ಇತ್ತೀಚೆಗೆ ರಿಲೀಸ್ ಆದ ʼದಿ ಕಾಶ್ಮೀರ್ ಫೈಲ್ಸ್ʼ ಸಿನಿಮಾ ಇಡೀ ದೇಶಾದ್ಯಂತ ಭಾರೀ ಸದ್ದು ಮಾಡುತ್ತಿದೆ.
ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಸಿಎಂ ಬಸವರಾಜ್ ಬೊಮ್ಮಾಯಿ ಕೂಡ ಈ ಸಿನಿಮಾ ಬಗ್ಗೆ ಮೆಚ್ಚುಗೆ ಮಾತುಗಳನ್ನಾಡಿದ್ದಾರೆ.
ಒರಿಯನ್ ಮಾಲ್ ನ ಪಿವಿಆರ್ ಚಿತ್ರಮಂದಿರದಲ್ಲಿ ಸಿನಿಮಾ ವೀಕ್ಷಿಸಿದ ಬಳಿಕ ಟ್ವೀಟ್ ಮಾಡಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಕಾಶ್ಮೀರಿ ಪಂಡಿತರ ನರಮೇಧದ ಕುರಿತು ಚಿತ್ರವನ್ನು ಅದ್ಭುತವಾಗಿ ಮಾಡಿದ್ದೀರಿ. ಕರ್ನಾಟಕದಲ್ಲೂ ಈ ಚಿತ್ರಕ್ಕೆ ತೆರಿಗೆ ವಿನಾಯತಿ ನೀಡುತ್ತೇವೆ ಎಂದು ಪ್ರಕಟಿಸಿದ್ದಾರೆ.
‘ದಿ ಕಾಶ್ಮೀರ್ ಫೈಲ್ಸ್’ ಸತ್ಯ ಘಟನೆ ಆಧರಿಸಿದ ಸಿನಿಮಾ ಎನ್ನಲಾಗಿದೆ. ವಿವೇಕ್ ಅಗ್ನಿಹೋತ್ರಿ ನಿರ್ದೇಶನ ಮಾಡಿರುವ ಈ ಸಿನಿಮಾಕ್ಕೆ ದೇಶಾದ್ಯಂತ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ.
- ಮಂಡ್ಯ , ಬೆಂಗಳೂರು ಕ್ಷೇತ್ರದ 9 ಗಂಟೆ ತನಕದ ಮತದಾನದ ವಿವರ
- ಮೂವರು ಯುವಕರು ರೈಲಿಗೆ ಸಿಲುಕಿ ದುರ್ಮರಣ
- ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಚುನಾವಣಾ ಪ್ರಚಾರ ವೇದಿಕೆಯಲ್ಲೇ ಕುಸಿದ ಕೇಂದ್ರ ಸಚಿವ ಗಡ್ಕರಿ
- ರಾಹುಲ್ ಗಾಂಧಿ ‘ಪ್ರಧಾನಿಯಾಗಲು’ ಮೋದಿಗಿಂತ ಸಮರ್ಥರು : CM ಸಿದ್ದರಾಮಯ್ಯ