ಕ್ಷುಲ್ಲಕ ಕಾರಣಕ್ಕೆ ಅಜ್ಜಿ, ಮೊಮ್ಮಗಳ ನಡುವೆ ಜಗಳ ಇಬ್ಬರ ಸಾವಿನಲ್ಲಿ ಅಂತ್ಯವಾದ ಘಟನೆ ಬೆಂಗಳೂರಿನಲ್ಲಿ ಜರುಗಿದೆ
ಮಮತ(25) ಮತ್ತು ಜಯಮ್ಮ(70) ಮೃತ ದುರ್ದೈವಿಗಳು.
ಇತ್ತೀಚೆಗೆ ಮೊಮ್ಮಗಳ ಎರಡು ತಿಂಗಳ ಮಗು ಮೃತಪಟ್ಟಿತ್ತು .ನಿನ್ನೆ ಸಂಜೆ ಕ್ಷುಲ್ಲಕ ಕಾರಣಗಳಿಗೆ ಅಜ್ಜಿ ಮತ್ತು ಮೊಮ್ಮಗಳ ನಡುಗೆ ಜಗಳ ನಡೆದಿದೆ.
ಅಜ್ಜಿ ಮೇಲೆ ಕೋಪಗೊಂಡ ಮೊಮ್ಮಗಳು ಅಜ್ಜಿ ಮೇಲೆ ಹಲ್ಲೆ ಮಾಡಿದ್ದಾರೆ. ಈ ವೇಳೆ ಅಜ್ಜಿಯ ತಲೆ ಮನೆ ಗೋಡೆಗೆ ತಗುಲಿ ತಲೆಯಿಂದ ತೀವ್ರ ರಕ್ತಸ್ರಾವವಾಗಿ ಅಜ್ಜಿ ಸ್ಥಳದಲ್ಲೇ ಮೃತ ಪಟ್ಟಿದ್ದಾರೆ.
ಜ್ಞಾನ ಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲೊಂದು ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಅಜ್ಜಿ ಮೊಮ್ಮಗಳ ನಡುವೆ ಕ್ಷುಲ್ಲಕ ಕಾರಣಗಳಿಗೆ ನಡೆದ ಜಗಳ ಕೊನೆಗೂ ಇಬ್ಬರ ಸಾವಿನಲ್ಲಿ ಅಂತ್ಯವಾಗಿದೆ.
ಅಜ್ಜಿ ಸಾವಿನ ನಂತರ ಹಲ್ಲೆ ಮಾಡಿದ್ದ ಮೊಮ್ಮಗಳು ಕೂಡ ನೇಣಿಗೆ ಶರಣಾಗಿದ್ದಾರೆ. ಮೃತ ಯುವತಿಯ ಪತಿ ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ.
ಜ್ಞಾನ ಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- ರಾಜ್ಯದ ಹವಾಮಾನ ವರದಿ (Weather Report) 22-05-2022
- ಮುಂಬೈ ಇಂಡಿಯನ್ ಗೆ ರೋಚಕ ಗೆಲುವು – RCB ಸೆಮಿಫೈನಲ್ಸ್ ಗೆ DC ತಂಡ ಟೂರ್ನಿಯಿಂದ ಹೊರಕ್ಕೆ
- ಲೀಯಾ – ಪೀಟರ್ ‘ ಬರ್ತ್ ಡೇ’ ಶಾಪಿಂಗ್ಗೆ ಹೋಗಿದ್ದ ಪ್ರೇಮಿಗಳು : ಯುವಕನಿಂದ ಮಾಹಿತಿ
- ದೇಶದ ಜನತೆಗೆ ಸಿಹಿ ಸುದ್ದಿ:ಪೆಟ್ರೋಲ್, ಗ್ಯಾಸ್, ಸಿಮೆಂಟ್, ಗೊಬ್ಬರ, ಪ್ಲಾಸ್ಟಿಕ್, ಉಕ್ಕು ದರ ಇಳಿಕೆ
- ಕೇಂದ್ರ ಸರ್ಕಾರದಿಂದ ಅಬಕಾರಿ ಸುಂಕ ಇಳಿಕೆ! ಪೆಟ್ರೋಲ್ ಪ್ರತಿ ಲೀಟರ್ ಗೆ ₹ 8 ಡೀಸೆಲ್ ₹ 6 ಕಡಿತ
More Stories
ಶಾಪಿಂಗ್ ಕಾಂಪ್ಲೆಕ್ಸ್ ನಲ್ಲಿ ಬಿದ್ದವರು ಪ್ರೇಮಿಗಳಲ್ಲ – ಕೇವಲ ಸ್ನೇಹಿತರು
ಬೆಂಗಳೂರು ಡಿಸಿ ಕಚೇರಿ ಮೇಲೆ ACB ದಾಳಿ; DC ಆಪ್ತ ಸಹಾಯಕ 5 ಲಕ್ಷ ರು ಲಂಚ ಸ್ವೀಕಾರ ವೇಳೆ ಬಲೆಗೆ
ಬೆಂಗಳೂರಿನಲ್ಲಿ ಕಾಂಪ್ಲೆಕ್ಸ್ ಮೇಲಿನಿಂದ ಜಿಗಿದು ಪ್ರೇಮಿಗಳು – ಆತ್ಮಹತ್ಯೆಗೆ ಯತ್ನ-ಯುವತಿ ಸಾವು