Mandya

ಮಂಡ್ಯ ಮಿಮ್ಸ್ ನಲ್ಲಿ ಮನುಷ್ಯ ರಿಗೆ ಇಲ್ಲ ಬೆಡ್ – ನಾಯಿಗಳಿಗೆ ಬೆಚ್ಚನೆ ಬೆಡ್

ಕೊರೊನಾ ಅಟ್ಟಹಾಸದಿಂದ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಬೆಡ್ ಇಲ್ಲ ಅನ್ನೋ ಸಂಖ್ಯೆಯೇ ಹೆಚ್ಚು. ಆದರೆ ಮಂಡ್ಯ ಮಿಮ್ಸ್ ( ಜಿಲ್ಲಾ ಆಸ್ಪತ್ರೆ)ನಲ್ಲಿ ಮಾತ್ರ ರೋಗಿಗಳಿಗೆ ಯಾಕೆ ನಾವು ಶ್ವಾನಗಳಿಗೂ ಬೆಡ್ ಕೊಡುತ್ತೀವಿ ಬನ್ನಿ ಎಂದು ಕೈ ಬೀಸಿ ಕರೆಯುತ್ತಿದ್ದಾರೆ.

ಹೌದು. ಡಾಕ್ಟರೇ ನಾವು (ನಾಯಿಗಳು) ಬೆಡ್ ಮೇಲೆ ಮಲಗಿದ್ದೇವೆ, ನೀವು ಎಲ್ಲಿ ಹೋಗಿದ್ದೀರಾ ಬಂದು ಟ್ರೀಟ್‍ಮೆಂಟ್ ಕೊಡಿ ಅನ್ನೋ ದೃಶ್ಯ ಮಂಡ್ಯದ ಮಿಮ್ಸ್ ಆಸ್ಪತ್ರೆಯಲ್ಲಿ ಕಂಡು ಬಂದಿದೆ.

ಮಂಡ್ಯ ಜಿಲ್ಲೆಯ ಮಿಮ್ಸ್ ಆಸ್ಪತ್ರೆಯ ಬೆಡ್‍ಗಳ ಮೇಲೆ ಸಾಲು ಸಾಲಾಗಿ ನಾಯಿಗಳು ಬೆಚ್ಚಗೆ ಮಲಗಿವೆ. ಈ ಬೀದಿ ನಾಯಿಗಳನ್ನು ಓಡಿಸೋಕೂ ಮಿಮ್ಸ್ ನಲ್ಲಿ ಸಿಬ್ಬಂದಿ ಇಲ್ವಾ ಅನ್ನೋ ಪ್ರಶ್ನೆ
ಎದುರಾಗಿದೆ. ಮಿಮ್ಸ್ ಆಸ್ಪತ್ರೆಯ ವಾರ್ಡಿನಲ್ಲಿ ಸರಿಯಾದ ನಿರ್ವಹಣೆ ಇಲ್ಲದ ಕಾರಣ ನಾಯಿಗಳು ತಮ್ಮ ವಾಸವನ್ನು ಆಸ್ಪತ್ರೆಯ ಬೆಡ್ ಗೆ ಷಿಪ್ಟ್ ಮಾಡಿಕೊಂಡಿವೆ .

ಕೋವಿಡ್ ಬಂದಾಗಿನಿಂದ ಆಸ್ಪತ್ರೆಗಳಲ್ಲಿ ಬೆಡ್‍ಗಳೇ ಇಲ್ಲ ಅಂತ ಮಿಮ್ಸ್ ಸಿಬ್ಬಂದಿ ಹೇಳ್ತಿದ್ದಾರೆ. ಆದರೆ ಇಲ್ಲಿ ನೋಡಿದರೆ ಬೆಡ್‍ಗಳು ಖಾಲಿ ಬಿದ್ದಿವೆ. ಖಾಲಿ ಇರೋ ಈ ಬೆಡ್‍ಗಳ ಮೇಲೆ ನಾಯಿಗಳು ಮಲಗಿಕೊಂಡಿವೆ. ಮಂಡ್ಯ ಮಿಮ್ಸ್ ಆಸ್ಪತ್ರೆಯ ಅಧಿಕಾರಿಗಳ, ಸಿಬ್ಬಂದಿಯ ಈ ನಿರ್ಲಕ್ಷ್ಯತನಕ್ಕೆ ಸಾರ್ವಜನಿಕರು ಕಿಡಿಕಾರುತ್ತಿದ್ದಾರೆ.

ಒಟ್ಟಾರೆ ಕೊರೊನಾ ಅಟ್ಟಹಾಸದಿಂದ ಒಂದು ಕಡೆ ಆಸ್ಪತ್ರೆಗಳಲ್ಲಿ ಬೆಡ್ ಇಲ್ಲದೇ ರೋಗಿಗಳು ಪರದಾಡುತ್ತಿದ್ರೆ, ಇತ್ತ ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯತನದಿಂದ ಆಸ್ಪತ್ರೆ ವಾರ್ಡ್ ನಾಯಿಗಳ ಮನೆಯಾಗಿದೆ. ಈಗಲಾದರು ಅಧಿಕಾರಿಗಳು ಎಚ್ಚೆತ್ತುಕೊಂಡರೆ ಸೂಕ್ತ ನಿರ್ವಹಣೆ ಮಾಡಬೇಕಿದೆ.

Team Newsnap
Leave a Comment
Share
Published by
Team Newsnap
Tags: #mandya

Recent Posts

SIT ಯಿಂದ ಸಂಸದ ಪ್ರಜ್ವಲ್ ರೇವಣ್ಣಗೆ ಲುಕ್ ಔಟ್ ನೋಟಿಸ್ ಜಾರಿ

ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More

May 2, 2024

ಪ್ರಜ್ವಲ್ ರೇವಣ್ಣನ ಮಾಜಿ ಕಾರು ಚಾಲಕ ‘ಕಾರ್ತಿಕ್’ ನಾಪತ್ತೆ

ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More

May 2, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More

May 2, 2024

ಪಿಎಚ್ಡಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಅನುಮಾನಾಸ್ಪದ ಸಾವು

ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್‌ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More

May 2, 2024

ಪ್ರೀತಿಯೆಂದರೆ…. ಇಷ್ಟೇನಾ

(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More

May 1, 2024

2024ರ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ತಂಡ ಪ್ರಕಟ

ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್‍ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More

April 30, 2024