Categories: Main News

ಬಹು ನಿರೀಕ್ಷಿತ ಚಿತ್ರ “ಆರ್‌ಆರ್‌ಆರ್’ ಬಿಡುಗಡೆ ಮತ್ತೆ ಮುಂದೂಡಿಕೆ

ಜನಪ್ರಿಯ ಚಿತ್ರನಿರ್ದೇಶಕ ಎಸ್. ಎಸ್. ರಾಜಮೌಳಿ ನಿರ್ದೇಶನದ ಬಹುನಿರೀಕ್ಷಿತ “ಆರ್‌ಆರ್‌ಆರ್’ ಚಿತ್ರವು ಚಿತ್ರರಸಿಕರು ಅಂದುಕೊಂಡಂತೆ ಮುಂದಿನ ತಿಂಗಳು ಬಿಡುಗಡೆಯಾಗುತ್ತಿಲ್ಲ. ಕಾರಣ ಹೆಮ್ಮಾರಿ ಕೊರೊನಾ ಸಾಂಕ್ರಾಮಿಕ ರೋಗ.
ದೇಶ-ವಿದೇಶಗಳಲ್ಲಿ ಅಸಂಖ್ಯಾತ ಸಿನಿಪ್ರಿಯರಲ್ಲಿ ಭಾರಿ ಕುತೂಹಲ ಮೂಡಿಸಿರುವ “ಆರ್‌ಆರ್‌ಆರ್” ಚಿತ್ರ ಬರುವ ಅಕ್ಟೋಬರ್ ೨೧ರಂದು ಬಿಡುಗಡೆಯಾಗಲಿದೆ ಎಂಬ ಸುದ್ದಿ ವ್ಯಾಪಕವಾಗಿ ಹಬಿ್ಬತ್ತು. ಈ ನಿರೀಕ್ಷೆ ಈಗ ಹುಸಿಯಾಗಿದೆ.


ಚಿತ್ರದ ಬಿಡುಗಡೆ ದಿನಾಂಕವನ್ನು ಮುಂದೂಡಿರುವುದಾಗಿ ಚಿತ್ರತಂಡ ಇಂದು ಟ್ವಿಟರ್‌ನಲ್ಲಿ ತಿಳಿಸಿದೆ. ಈ ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದೆ. ನಿರ್ಮಾಣೋತ್ತರ ಕಾರ್ಯಗಳು ಮುಗಿದಿರುವ ಮಾಹಿತಿಯೂ ಇದೆ.


ಮುಂದಿನ ಅಕ್ಟೋಬರ್ ತಿಂಗಳಲ್ಲಿ “ಆರ್‌ಆರ್‌ಆರ್” ಬಿಡುಗಡೆಗೆ ಎಲ್ಲ ರೀತಿಯ ಸಿದ್ಧತೆಗಳು ನಡೆದಿತ್ತು. ಅದರೆ ಕೊರೊನಾ ವೈರಸ್ ಸಾಂಕ್ರಾಮಿಕ ರೋಗದಿಂದ ಚಿತ್ರ ಬಿಡುಗಡೆ ಮಾಡಲಿಕ್ಕೆ ತೊಂದರೆಗಳು ಎದುರಾಗಲಿವೆ. ವಿಶ್ವದ ಬಹುತೇಕ ಚಿತ್ರಮಂದಿರಗಳು ಮುಚ್ಚಲ್ಪಟ್ಟಿವೆ.


ಹಾಗಾಗಿ ಸದ್ಯಕ್ಕೆ ಚಿತ್ರದ ಬಿಡುಗಡೆ ದಿನಾಂಕ ಪ್ರಕಟಿಸುತ್ತಿಲ್ಲ. ಅನಿವಾರ್ಯವಾಗಿ ಮುಂದಕ್ಕೆ ಹಾಕಲಾಗಿದೆ. ಚಿತ್ರರಂಗ ಸಹಜ ಸ್ಥಿತಿಗೆ ಮರಳಿದ ನಂತರ ಚಿತ್ರದ ಬಿಡುಗಡೆ ದಿನವನ್ನು ಆದಷ್ಟು ಬೇಗ ಪ್ರಕಟಿಸುತ್ತೇವೆ ಎಂದು ಚಿತ್ರ ತಂಡ ಹೇಳಿದೆ.


೨೦ನೇ ಶತಮಾನದ ಇಬ್ಬರು ಸ್ವಾತಂತ್ರ್ಯ ಹೋರಾಟಗಾರರಾದ ಅಲ್ಲೂರಿ ಸೀತಾರಾಮರಾಜು ಮತ್ತು ಕೋಮರಂ ಭೀಮ್ ಜೀವನದ ಕಥೆ ಆಧರಿಸಿ ಆರ್‌ಆರ್‌ಆರ್ ಚಿತ್ರ ಸಿದ್ಧವಾಗಿದೆ. ಡಿವಿವಿ ಎಂಟರ್‌ಟೈನ್‌ಮೆAಟ್ ಸಂಸ್ಥೆಯು ಅಂದಾಜು ೪೦೦ ಕೋಟಿ ರೂ. ವೆಚ್ಚದಲ್ಲಿ ಈ ಚಿತ್ರ ನಿರ್ಮಿಸಿದೆ. ರಾಮ್‌ಚರಣ್ ಅಲ್ಲೂರಿ ಸೀತಾರಾಮರಾಜು ಪಾತ್ರದಲ್ಲಿ, ಎನ್‌ಟಿಆರ್ ಜ್ಯೂನಿಯರ್ ಕೋಮರಂ ಭೀಮ್ ಪಾತ್ರದಲ್ಲಿ ನಟಿಸಿದ್ದಾರೆ.

Team Newsnap
Leave a Comment
Share
Published by
Team Newsnap
Tags: #rrr

Recent Posts

ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ

ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More

May 4, 2024

ಶಕುನಿ ಪಾತ್ರಧಾರಿ ವೇದಿಕೆಯ ಮೇಲೆಯೇ ಕುಸಿದು ಬಿದ್ದು ಸಾವು

ನಿನ್ನೆ ರಾತ್ರಿ 72ರ ವಯಸ್ಸಿನ ಎನ್.ಮುನಿಕೆಂಪಣ್ಣ ಶಕುನಿ (Shakuni) ವೇಷದಲ್ಲಿ ವೇದಿಕೆಗೆ ಬಂದು ಪಾತ್ರ ನಿರ್ವಹಿಸುತ್ತಲೇ ವೇದಿಕೆಯ ಮೇಲೆ ಕುಸಿದು… Read More

May 4, 2024

ಬಿಜೆಪಿಯವರು ಏಕೆ ಪ್ರಜ್ವಲ್ ರೇವಣ್ಣ ಕೇಸ್ ಬಗ್ಗೆ ಮಾತನಾಡುತ್ತಿಲ್ಲ ?ಡಿ.ಕೆ.ಶಿವಕುಮಾರ್

ಬಾಗಲಕೋಟೆ : ಡಿಸಿಎಂ ಡಿ.ಕೆ.ಶಿವಕುಮಾರ್ , ಬಿಜೆಪಿ ಮುಖಂಡರು ಪ್ರಜ್ವಲ್ ರೇವಣ್ಣ ಬಗ್ಗೆ ಯಾಕೆ ಮಾತನಾಡುತ್ತಿಲ್ಲ ? ಹೆಣ್ಣುಮಕ್ಕಳಿಗೆ ಸಾಂತ್ವನ… Read More

May 4, 2024

ರೇವಣ್ಣ ಅಪಹರಣ ಕೇಸ್‌ : ಎಸ್‌ಐಟಿ ವಿಶೇಷ ತಂಡದಿಂದ 40 ಕಡೆ ರೇಡ್‌

ಬೆಂಗಳೂರು : ನೆನ್ನೆ ವಿಶೇಷ ತನಿಖಾ ತಂಡ (ಎಸ್‌ಐಟಿ) , ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಂದ ಲೈಂಗಿಕ ಶೋಷಣೆಗೆ ಒಳಗಾಗಿದ್ದಳು… Read More

May 4, 2024

ಕ್ರೇಜಿವಾಲ್ ಗೆ ಮಧ್ಯಂತರ ಜಾಮೀನು ಪರಿಗಣನೆಗೆ ಸುಪ್ರೀಂ ಸೂಚನೆ

ನವದೆಹಲಿ : ಲೋಕಸಭೆ ಚುನಾವಣೆಯನ್ನು ಹಿನ್ನಲೆಯಲ್ಲಿ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌… Read More

May 3, 2024

ಬಿಜೆಪಿ ಜೊತೆಗಿನ ಮೈತ್ರಿ ಸದ್ಯಕ್ಕೆ ನನಗೆ ಮುಖ್ಯ ಅಲ್ಲ: ಎಚ್ ಡಿ ಕೆ

ರಾಯಚೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತೀವ್ರ ಪೇಚಿಗೆ ಸಿಲುಕಿರುವ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ… Read More

May 3, 2024