ಕ್ಷುಲ್ಲಕ ಕಾರಣಕ್ಕೆ ಅಜ್ಜಿ, ಮೊಮ್ಮಗಳ ನಡುವೆ ಜಗಳ ಇಬ್ಬರ ಸಾವಿನಲ್ಲಿ ಅಂತ್ಯವಾದ ಘಟನೆ ಬೆಂಗಳೂರಿನಲ್ಲಿ ಜರುಗಿದೆ
ಮಮತ(25) ಮತ್ತು ಜಯಮ್ಮ(70) ಮೃತ ದುರ್ದೈವಿಗಳು.
ಇತ್ತೀಚೆಗೆ ಮೊಮ್ಮಗಳ ಎರಡು ತಿಂಗಳ ಮಗು ಮೃತಪಟ್ಟಿತ್ತು .ನಿನ್ನೆ ಸಂಜೆ ಕ್ಷುಲ್ಲಕ ಕಾರಣಗಳಿಗೆ ಅಜ್ಜಿ ಮತ್ತು ಮೊಮ್ಮಗಳ ನಡುಗೆ ಜಗಳ ನಡೆದಿದೆ.
ಅಜ್ಜಿ ಮೇಲೆ ಕೋಪಗೊಂಡ ಮೊಮ್ಮಗಳು ಅಜ್ಜಿ ಮೇಲೆ ಹಲ್ಲೆ ಮಾಡಿದ್ದಾರೆ. ಈ ವೇಳೆ ಅಜ್ಜಿಯ ತಲೆ ಮನೆ ಗೋಡೆಗೆ ತಗುಲಿ ತಲೆಯಿಂದ ತೀವ್ರ ರಕ್ತಸ್ರಾವವಾಗಿ ಅಜ್ಜಿ ಸ್ಥಳದಲ್ಲೇ ಮೃತ ಪಟ್ಟಿದ್ದಾರೆ.
ಜ್ಞಾನ ಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲೊಂದು ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಅಜ್ಜಿ ಮೊಮ್ಮಗಳ ನಡುವೆ ಕ್ಷುಲ್ಲಕ ಕಾರಣಗಳಿಗೆ ನಡೆದ ಜಗಳ ಕೊನೆಗೂ ಇಬ್ಬರ ಸಾವಿನಲ್ಲಿ ಅಂತ್ಯವಾಗಿದೆ.
ಅಜ್ಜಿ ಸಾವಿನ ನಂತರ ಹಲ್ಲೆ ಮಾಡಿದ್ದ ಮೊಮ್ಮಗಳು ಕೂಡ ನೇಣಿಗೆ ಶರಣಾಗಿದ್ದಾರೆ. ಮೃತ ಯುವತಿಯ ಪತಿ ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ.
ಜ್ಞಾನ ಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ
ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ