ಆಂಧ್ರಪ್ರದೇಶದ ಶ್ರೀಶೈಲದ ಮಲ್ಲಿಕಾರ್ಜುನ ದೇವಸ್ಥಾನದ ಆವರಣದಲ್ಲಿ ನೀರಿನ ಬಾಟಲ್ಗಾಗಿ ನಡೆದ ಗಲಾಟೆಯಲ್ಲಿ ಕನ್ನಡಿಗ ಸಾವಿಗೀಡಾಗಿದ್ದು 200 ಕರ್ನಾಟಕದ ವಾಹನಗಳನ್ನು ಜಖಂ ಮಾಡಿರುವ ಘಟನೆ ಕಳೆದ ರಾತ್ರಿ ಜರುಗಿದೆ.
ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಜಾನಮಟ್ಟಿ ಗ್ರಾಮದ ಶ್ರೀಶೈಲ ವಾರಿಮಠ (28) ಮೃತಪಟ್ಟ ಯುವಕ
ಸ್ಥಳೀಯ ವ್ಯಾಪಾರಿಗಳು ನಡೆಸಿದ ಮಾರಾಮಾರಿಯಲ್ಲಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿತ್ತು. ಗಂಭೀರ ಗಾಯಗೊಂಡಿದ್ದ ಯುವಕ ಸಾವಿಗೀಡಾಗಿದ್ದಾನೆ.
ಈ ವೇಳೆ 200 ಕ್ಕೂ ಹೆಚ್ಚು ವಾಹನಗಳನ್ನು ಧ್ವಂಸಗೊಳಿಸಲಾಗಿದೆ.
ದೇವಸ್ಥಾನದ ಆವರಣದಲ್ಲಿ ನೀರಿನ ಬಾಟಲ್ಗಾಗಿ ಎರಡು ಗುಂಪುಗಳ ನಡುವೆ ಮಾರಾಮಾರಿಯಾಗಿದೆ.
ಆಂಧ್ರ ಮೂಲದ ವ್ಯಾಪಾರಸ್ಥರು ಹಾಗೂ ಸ್ಥಳೀಯರಿಂದ ಕರ್ನಾಟಕ ಭಕ್ತರ ಮೇಲೆ ಹಲ್ಲೆ ನಡೆದಿದೆ. ಲಾಠಿ ಹಾಗೂ ಮಾರಕಾಸ್ತ್ರ ಹಿಡಿದು ಹೊಡೆದಾಡುತ್ತಿರುವ ವೀಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.
ಶ್ರೀಶೈಲಂನಲ್ಲಿ ಈಗ 144 ನೇ ಸೆಕ್ಷನ್ ಜಾರಿ ಮಾಡಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು