ಮಂಡ್ಯ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಎಸ್.ಅಶ್ವಥಿಯವರು ಸೋಮವಾರ ಅಧಿಕಾರ ಸ್ವೀಕರಿಸಿದರು.
ನಿರ್ಗಮಿತ ಡಿಸಿ ಡಾ.ಎಂ.ವಿ. ವೆಂಕಟೇಶ್ ಅಶ್ವಥಿ ಅವರಿಗೆ ಅಧಿಕಾರ ಹಸ್ತಾಂತರ ಮಾಡಿದರು.
ಅಶ್ವಥಿ ಈ ಹಿಂದೆ ದಾವಣಗೆರೆಯಲ್ಲಿ ಸಿಇಓ ಆಗಿ ಕಾರ್ಯನಿರ್ವಹಿಸಿ ದ್ದರು. ಜಿಲ್ಲೆಯಲ್ಲಿ ಕಳೆದ 1 ವರ್ಷ 6 ತಿಂಗಳಿಂದ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದ ವೆಂಕಟೇಶ್ ನೂತನ ಡಿಸಿಯನ್ನು ಸ್ವಾಗತಿಸಿದರು.
ಅಧಿಕಾರ ಸ್ವೀಕಾರದ ನಂತರ ವೆಂಕಟೇಶ್ ಅವರಿಗೆ ಬೀಳ್ಕೊಡುಗೆ ನೀಡಲಾಯಿತು. ಜಿಲ್ಲೆಯ ಸಮಸ್ಯೆಗಳ ಬಗ್ಗೆ ಹಾಗೂ ಅದನ್ನು ತಾವು ಪರಿಹರಿಸಿದ ಬಗ್ಗೆ ವೆಂಕಟೇಶ್ ಸ್ಮರಿಸಿದರು.
ಇದೇ ವೇಳೆ ಮಾತನಾಡಿದ ನೂತನ ಜಿಲ್ಲಾಧಿಕಾರಿ ಅಶ್ವಥಿ, ಮಂಡ್ಯ ಜಿಲ್ಲೆಯ ಸಮಸ್ಯೆಗಳ ಬಗ್ಗೆ ಡಾ. ವೆಂಕಟೇಶ್ ತಿಳಿಸಿದ್ದಾರೆ, ಸದ್ಯದಲ್ಲೇ ಅವುಗಳನ್ನು ನಿವಾರಿಸುತ್ತೇನೆ. ಕೆಲವು ಯೋಜನೆಗಳನ್ನು ಅವರಿಗೆ ಜಾರಿಗೆ ತರಲು ಸಾಧ್ಯವಾಗಿಲ್ಲ, ಅದನ್ನ ನಾನು ಮಾಡುತ್ತೇನೆ. ಅವರ ಕನಸನ್ನು ನನಸು ಮಾಡುತ್ತೇನೆ ಎಂದು ಹೇಳಿದರು.
ಕಚೇರಿಯ ಅಧಿಕಾರಿಗಳು, ನೂತನ ಹಾಗೂ ಮಾಜಿ ಜಿಲ್ಲಾಧಿಕಾರಿಗಳಿಬ್ಬರನ್ನೂ ಅಭಿನಂದಿಸಿದರು.

ಕಾರ್ಯಕ್ರಮದಲ್ಲಿ ಹೆಚ್ಚು ವರಿ ಜಿಲ್ಲಾಧಿಕಾರಿ ಶೈಲಜಾ ಹಿರಿಯ ಕಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ