ಕೇಂದ್ರ ಸರ್ಕಾರವು ಜಿಎಸ್ಟಿ ಮೂಲಕ ರಾಜ್ಯಗಳನ್ನು ಭಿಕ್ಷೆ ಕೇಳುವ ಪರಿಸ್ಥಿತಿಗೆ ದೂಡಿದೆ. ದೇಶದಲ್ಲಿ ಒಕ್ಕೂಟ ಸ್ವರೂಪ ಇದೆಯೇ ಎಂಬ ಬಗ್ಗೆ ಯೋಚಿಸಬೇಕಾಗಿದೆ ಎಂದು ಖ್ಯಾತ ಸಾಹಿತಿ ದೇವನೂರ ಮಹಾದೇವ ಅವರು ಆತಂಕ ವ್ಯಕ್ತಪಡಿಸಿದ್ದಾರೆ.
ದಲಿತ ಸಂಘರ್ಷ ಸಮಿತಿ ಒಕ್ಕೂಟದ ವತಿಯಿಂದ ಮೈಸೂರಿನಲ್ಲಿ ಇಂದು ನಡೆದ ಡಾ. ಬಿ.ಆರ್. ಅಂಬೇಡ್ಕರ್ ಪರಿನಿರ್ವಾಣ ದಿನಾಚರಣೆಯಲ್ಲಿ, ಆರ್ಎಸ್ಎಸ್- ಬಿಜೆಪಿಯ ದುರಾಡಳಿತದ ವಿರುದ್ಧ ಜನಜಾಗೃತಿ ಅಭಿಯಾನದ ಕರಪತ್ರ ಬಿಡುಗಡೆ ಮಾಡಿ ಅವರು ಮಾತನಾಡಿ, ನಿಜಕ್ಕೂ ಇಂದು ರಾಜ್ಯಗಳಿಗೆ ಅಸ್ತಿತ್ವ ಇದೆಯಾ ಎಂಬ ಪ್ರಶ್ನೆ ಮೂಡಲಿದೆ ಎಂದರಲ್ಲದೆ ರಾಜ್ಯಗಳು ಪಕ್ಷಾತೀತವಾಗಿ ಎಚ್ಚರಗೊಳ್ಳುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.
ಕೇಂದ್ರ ಸರ್ಕಾರವು ಸಂವಿಧಾನವನ್ನು ಒಪ್ಪದೇ ತನ್ನದೇ ಆದ ಸಂವಿಧಾನವೊಳಗಿಟ್ಟುಕೊಂಡು ಆಡಳಿತ ನಡೆಸುತ್ತಿದೆ ಎಂದು ದೂರಿದರಲ್ಲದೆ, ಕೇಂದ್ರವು ಸ್ವಾಯತ್ತ ಸಂಸ್ಥೆಗಳ ಕುತ್ತಿಗೆಯ ನರ ಕತ್ತರಿಸಿದ್ದು, ಅವುಗಳ ಕುತ್ತಿಗೆಗಳು ನೇತಾಡುತ್ತಿವೆ ಎಂದು ಕಿಡಿಕಾರಿದರು.
ಸಾಮಾಜಿಕ ನ್ಯಾಯವನ್ನು ಅಂಗಾತ ಮಲಗಿಸಿ ಬಿಟ್ಟ ಕೇಂದ್ರ ಸರ್ಕಾರ, ಆರ್ಥಿಕವಾಗಿ ದುರ್ಬಲರೆಂಬ ಹೆಸರಲ್ಲಿ ಮೀಸಲು ನೀಡಿ ಸಾಮಾಜಿಕ, ಶೈಕ್ಷಣಿಕವಾಗಿ ಹಿಂದುಳಿದಿರುವ ಪರಿಕಲ್ಪನೆಯನ್ನೇ ನೆಲಕಚ್ಚಿಸಿಬಿಟ್ಟಿದೆ ಎಂದು ಅವರು ಕಟುವಾಗಿ ದೇವನೂರು ಟೀಕಿಸಿದರು.
ಹಗಲು ರಾತ್ರಿಯೆನ್ನದೆ ತೀವ್ರವಾದ ಚಳಿಯಲ್ಲಿ ರೈತರು ಒಂದು ವಾರದಿಂದ ದೆಹಲಿಯಲ್ಲಿ ಚಳವಳಿ ನಡೆಸುತ್ತಿದ್ದರೂ ಕೇಂದ್ರ ಸರ್ಕಾರವು ಮಾತುಕತೆಯಲ್ಲಿ ವಂಚಿಸಿದೆ ಎಂದು ಆರೋಪಿಸಿ, ಇದು ಸರ್ಕಾರದ ಪೈಶಾಚಿಕ ನಡೆ ಎಂದರು.
ಶ್ರೀರಂಗಪಟ್ಟಣ : ಅಕ್ಟೋಬರ್ 4 ರಿಂದ 7 ವರೆಗೆ ವಿಜೃಂಭಣೆಯಿಂದ ಶ್ರೀರಂಗಪಟ್ಟಣ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ… Read More
ಆಂಧ್ರಪ್ರದೇಶ: ಹಿಂದಿನ ಸರ್ಕಾರ ತಿರುಪತಿ ಲಡ್ಡುವನ್ನು ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಯಾರಿಸಲಾಗಿದೆ ಎಂದು ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು… Read More
ಬೆಂಗಳೂರು: ಜೆಪಿ ಶಾಸಕ ಮುನಿರತ್ನವಿರುದ್ಧ ಮತ್ತೊಂದು ಕೇಸ್ ದಾಖಲಾಗಿದ್ದು , ಇದೀಗ ಶಾಸಕನ ವಿರುದ್ಧ ಅತ್ಯಾಚಾರ ಕೇಸ್ ದಾಖಲಾಗಿದೆ. ಶಾಸಕ… Read More
ಬೆಂಗಳೂರು: ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಬಿಎಂಟಿಸಿ ಬಸ್ ಅಪಘಾತಕ್ಕೆ ವಿಶೇಷ ಚೇತನ ಬಲಿಯಾಗಿರುವ ಘಟನೆ ನಡೆದಿದೆ. ಬಿಎಂಟಿಸಿ ಬಸ್ ಯಶವಂತಪುರದಿಂದ… Read More
ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,640 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ಸೆ.19ರಿಂದ ಮ ಆಡಳಿತಾಧಿಕಾರಿ ಮತ್ತು ಜಿಟಿಟಿಸಿಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ನೀಡಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ… Read More
This website uses cookies.
Leave a Comment