Main News

ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ರಾಜೀನಾಮೆ

  • ಕೆಲವೇ ತಿಂಗಳ ಅಂತರದಲ್ಲಿ ರಾಜೀನಾಮೆ ನೀಡಿದ ಬಿಜೆಪಿಯ 4 ನೇ ಸಿಎಂ
  • 2022 ರ ಡಿಸೆಂಬರ್ ಗೆ ಗುಜರಾತ್ ಚುನಾವಣೆ; ಬಿಜೆಪಿ ನಾಯಕತ್ವ ಬದಲಾವಣೆಗೆ ಮುನ್ನುಡಿ

ವರಿಷ್ಠ ರ ಆಶಯದಂತೆ ಗುಜರಾತ್ ಮುಖ್ಯಮಂತ್ರಿ ಸ್ಥಾನಕ್ಕೆ ವಿಜಯ್ ರೂಪಾನಿ ಶನಿವಾರ‌ ದಿಢೀರ್ ರಾಜೀನಾಮೆ ನೀಡಿದ್ದಾರೆ.

2016 ಆಗಸ್ಟ್‌ 7 ರಂದು ಅಧಿಕಾರ ವಹಿಸಿಕೊಂಡಿದ್ದ ರೂಪಾನಿ
ಇಂದು ಮಧ್ಯಾಹ್ನ ರಾಜ್ಯಪಾಲರ ನಿವಾಸಕ್ಕೆ ತೆರಳಿ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರ ತವರು ರಾಜ್ಯದಲ್ಲಿ ಮುಂದಿನ ವರ್ಷ ಅಂದರೆ ಡಿಸೆಂಬರ್ 2022ರ ಡಿಸೆಂಬರ್ ನಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ರೂಪಾನಿ ರಾಜೀನಾಮೆ ನೀಡಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ.

ರಾಜೀನಾಮೆ ಬಳಿಕ ಮಾತನಾಡಿದ ವಿಜಯ್ ರೂಪಾನಿ ಅವರು, ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರದ ನಾಯಕರಿಗೆ ಧನ್ಯವಾದ ತಿಳಿಸಿದ್ದಾರೆ.

ಗುಜರಾತ್ ಪ್ರಗತಿಗೆ ಹೊಸ ನಾಯಕತ್ವ ?

ಗುಜರಾತ್ ಪ್ರಗತಿಗೆ ಹೊಸ ನಾಯಕತ್ವ ಬರಬೇಕೆಂದು ನಾನು ನಂಬುತ್ತೇನೆ. ಹೀಗಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಹೇಳಿದ್ದಾರೆ.

ಪಕ್ಷಕ್ಕಾಗಿ ನನ್ನ ಕೆಲಸ : ರೂಪಾನಿ :

ಬಿಜೆಪಿ ಸಿದ್ಧಾಂತ ಆಧರಿತ ಪಕ್ಷ, ಹೈಕಮಾಂಡ್ ಆದೇಶದಂತೆ ನಮ್ಮ ಪಕ್ಷದ ಕಾರ್ಯಕರ್ತರ ಉದ್ದೇಶಗಳು ಬದಲಾಗುತ್ತಿರುವುದು ಸಂಪ್ರದಾಯವಾಗಿದೆ. ಬಿಜೆಪಿ ಕಾರ್ಯಕರ್ತನಾಗಿ ನನ್ನ ಕೆಲಸವನ್ನು ಮುಂದುವರಿಸುತ್ತೇನೆ ಎಂದು ರೂಪಾನಿಯವರು ಹೇಳಿದ್ದಾರೆ.

ವಿಜಯ್ ರೂಪಾನಿಯವರ ರಾಜೀನಾಮೆಗೆ ನಿಖರ ಕಾರಣ ಏನೆಂಬುದು ಸ್ಪಷ್ಟವಾಗಿಲ್ಲ. ಇತ್ತೀಚೆಗೆ ರಾಜೀನಾಮೆ ನೀಡಿದ ಬಿಜೆಪಿ ಮುಖ್ಯಮಂತ್ರಿಗಳ ಪೈಕಿ ವಿಜಯ್ ರೂಪಾನಿಯವರು ನಾಲ್ಕನೇಯವರಾಗಿದ್ದಾರೆ. ಜುಲೈನಲ್ಲಿ ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ನೀಡಿದ್ದರು. ಅಲ್ಲದೆ ತ್ರಿವೇಂದ್ರ ರಾವತ್ ಅವರನ್ನು ಬದಲಾಯಿಸಿದ ನಾಲ್ಕು ತಿಂಗಳ ಬಳಿಕ ತಿರಾತ್ ಸಿಂಗ್ ರಾವತ್ ಉತ್ತರಾಖಂಡ್‍ನ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

Team Newsnap
Leave a Comment
Share
Published by
Team Newsnap

Recent Posts

SIT ಯಿಂದ ಸಂಸದ ಪ್ರಜ್ವಲ್ ರೇವಣ್ಣಗೆ ಲುಕ್ ಔಟ್ ನೋಟಿಸ್ ಜಾರಿ

ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More

May 2, 2024

ಪ್ರಜ್ವಲ್ ರೇವಣ್ಣನ ಮಾಜಿ ಕಾರು ಚಾಲಕ ‘ಕಾರ್ತಿಕ್’ ನಾಪತ್ತೆ

ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More

May 2, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More

May 2, 2024

ಪಿಎಚ್ಡಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಅನುಮಾನಾಸ್ಪದ ಸಾವು

ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್‌ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More

May 2, 2024

ಪ್ರೀತಿಯೆಂದರೆ…. ಇಷ್ಟೇನಾ

(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More

May 1, 2024

2024ರ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ತಂಡ ಪ್ರಕಟ

ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್‍ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More

April 30, 2024