನ್ಯೂಸ್… Read More
ಹಾಸನ: 10 ವರ್ಷದ ಬಾಲಕನೊಬ್ಬ ಹೃದಯಘಾತದಿಂದ ಸಾವನ್ನಪ್ಪಿರುವ ಘಟನೆ ಹಾಸನದ ಅಲೂರು ತಾಲೂಕಿನ ಚಿನ್ನಪುರದಲ್ಲಿ ನಡೆದಿದೆ. ಮೃತ ಬಾಲಕ ಸಚಿನ್… Read More
ಮೈಸೂರು: ಶುಕ್ರವಾರ ( 20-09-2024 ) ರಾತ್ರಿ ದಸರಾ ಗಜಪಡೆಯ ಆನೆ ಧನಂಜಯ ಮತ್ತೊಂದು ಆನೆ ಕಂಜನ್ ಮೇಲೆ ಏಕಾಏಕಿ… Read More
ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More
ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More
ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More
This website uses cookies.
Leave a Comment