ಬಿಪಿನ್‌ ರಾವತ್‌ ಇದ್ದ ಹೆಲಿಕಾಪ್ಟರ್‌ ದುರಂತಕ್ಕೆ ಪೈಲಟ್‌ ದೋಷವೇ ಕಾರಣ

Team Newsnap
1 Min Read

ಸೇನಾ ಪಡೆಗಳ ಮುಖ್ಯಸ್ಥ (ಸಿಡಿಎಸ್) ಜನರಲ್‌ ಬಿಪಿನ್‌ ರಾವತ್‌ ಅವರಿದ್ದ ಹೆಲಿಕಾಪ್ಟರ್‌ ದುರಂತಕ್ಕೆ ಪೈಲಟ್‌ ದೋಷವೇ ಕಾರಣ ಎಂದು ಮೂಲಗಳು ತಿಳಿಸಿವೆ.

ಡಿ 8 ರಂದು ತಮಿಳುನಾಡಿನ ಕೂನೂರು ಬಳಿ ರಷ್ಯಾ ಮೂಲದ ಎಂಐ-17ವಿ5 ಹೆಲಿಕಾಪ್ಟರ್‌ ಪತನಗೊಂಡಿತ್ತು.

ಸೇನಾ ಹೆಲಿಕಾಪ್ಟರ್‌ನಲ್ಲಿ ಪ್ರಯಾಣಿಸುತ್ತಿದ್ದ ಸಿಡಿಎಸ್‌‌ ಬಿಪಿನ್‌ ರಾವತ್‌, ಪತ್ನಿ ಮಧುಲಿಕಾ ಸೇರಿದಂತೆ 12 ಮಂದಿ ದುರಂತದಲ್ಲಿ ಸಾವನ್ನಪ್ಪಿದ್ದರು.

ಪೈಲಟ್‌ನ ಸಂಪೂರ್ಣ ನಿಯಂತ್ರಣದಲ್ಲಿರುವಾಗ ಹೆಲಿಕಾಪ್ಟರ್‌ ಅಜಾಗರೂಕತೆಯಿಂದ ಭೂಪ್ರದೇಶ ಅಥವಾ ನೀರು ಅಡಚಣೆಯಿಂದ ಈ ದುರಂತ ಸಂಭವಿಸಿದೆ ಎಂದು ಇಂಟರ್‌ನ್ಯಾಷನಲ್‌ ಏರ್‌ ಟ್ರಾನ್ಸ್‌ಪೋರ್ಟ್‌ ಅಸೋಸಿಯೇಷನ್‌ ತಿಳಿಸಿದೆ.

ಮೋಡ ಕವಿದ ವಾತಾವರಣದಲ್ಲಿ ಅಪಘಾತ ಸಂಭವಿಸಿದೆ. ಹೆಲಿಕಾಪ್ಟರ್‌ ಅಪಘಾತದ ಸಮಯದಲ್ಲಿ ಸಮರ್ಪಕವಾಗಿ ಕಾರ್ಯನಿರ್ವಹಿಸಲು ಆಗಿಲ್ಲ ಎಂದು ಹೇಳಿದೆ.

Share This Article
Leave a comment