Editorial

ನನಸಾಗಬಹುದಾದ ನಾಗರೀಕತೆಯ ಹೊಸ ಮನ್ವಂತರ

ಸಿನಿಮಾ ಮಾಡೋಣ ಬನ್ನಿ
ಹೊಡೆದಾಟಗಳಿಲ್ಲದ – ರಕ್ತ ಚೆಲ್ಲದ – ಕುತಂತ್ರಗಳಿಲ್ಲದ –
ಆಕರ್ಷಕ – ಸೃಜನಾತ್ಮಕ – ಮನೋರಂಜನಾತ್ಮಕ –
ಮೌಲ್ಯಗಳನ್ನು ಎತ್ತಿ ಹಿಡಿಯುವ ಚಿತ್ರ.

ಸಾಹಿತ್ಯ ರಚಿಸೋಣ ಬನ್ನಿ,
ದ್ವೇಷಕಾರದ – ವಿಷಕಕ್ಕದ – ಪ್ರತಿಷ್ಠೆ ಮೆರೆಯದ –
ಚೆಂದದ ಭಾಷೆಯ – ಪ್ರೀತಿಯ ಚುಂಬಕದ – ಮಾನವೀಯ ಬರಹ.

ಚಿತ್ರ ಬಿಡಿಸೋಣ ಬನ್ನಿ,
ಆತ್ಮವಂಚನೆಯಿಲ್ಲದ – ಬೆಂಕಿಯುಗುಳದ – ಅಶ್ಲೀಲವಲ್ಲದ – ಪ್ರಕೃತಿಯ ಮಡಿಲಿನ – ಸೌಂದರ್ಯದ ಬೀಡಿನ – ಮನಮೋಹಕ ದೃಶ್ಯ .

ಸಂಗೀತ ನುಡಿಸುತ್ತಾ ಹಾಡೋಣ ಬನ್ನಿ,
ಅಹಂಕಾರಗಳಿಲ್ಲದ – ಪಂಥಬೇದಗಳಿಲ್ಲದ – ಕೃತಿಮತೆಯಿಲ್ಲದ –
ಮನಕೆ ಮುದನೀಡುವ – ಆಹ್ಲಾದಕರ – ಆರಾಧನಾ ಭಾವದಿಂದ.

ಪರಿಸರ ಉಳಿಸೋಣ ಬನ್ನಿ,
ವಿಷಗಾಳಿಯಿಲ್ಲದ – ಕಲ್ಮಶನೀರಲ್ಲದ – ಆಹಾರ ಕಲಬೆರಕೆಯಾಗದ – ಹಚ್ಚಹಸಿರಿನ – ಸ್ವಚ್ಚ ಗಾಳಿಯ – ಶುಧ್ಧ ನೀರಿನ ಪ್ರಕೃತಿ.

ಸಂಘಟಿತರಾಗೋಣ ಬನ್ನಿ,
ಸ್ವಾರ್ಥಿಗಳಾಗದ – ಘರ್ಷಣೆಗಳಿಲ್ಲದ – ಸೇವಾಮನೋಭಾವದ –
ತ್ಯಾಗದ – ಪ್ರಾಮಾಣಿಕತೆಯ – ಅರ್ಪಣಾಮನೋಭಾವದ ಸಂಸ್ಥೆಯೊಂದಿಗೆ.

ಆಡಳಿತ ನಡೆಸೋಣ ಬನ್ನಿ,
ಭ್ರಷ್ಟತೆಯಿಲ್ಲದ – ದೌರ್ಜನ್ಯಗಳಿಲ್ಲದ – ಅನ್ಯಾಯ ಮಾಡದ – ಸಮಾನತೆ – ಸ್ವಾತಂತ್ರ್ಯ – ಸೋದರತೆಯ ಜೀವಪರ ಸರ್ಕಾರ.

ಬದುಕೋಣ ಬನ್ನಿ,
ಚಿಂತೆಗಳಿಲ್ಲದ – ಜಿಗುಪ್ಸೆಗಳಿಲ್ಲದ – ನೋವುಗಳಿಲ್ಲದ –
ನೆಮ್ಮದಿಯ – ಆನಂದದಾಯಕ – ಸುಖದ ಜೀವನ .

ಮನುಷ್ಯರಾಗೋಣ ಬನ್ನಿ,
ಕಪಟತನವಿಲ್ಲದ – ದುರ್ಬುದ್ಧಿಗಳಿಲ್ಲದ – ಮನೋವಿಕಾರಗಳಿಲ್ಲದ –
ಜ್ಞಾನಸ್ಥ – ಧ್ಯಾನಸ್ಥ – ಯೋಗಸ್ಥ – ಕರ್ಮಸ್ಥ – ಜೀವಿಗಳಾಗಿ.

ಇದು ತಿರುಕನ ಕನಸಲ್ಲ ………

ನನಸಾಗಬಹುದಾದ ನಾಗರೀಕತೆಯ ಹೊಸ ಮನ್ವಂತರ .

ವಿವೇಕಾನಂದ. ಹೆಚ್.ಕೆ.

Team Newsnap
Leave a Comment
Share
Published by
Team Newsnap

Recent Posts

ಸುಳ್ಳು ಸುದ್ದಿಗಳಿಗೆ ಬ್ರೇಕ್ ಹಾಕಿ : ಸಿ.ಎಂ.ಸಿದ್ದರಾಮಯ್ಯ

ಜನರ ಸಮಸ್ಯೆಗಳಿಗಿಂತ ಟಿವಿ ಚಾನಲ್ ಗಳಿಗೆ ಗಂಡ ಹೆಂಡ್ತಿ ಜಗಳಗಳ ಬಗ್ಗೆಯೇ ಹೆಚ್ಚು ಆಸಕ್ತಿ: ಸಿಎಂ ವ್ಯಂಗ್ಯ ಫೇಕ್ ನ್ಯೂಸ್… Read More

September 21, 2024

10 ವರ್ಷದ ಬಾಲಕ ಹೃದಯಘಾತದಿಂದ ಸಾವು

ಹಾಸನ: 10 ವರ್ಷದ ಬಾಲಕನೊಬ್ಬ ಹೃದಯಘಾತದಿಂದ ಸಾವನ್ನಪ್ಪಿರುವ ಘಟನೆ ಹಾಸನದ ಅಲೂರು ತಾಲೂಕಿನ ಚಿನ್ನಪುರದಲ್ಲಿ ನಡೆದಿದೆ. ಮೃತ ಬಾಲಕ ಸಚಿನ್‌… Read More

September 21, 2024

ಮೈಸೂರು ದಸರಾ ಆನೆಗಳ ನಡುವೆ ಗುದ್ದಾಟ ಆತಂಕದಲ್ಲಿ ದಿಕ್ಕಾಪಾಲಾದ ಜನರು

ಮೈಸೂರು: ಶುಕ್ರವಾರ ( 20-09-2024 ) ರಾತ್ರಿ ದಸರಾ ಗಜಪಡೆಯ ಆನೆ ಧನಂಜಯ ಮತ್ತೊಂದು ಆನೆ ಕಂಜನ್ ಮೇಲೆ ಏಕಾಏಕಿ… Read More

September 21, 2024

ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಬೆಳೆಯನ್ನು ಬೃಹತ್ ಉದ್ಯಮವಾಗಿ ಬೆಳೆಯಾಗುತ್ತಿದೆ

ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More

September 20, 2024

BMTC ಬಸ್ ಚಲಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ : ಪ್ರಾಣಾಪಾಯದಿಂದ ಪಾರು

ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More

September 20, 2024

ಲೋಕಾ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More

September 20, 2024