Categories: Main News

ಬೇಂದ್ರೆ ಕವಿತೆಯ ಪ್ರಣಯ ಸಾರ: ಈಗ ಪ್ರೀ ವೆಡ್ಡಿಂಗ್ ಫೋಟೋ ಶೂಟ್ ಮಾಡಿಸಿದ ಯುವ ಜೋಡಿ

ಜ್ಞಾನಪೀಠ ಪ್ರಶಸ್ತಿ ವಿಜೇತ, ಕನ್ನಡದ ವರಕವಿ ದ.ರಾ. ಬೇಂದ್ರೆಯವರ ಬದುಕನ್ನು ವಸ್ತುವಾಗಿರಿಸಿಕೊಂಡು ಮಾಡಲಾದ ಪ್ರಿ-ವೆಡ್ಡಿಂಗ್ ಫೋಟೋ ಶೂಟ್ ಈಗ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿದೆ.

ಯುವಜೋಡಿ ದ.ರಾ. ಬೇಂದ್ರೆಯವರ ಕವಿತೆಗಳಿಂದ ಆಯ್ದ ಪ್ರಣಯದ ಸಾರವನ್ನು ತಂದು ಛಾಯಾಚಿತ್ರಗಳ ಮೂಲಕ ಉತ್ತರ ಕರ್ನಾಟಕದ ಜೀವನ ಶೈಲಿಯನ್ನು ತೋರಿಸಿದ್ದಾರೆ.

ಏಪ್ರಿಲ್ 23 ರಂದು ವಿವಾಹವಾಗುತ್ತಿರುವ ಧಾರವಾಡದ ಚೇತನಾ ದೇಸಾಯಿ ಮತ್ತು ನಿಖಿಲ್ ಮಗ್ಗಾವಿ ಜೋಡಿಗೆ ಬೇಂದ್ರೆ ಹಾಗೂ ಅವರ ಕವಿತೆಗಳನ್ನಿಟ್ಟುಕೊಂಡು ಫೋಟೋಶೂಟ್ ಮಾಡಲು ಅನೇಕ ಕಾರಣಗಳಿವೆ.

ಚೇತನಾ ಧಾರವಾಡದ ಸಾಧಂಕೇರಿಯಲ್ಲಿರುವ ಬೇಂದ್ರೆಯವರ ಮನೆಯ ನೆರೆಯ ನಿವಾಸಿಯಾಗಿದ್ದಾರೆ. ಅವರ ಕುಟುಂಬವು ತಲೆಮಾರುಗಳಿಂದ ಬೇಂದ್ರೆಯವರ ಕುಟುಂಬದೊಂದಿಗೆ ನಿಕಟ ಸಂಬಂಧ ಹೊಂದಿದೆ.

ಫೋಟೋ ಥೀಮ್ ಬೇಂದ್ರೆಯವರ ಕವಿತೆಗಳ ದಿನ ದಿನದ ಬಳಕೆಯನ್ನು ಪ್ರತಿನಿಧಿಸುತ್ತದೆ. ಅತ್ಯಂತ ವಿಶಿಷ್ಟ ಸಂಗತಿ ಎಂದರೆ ಬೇಂದ್ರೆಯವರು ಬಳಸುತ್ತಿದ್ದ ಸಾಂಪ್ರದಾಯಿಕ ಟೋಪಿ, ಛತ್ರಿ ಮತ್ತು ಗ್ರಾಮೋಫೋನ್‌ಗಳನ್ನು ಚಿತ್ರೀಕರಣಕ್ಕಾಗಿ ಕುಟುಂಬದಿಂದ ಎರವಲು ಪಡೆಯಲಾಯಿತು.

ಯುವ ಆರ್ಟ್ ಸ್ಟುಡಿಯೋದ ಸಂಸ್ಥಾಪಕ ಮತ್ತು ಧಾರವಾಡದ ಛಾಯಾಗ್ರಾಹಕ ಹರ್ಷದ್ ಉದಯ್ ಕಾಮತ್ ಅವರ ಅನೇಕ ಥೀಮ್ ಆಧಾರಿತ ಫೊಟೋಶೂಟ್ ಗಳು ವೈರಲ್ ಆದ ನಂತರ ಪ್ರಿ-ವೆಡ್ಡಿಂಗ್ ಫೋಟೋಶೂಟ್ ಮಾಡಿಸುವವರಿಗೆ ನೆಚ್ಚಿನ ಛಾಯಾಗ್ರಾಹಕ ಎನಿಸಿದ್ದಾರೆ.

“ಉತ್ತರ ಕರ್ನಾಟಕದ ಜೀವನವನ್ನು ಪ್ರದರ್ಶಿಸುವ ಥೀಮ್ ಮಾಡಲು ಜೋಡಿಯು ನಿರ್ಧರಿಸಿದ್ದರು. ಚೇತನಾ ಬೇಂದ್ರೆ ಅಜ್ಜನ ನೆರೆಮನೆಯವರಾಗಿ ದ್ದರಿಂದ ನಾವು ಬೇಂದ್ರೆ ಬರೆದ ಕವಿತೆಗಳ ಆಧಾರದ ಮೇಲೆ ಥೀಮ್ ಆಯ್ಕೆ ಮಾಡಲು ನಿರ್ಧರಿಸಿದೆವು ಎನ್ನುತ್ತಾರೆ ಕಾಮತ್.‌

ಈ ತಂಡವು ಬೇಂದ್ರೆ ಅವರ ಪ್ರಸಿದ್ಧ ಕವಿತೆಗಳಾದ “ನಾನು ಬಡವಿ, ಆತ ಬಡವ, ಒಲವೆ ನಮ್ಮ ಬದುಕು” ಸೇರಿದಂತೆ ಅನೇಕ ಕವಿತೆಗಳನ್ನು ಆಯ್ಕೆ ಮಾಡಿಕೊಂಡಿದೆ. “ನಾನು ಈ ಹಿಂದೆ ಪ್ರಿ-ವೆಡ್ಡಿಂಗ್ ಫೋಟೋಶೂಟ್ ಗಾಗಿ ಹಳ್ಳಿ ಆಧಾರಿತ ಥೀಮ್ ಅನ್ನು ಮಾಡಿದ್ದೆ. ಆದರೆಸಾಹಿತ್ಯ ಜಗತ್ತಿನ ವ್ಯಕ್ತಿಯನ್ನು ವಸ್ತುವಾಗಿಸಿಕೊಳ್ಳಲು ಯೋಜಿಸಿದ್ದು ಇದು ನನಗೂ ಹೊಸ ಸಂಗತಿಯಾಗಿದೆ. ಅಲ್ಲದೆ ಬೇಂದ್ರೆಯವರು ಸ್ವತಃ ಬಳಸಿದ್ದ ವಸ್ತುಗಳನ್ನು ನಮ್ಮ ಈ ಇವೆಂಟ್ ಗಾಗಿ ಬಳಸಲು ಅನುಮತಿಸಿದ್ದು ದೊಡ್ಡ ವಿಚಾರವಾಗಿದೆ ಹೇಳಿದರು.

ಛಾಯಾಚಿತ್ರಗಳಿಗೆ ಸೋಷಿಯಲ್ ಮೀಡಿಯಾದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾದ ನಂತರ ಜೋಡಿ ಮತ್ತು ಅವರ ಕುಟುಂಬ ಫೋಟೋಗ್ರಫಿಯ ಕುರಿತು ಸಂತಸ ವ್ಯಕ್ತಪಡಿಸಿದ್ದಾರೆ.

“ನಾವು ಬೆಂದ್ರೆ ಅವರ ಮನೆಯ ನೆರೆಮನೆಯವರಾಗಿದ್ದು ಸಾಧಕನೇರಿಯ ನಮ್ಮ ಕುಟುಂಬಗಳು ತಲೆಮಾರುಗಳಿಂದ ಆತ್ಮೀಯ ಒಡನಾಟ ಹೊಂದಿವೆ. ನಾನು ಬೇಂದ್ರೆ ಅಜ್ಜನ ಸೊಸೆಯನ್ನು ಕಾಕು ಎಂದು ಸಂಬೋಧಿಸುತ್ತೇನೆ. ಬಾಲ್ಯದಲ್ಲಿ ನಾನು ಬೇಂದ್ರೆ ಅಜ್ಜನ ಬಗ್ಗೆ ಹೇಳುವ ಅಥವಾ ಚರ್ಚಿಸುವ ಕಥೆಗಳಿಂದ ಸ್ಫೂರ್ತಿ ಪಡೆದಿದ್ದೇನೆ. ಆದ್ದರಿಂದ ಬೇಂದ್ರೆ ಅಜ್ಜನಿಂದ ಸ್ಫೂರ್ತಿ ಪಡೆದು ಫೋಟೋಶೂಟ್ ಮಾಡಿಸಿಕೊಂಡಿದ್ದು ಹೆಮ್ಮೆಯ ಭಾವನೆ ತಂದಿದೆ.” ಚೇತನಾ ದೇಸಾಯಿ ಹೇಳಿದರು.

Team Newsnap
Leave a Comment
Share
Published by
Team Newsnap

Recent Posts

ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ

2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್​ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More

May 18, 2024

SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ

ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More

May 17, 2024

ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More

May 17, 2024

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್‌ನಲ್ಲಿ ಘೋಷಣೆ… Read More

May 16, 2024

ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More

May 16, 2024

ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ

ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More

May 16, 2024