ಬೆಂಗಳೂರು: ರಾಜ್ಯದಲ್ಲಿ ನಂದಿನಿ ಹಾಲಿನ ದರವನ್ನು 5 ರೂಪಾಯಿ ಹೆಚ್ಚಿಸುವ ಪ್ರಕ್ರಿಯೆ ನಿರ್ಧಾರಗೊಂಡಿದ್ದು, ಈ ಬಗ್ಗೆ ಸರ್ಕಾರಕ್ಕೆ ಈಗಾಗಲೇ ಮಾಹಿತಿ ನೀಡಲಾಗಿದೆ ಎಂದು ಕೆಎಂಎಫ್ (ಕರ್ನಾಟಕ ಹಾಲು ಮಹಾಮಂಡಳಿ) ಅಧ್ಯಕ್ಷ ಭೀಮಾನಾಯ್ಕ್ ಸುಳಿವು ನೀಡಿದ್ದಾರೆ.
ಹಾಲಿನ ದರ ಏರಿಕೆ ಕುರಿತ ಮುಖ್ಯ ಅಂಶಗಳು:
- ನಂದಿನಿ ಹಾಲಿನ ದರ ಹೆಚ್ಚಳಕ್ಕೆ ಒತ್ತಡವಿದ್ದು, ಈ ಬಗ್ಗೆ ಈಗಾಗಲೇ ಸಭೆ ನಡೆಸಿ ಚರ್ಚಿಸಲಾಗಿದೆ.
- ಹಾಲು ಒಕ್ಕೂಟಗಳ ಸಭೆಯಲ್ಲಿ 5 ರೂಪಾಯಿ ಹೆಚ್ಚಳ ಮಾಡುವ ಬಗ್ಗೆ ಒಪ್ಪಿಗೆಯಿದೆ.
- ಹೆಚ್ಚುವರಿ ಹಣವನ್ನು ರೈತರಿಗೆ ನೀಡುವ ಬಗ್ಗೆ ಚರ್ಚೆಯಾಗಿದೆ.
ಇದನ್ನು ಓದಿ –ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಭ್ರಷ್ಟಾಚಾರ ಆರೋಪ: ಲೋಕಾಯುಕ್ತ, CBI, EDಗೆ ದೂರು
ರಾಜ್ಯ ಸರ್ಕಾರಕ್ಕೆ ಈ ಮಾಹಿತಿಯನ್ನು ನೀಡಲಾಗಿದ್ದರೂ, ದರ ಹೆಚ್ಚಳ ಕುರಿತು ಅಂತಿಮ ನಿರ್ಧಾರ ಇನ್ನೂ ಹೊರಬಂದಿಲ್ಲ ಎಂದು ಕೆಎಂಎಫ್ ಅಧ್ಯಕ್ಷರು ತಿಳಿಸಿದ್ದಾರೆ.


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು