ಕೊವೀಡ್ಗೆ ಬಲಿಯಾದ ತಂದೆಯ ಅಂತ್ಯಸಂಸ್ಕಾರದ ವೇಳೆ ಹೃದಯಾಘಾತಕ್ಕೆ ಒಳಗಾಗಿ ಮಗನೂ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ದಕ್ಷಿಣ ಕನ್ನಡದ ಬಂಟ್ವಾಳ ತಾಲೂಕಿನ ಪುಣಚ ಗ್ರಾಮದಲ್ಲಿ ಜರುಗಿದೆ
ಬೈಲುಗುತ್ತು ಕೊಪ್ಪಳ ನಿವಾಸಿ ನಿವೃತ್ತ ಪ್ರೊಫೆಸರ್ ಭುಜಂಗ ಶೆಟ್ಟಿಯವರಿಗೆ ಇತ್ತೀಚಿಗೆ ಕೊರೊನಾ ಸೋಂಕು ತಗುಲಿತ್ತು. ಆದರೆ ಅವರು ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ರಾತ್ರಿ ಮೃತಪಟ್ಟಿದ್ದರು.
ಬುಧವಾರ ಅಂತ್ಯಸಂಸ್ಕಾರದ ವಿಧಿ ವಿಧಾನಗಳು ಪುಣಚದ ಮನೆಯಲ್ಲಿ ಕೊವೀಡ್ ನಿಯಾಮಾವಳಿಯಂತೆ ನಡೆಸಲಾಗುತ್ತಿತ್ತು. ಈ ಸಂದರ್ಭ ಅವರ ಪುತ್ರ ಶೈಲೇಶ್ ಭಾಗಿಯಾಗಿದ್ದರು. ಅಂತಿಮ ಸಂಸ್ಕಾರದ ಪ್ರಕ್ರಿಯೆಗಳು ನಡೆಯುತ್ತಿರುವಾಗಲೇ ಶೈಲೇಶ್ ಆರೋಗ್ಯದಲ್ಲಿ ಏರುಪೇರು ಆಯಿತು.
ಮೃತ ಶೈಲೇಶ್ ವಿದೇಶದಲ್ಲಿ ಉದ್ಯೋಗದಲ್ಲಿದ್ದೂ ಇತ್ತೀಚೆಗಷ್ಟೇ ಊರಿಗೆ ಬಂದಿದ್ದರು. ಮೃತ ಶೈಲೇಶ್ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
More Stories
ಇಂದಿನಿಂದ ರಾಜ್ಯದಾದ್ಯಂತ ಕೋವಿಡ್ ವ್ಯಾಕ್ಸಿನೇಷನ್ ಆರಂಭ
ಕೋವಿಡ್ ಬಗ್ಗೆ ಜಿಲ್ಲೆಯ ಜನರು ಮುಂಜಾಗ್ರತೆವಹಿಸಿ: ಜಿಲ್ಲಾಧಿಕಾರಿ ಡಾ ಕೆ.ವಿ.ರಾಜೇಂದ್ರ
ಮಾಸ್ಕ್ ಧರಿಸಿ ಬಸ್ ಗಳಲ್ಲಿ ಪ್ರಯಾಣಿಸಿ : ಸಚಿವ ರಾಮಲಿಂಗಾ ರೆಡ್ಡಿ