ದಿ ಕಾಶ್ಮೀರ್ ಫೈಲ್ಸ್’ ರಿಯಲ್ ಸ್ಟೋರಿ : ಅಕ್ಕಿ ಡ್ರಮ್ ನಲ್ಲಿ ಕೊಲ್ಲಲ್ಪಟ್ಟ ನಿಜವಾದ ಕಾಶ್ಮೀರಿ ಪಂಡಿತ ಇವರು ‘ದಿ ಕಾಶ್ಮೀರ್ ಫೈಲ್ಸ್’ ಈ ಸಿನಿಮಾದ ಕಥೆಯಲ್ಲಿ ಅಕ್ಕಿ ಡ್ರಮ್ ನಲ್ಲಿ ಕಾಶ್ಮೀರಿ ಪಂಡಿತರೊಬ್ಬರ ಹತ್ಯೆ ನಡೆದ ಘಟನೆ ಬರುತ್ತದೆ. ಆ ಘಟನೆಯು ನಡೆದದ್ದು ಕಾಶ್ಮೀರಿದ ಶ್ರೀನಗರದ ಛೋಟಾ ಬಜಾರ್ ನಲ್ಲಿ ಎನ್ನುವ ಮಾಹಿತಿ ಲಭ್ಯವಾಗಿದೆ.
ಇಂಥದ್ದೊಂದು ಘಟನೆ ನಡೆದದ್ದು ಶಹೀದ್ ಬಾಲ್ ಕ್ರಿಶನ್ ಗಂಜು ಅವರ ಕುಟುಂಬದಲ್ಲಿ ಎನ್ನುವ ಸಂಗತಿಯನ್ನು ಸ್ವತಃ ಇವರ ಸಹೋದರಿಯೇ ಟ್ವಿಟರ್ ಖಾತೆಯಲ್ಲಿ ಖಚಿತ ಪಡಿಸಿದ್ದಾರೆ.
ಅಲ್ಲದೇ, ‘ಕಾಶ್ಮೀರಿ ಪಂಡಿತ್ ನೆಟ್ ವರ್ಕ್’ ಎಂಬ ಜಾಲತಾಣದಲ್ಲಿ ಪ್ರಕಟವಾದ ಹತ್ಯೆಯಾದ ಕಾಶ್ಮೀರಿ ಪಂಡಿತರ ಪರಿಚಯದಲ್ಲೂ ಈ ಗಂಜು ಇದ್ದಾರೆ.
ಕಾಶ್ಮೀರದ ಶ್ರೀನಗರದಲ್ಲಿಯ ಛೋಟಾ ಬಜಾರ್ ನಿವಾಸಿ ಶಾಹೀದ್ ಬಾಲ್ ಕ್ರಿಶನ್ ಗಂಜು. ಇವರು ಟೆಲಿಕಾಂನಲ್ಲಿ ಇಂಜಿನಿಯರ್ ಆಗಿದ್ದರು. ಶಿಬನ್ ಗುಂಜಿ ಸೇರಿದಂತೆ ಹಲವರು ನಾಲ್ಕು ಅಂತಸ್ತಿನ ಛೋಟಾ ಬಜಾರ್ ಮನೆಯಲ್ಲೇ ವಾಸವಿದ್ದರು.
ಸಹೋದರಿ ಶಿಬನ್ ಗುಂಜಿ ಈ ಘಟನೆಯ ಕುರಿತು ಹೇಳಿಕೊಂಡಂತೆ. ಅದು 10 ಮಾರ್ಚ್ 1990ರ ಇಸವಿ. ಸುಮಾರು 32 ವರ್ಷಗಳ ಹಿಂದೆ ನಡೆದ ಘಟನೆ. ಆಗ ಕಾಶ್ಮೀರದಲ್ಲಿ ಕರ್ಫ್ಯೂ ಹೇರಲಾಗಿತ್ತು. ಈ ಕರ್ಫ್ಯೂ ಅಂದು ಸಡಿಲಗೊಂಡಿದ್ದರಿಂದ ಎಂದಿನಂತೆ ಕೆಲಸ ಮುಗಿಸಿಕೊಂಡು ಟೆಲಿಕಾಂ ಇಂಜಿನಿಯರ್ ಆಗಿದ್ದ ಶಾಹೀದ್ ಬಾಲ್ ಕ್ರಿಶನ್ ಗಂಜು ಮನೆಗೆ ಆಗಮಿಸುತ್ತಿದ್ದರು.
ಅವರ ಹಿಂದೆಯೇ ಭಯೋತ್ಪಾದಕರು ಹಿಂಬಾಲಿಸುತ್ತಿದ್ದಾರೆ ಎನ್ನುವ ಕೊಂಚ ಸುಳಿವೂ ಅವರಿಗೆ ಸಿಕ್ಕಿರಲಿಲ್ಲ. ತಮ್ಮ ಪಾಡಿಗೆ ತಾವು ನಿರಾಳವಾಗಿ ಮನೆಯತ್ತ ಹೆಜ್ಜೆ ಇಟ್ಟಿದ್ದರು. ಮುಂದೆ ಮುಂದೆ ಗಂಜು, ಹಿಂದೆಯೇ ಭಯೋತ್ಪಾದಕರು.
ಕೊಲ್ಲಲಿಕ್ಕೆ ಬಂದಿದ್ದ ಭಯೋತ್ಪಾದಕರು ಬಾಗಿಲು ಒಡೆದರು, ಮನೆಗೆ ನುಗ್ಗಿದರು.
ಮನೆಯಲ್ಲಿದ್ದವರನ್ನು ಕೊಲ್ಲುತ್ತಾ ಸಾಗಿದರು. ಈ ವೇಳೆಯಲ್ಲಿ ಭಯೋತ್ಪಾದಕರಿಂದ ತಪ್ಪಿಸಿಕೊಳ್ಳಲು ಗಂಜು ಮೂರನೇ ಮಹಡಿಯತ್ತ ಓಡಿದರು. ಎಲ್ಲಿ ತಪ್ಪಿಸಿಕೊಳ್ಳುವುದು ಅಂತ ಗೊತ್ತಾಗದೇ ಕಂಗಾಲಾದರು. ಅಲ್ಲಿಯೇ ಇದ್ದ ಅಕ್ಕಿ ತುಂಬಿದ್ದ ಡ್ರಮ್ ನೊಳಗೆ ಬಚ್ಚಿಟ್ಟುಕೊಂಡರು. ಇವರನ್ನು ಹುಡುಕ್ತಾ ಇದ್ದ ಭಯೋತ್ಪಾದಕರು ಇಡೀ ಮನೆಯನ್ನು ಧ್ವಂಸ ಮಾಡಿದರು.
ಇಂಚಿಂಚು ಜಾಗ ಬಿಡದೇ ಹುಡುಕಿದರು. ಕೊನೆಗೆ ಅಕ್ಕಿ ಡ್ರಮ್ ನಲ್ಲಿ ಅವಿತು ಕುಳಿತಿದ್ದ ಗಂಜು ಕಣ್ಣೀಗೆ ಬಿದ್ದರು. ಅಕ್ಕಿ ಡಬ್ಬಿಯಲ್ಲೇ ಕೊಂದರು. ಅದೇ ಅಕ್ಕಿಯಿಂದ ಅನ್ನ ಮಾಡಿಕೊಂಡು ಅವರ ಮಕ್ಕಳೇ ತಿನ್ನಲಿ ಎಂದು ಕ್ರೂರತೆ ಮೆರೆದರು.
ಇದು ನಿಜವಾಗಿ ನಡೆದ ಘಟನೆ ಎಂದು ಸ್ವತಃ ಗಂಜು ಅವರ ಸಹೋದರಿಯೇ ಸೋಷಿಯಲ್ ಮೀಡಿಯಾದ ಮೂಲಕ ಬರೆದುಕೊಂಡಿದ್ದಾರೆ. ಅಂದಹಾಗೆ ಈ ಗಂಜು ಅವರು ಭಯೋತ್ಪಾದಕರಿಂದ ಹತ್ಯೆಯಾಗಿ 19 ಮಾರ್ಚ್ 2022ಕ್ಕೆ 32 ವರ್ಷಗಳ ಆಗಿವೆ. ಈ ಸಂದರ್ಭದಲ್ಲಿ ಗಂಜು ಸಹೋದರಿ, ಈ ಎಲ್ಲ ವಿಷಯಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.
ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More
ಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಬಳಿಕ ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣರನ್ನು ಅಮಾನತು ಮಾಡಿ ಜೆಡಿಎಸ್… Read More
ಬೆಂಗಳೂರು : ರಾಜ್ಯದ ಎರಡನೇ ಹಂತದ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಗತ್ಯ ಸೇವೆಗಳ ಇಲಾಖೆಗಳ ಸಿಬ್ಬಂದಿಗೆ ನಾಳೆಯಿಂದ 3 ದಿನಗಳ… Read More
ಬೆಂಗಳೂರು : ಮೇ 10ರಂದು - ಪ್ರಸಕ್ತ ಸಾಲಿನ SSLC ಪರೀಕ್ಷೆಯ ಫಲಿತಾಂಶ ಪ್ರಕಟಿಸಲು ಇಲಾಖೆ ಎಲ್ಲಾ ರೀತಿಯ ಸಿದ್ದತೆಗಳನ್ನು… Read More
ನವದೆಹಲಿ ,ಏಪ್ರಿಲ್ 30 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,550 ರೂಪಾಯಿ ದಾಖಲಾಗಿದೆ. 24… Read More
ರಾಮನಗರ : ಮೇಕೆದಾಟು (Mekedatu) ಬಳಿಯ ಸಂಗಮದ ಕಾವೇರಿ ನದಿಯಲ್ಲಿ ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರು ಪಾಲಾದ ಘಟನೆ… Read More
This website uses cookies.
Leave a Comment