ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರ ಶನಿವಾರ ಬೆಳಗ್ಗೆ ವಿಜಯನಗರ ಜಿಲ್ಲೆ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರನ್ನು ಅದಲು ಬದಲು ಮಾಡಿ ಆದೇಶ ಹೊರಡಿಸಿತ್ತು. ಆದರೆ ಇದೇ ಆದೇಶವನ್ನು ಸರ್ಕಾರ ಸಂಜೆ ವೇಳೆಗೆ ವಾಪಸ್ ಪಡೆದಿದೆ.
ಸರ್ಕಾರ ಬೆಳಗ್ಗೆ ನೀಡಿದ್ದ ಆದೇಶದಿಂದ ಸಚಿವ ಆನಂದ್ ಸಿಂಗ್ ಅಭಿಮಾನಿಗಳು ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಪಟ್ಟಿದ್ದರು. ಆದರೆ ಸಂಜೆ ಸರ್ಕಾರ ಆದೇಶ ಹಿಂಪಡೆದ ಹಿನ್ನೆಲೆ ಆನಂದ್ ಸಿಂಗ್ ಅಭಿಮಾನಿಗಳಿಗೆ ನಿರಾಶೆ ತಂದಿದೆ.
ನೂತನ ವಿಜಯನಗರ ಜಿಲ್ಲೆ ಉದಯವಾದ ಬಳಿಕ ಮೊದಲ ಜಿಲ್ಲಾ ಉಸ್ತುವಾರಿ ಸಚಿವರಾಗಿ ಆನಂದ್ ಸಿಂಗ್ ನೇಮಕವಾಗಿದ್ದರು.
ಬಳಿಕ ಆನಂದ್ ಸಿಂಗ್ ಅವರನ್ನು ಕೊಪ್ಪಳ ಜಿಲ್ಲಾ ಉಸ್ತುವಾರಿಯಾಗಿ ನೇಮಕ ಮಾಡಲಾಗಿತ್ತು. ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರಾಗಿ ಶಶಿಕಲಾ ಜೊಲ್ಲೆ ನೇಮಕಗೊಂಡಿದ್ದರು.
ಸ್ವಂತ ಜಿಲ್ಲೆಯ ಸಚಿವರುಗಳಿಗೆ ಬೇರೆ ಜಿಲ್ಲೆ ಉಸ್ತುವಾರಿ ನೀಡಲಾಗಿತ್ತು,
ಇದುತೀವ್ರ ವಿವಾದಕ್ಕೆ ಕಾರಣವಾಗಿದ್ದ ಹಿನ್ನೆಲೆ ಶನಿವಾರ ಬೆಳಗ್ಗೆ ಜಿಲ್ಲಾ ಉಸ್ತುವಾರಿ ಸಚಿವರನ್ನು ಅದಲು ಬದಲು ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು. ಆದರೆ ಸಂಜೆ ವೇಳೆಗೆ ಬೆಳಗ್ಗೆ ನೀಡಿದ್ದ ಆದೇಶವನ್ನು ತಡೆ ಹಿಡಿದು, ಯಥಾಸ್ಥಿತಿ ಕಾಪಾಡಲು ಸರ್ಕಾರ ಸೂಚನೆ ನೀಡಿದೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ