ಮೈಸೂರು ಮತ್ತು ಮಂಗಳೂರು ನಡುವೆ ನೇರ ವಿಮಾನಯಾನ ಸೇವೆ ಆರಂಭವಾದ ಬೆನ್ನಲ್ಲೇ
ಅಂಚೆ ಇಲಾಖೆಯಿಂದ “Flight Special Cover” ಅನ್ನು ಮೈಸೂರು ಮತ್ತು ಮಂಗಳೂರು ನಿಂದ ರವಾನಿಸುವ ವ್ಯವಸ್ಥೆಯೂ ಆರಂಭವಾಯಿತು.
ಅಂಚೆ ಇಲಾಖೆಯ ASP ರಾಜುಕಾಳೇಶ್ವರ್ ರವರು ಮೊದಲ ವಿಮಾನದಲ್ಲಿ ಮಂಗಳೂರಿಗೆ ಪ್ರಯಾಣಿಸಿ, ಮೈಸೂರು ಅಂಚೆ ವಿಭಾಗದ ವಿಶೇಷ ಲಕೋಟೆಯನ್ನು ಮಂಗಳೂರು ಅಂಚೆ ವಿಭಾಗಕ್ಕೆ ತಲುಪಿಸಿ, ಮಂಗಳೂರು ಅಂಚೆ ವಿಭಾಗದ ವಿಶೇಷ ಲಕೋಟೆಯನ್ನು ಮೈಸೂರಿಗೆ ತಂದಿದ್ದಾರೆ.

ಎರಡೂ ಕಡೆಯಿಂದ ಪ್ರಯಾಣದ ಅವಧಿ ಕೇವಲ ಮೂರು ಘಂಟೆಗಳು.
ಎ.ಕೆ. ನಾಯ್ಕ್ (ಹಿರಿಯ ಅಂಚೆ ಅಧೀಕ್ಷಕರು, ಮೈಸೂರು ಅಂಚೆ ವಿಭಾಗ, ) ವಿಮಾನ ನಿಲ್ದಾಣದಲ್ಲಿ, ಸಂಸದ ಪ್ರತಾಪ್ ಸಿಂಹ, ಶಾಸಕ ಜಿ.ಟಿ.ದೇವೇಗೌಡ ಹಾಗು Air Alliance CEO ಹರ್ ಪ್ರೀತ್ ಸಿಂಗ್ ಅವರೊಂದಿಗೆ ASP ರಾಜುಕಾಳೇಶ್ವರ್ ರವರಿಗೆ ವಿಶೇಷ ಲಕೋಟೆಯುಳ್ಳ ಬ್ಯಾಗನ್ನು ಹಸ್ತಾಂತರಿಸಿದರು.

ಸಿಇಒ ಹರ್ ಪ್ರೀತ್ ಸಿಂಗ್
ರಾಜುಕಾಳೇಶ್ವರ್ ರವರಿಗೆ ಬೋರ್ಡಿಂಗ್ ಪಾಸ್ ಅನ್ನು ಹಸ್ತಾಂತರಿಸಿದರು.
ಈ ವಿಶೇಷ ಲಕೋಟೆಗಳು ಮೈಸೂರು ಮತ್ತು ಮಂಗಳೂರು ದಿನಾಂಕ ಮುದ್ರೆಗಳಲ್ಲದೆ (Pictorial Cancelation ಸಹ) ASP ರಾಜುಕಾಳೇಶ್ವರ್ ರವರ ಸಹಿಯನ್ನು ಹೊಂದಿರತ್ತದೆ.
ಮೈಸೂರು ಪ್ರದಾನ ಅಂಚೆ ಕಛೇರಿಯ Philately Bureau ದಲ್ಲಿ ಮಾರಾಟಕ್ಕೆ ಲಭ್ಯವಿರುತ್ತದೆ. ಈ ಮೂಲಕ ಮೈಸೂರು ಅಂಚೆ ವಿಭಾಗ ಒಂದು ವಿಶೇಷ ಸಂದರ್ಭದ ಭಾಗಿ ಗಮನಸೆಳೆದಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ