Main News

ಇಸ್ಪೀಟ್ ಗೆ ಪತ್ನಿಯನ್ನೇ ಪಣ ಇಟ್ಟ ಭೂಪ- ಸೋತ ಮೇಲೆ ಗೆಳೆಯರಿಗೆ ಧಾರೆ ಎರೆದ

ಪಾಂಡವರು ಪಗಡೆ ಆಟಕ್ಕೆ ದ್ರೌಪದಿಯನ್ನೇ ಪಣವಾಗಿಟ್ಟು ಸೋತ ನಂತರ ಮಾಹಾಭಾರತ ಯುದ್ದವೆ ನಡೆಯಿತು. ಅದು ದ್ವಾಪರಯುಗದ ಕಥೆ. ಈ ಕಲಿಯುಗದಲ್ಲೂ ಜೂಜಾಟದಲ್ಲಿ ತನ್ನ ಪತ್ನಿಯನ್ನೇ ಪಣವಾಗಿಟ್ಟ ಪತಿರಾಯ, ಜೂಜಿನಲ್ಲಿ ಸೋತ ನಂತರ ಪತ್ನಿಯನ್ನು ಬಲವಂತವಾಗಿ ಗೆಳೆಯರಿಗೆ ಸಮರ್ಪಿಸಿ ಬಂದಿದ್ದಾನೆ

ಇದು ಒಂದು ತಿಂಗಳು ಹಿಂದೆ
ಬಿಹಾರದ ಭಾಗಲ್ಪುರದ ಹಸಂಗಂಜ್ ನಡೆದ ಘಟನೆ. ಈಗ ಬಹಿರಂಗವಾಗಿದೆ.

ಗ್ರಾಮದಲ್ಲಿನ ವ್ಯಕ್ತಿಯೊಬ್ಬ ಸ್ನೇಹಿತ ರೊಂದಿಗೆ ಜೂಜಾಟಕ್ಕೆ ಇಳಿದಿದ್ದಾನೆ. ಹಣವೆಲ್ಲಾ ಖಾಲಿಯಾಯಿತು. ಜೂಜಾಟಕ್ಕೆ ಏನೂ ಇಲ್ಲದೇ ಇದ್ದಾಗ ಪಾಂಡವರ ರೀತಿಯಲ್ಲಿ ಪತ್ನಿಯ ಅನುಮತಿ ಇಲ್ಲದೇ ಹೋದರೂ ತನ್ನ ಪತ್ನಿಯನ್ನೇ ಆತ ಪಣಕ್ಕೆ ಇಟ್ಟಿದ್ದಾನೆ. ಜೂಜಾಟದಲ್ಲಿ ಗೆಲ್ನುತ್ತೇನೆ ಎಂಬ ನಿರೀಕ್ಷೆಯಲ್ಲಿದ್ದವನಿಗೆ ಸೋಲಿನ ಕಹಿ ತಟ್ಟಿದೆ.

ಪತ್ನಿಯನ್ನು ಪಣವಾಗಿ ಇಟ್ಟು ಜೂಜಾಟದಲ್ಲಿ ಸೋತ ಕಾರಣ, ಪತ್ನಿಯನ್ನು ಸ್ನೇಹಿತರೊಂದಿಗೆ ಹೋಗಲು ಎಳೆದೊಯ್ದು ಬಿಟ್ಟಿದ್ದಾನೆ.
ಇದಕ್ಕೆ ಒಪ್ಪದಂತ ಪತ್ನಿ ಪತಿಯ ಮಾತಿಗೆ ನಿರಾಕರಿಸಿದ್ದಾಳೆ. ಆದರೂ ಬಿಡದೇ ಸ್ನೇಹಿತರಿಗೆ ಎಳೆದೊಯ್ಯದುಕೊಂಡು ಹೋಗಲು ಅನುಮತಿ ಕೊಟ್ಟಿದ್ದಾನೆ.
ಅವರೂ ಎಳೆದುಕೊಂಡು ಹೋದರು. ಆದರೆ ಹೇಗೋ ಮಾಡಿ ಪತ್ನಿ ಕೊನೆಗೆ ತಪ್ಪಿಸಿಕೊಂಡು ಓಡಿ ಬಂದಿದ್ದಾಳೆ.

ಅಲ್ಲಿಗೂ ಬಿಡದ ಪತಿ, ತಪ್ಪಿಸಿಕೊಂಡು ಬಂದ ಪತ್ನಿಯನ್ನು ಹಿಡಿದು ಥಳಿಸಿದ ಈ ಪತಿರಾಯ, ಪತ್ನಿಗೆ ಆಸಿಡ್ ಎರಚಿದ್ದಾನೆ. ಈ ಮೂಲಕ ಅಮಾನವೀಯ ಕೃತ್ಯ ಮೆರೆದಿದ್ದಾನೆ.

ಆಸಿಡ್ ದಾಳಿಗೆ ಒಳಗಾದಂತ ಮಹಿಳೆ, ಆಸ್ಪತ್ರೆಗೆ ದಾಖಲಾಗಿದ್ದಾಳೆ. ಆತನ ವಿರುದ್ಧ ದೂರು ದಾಖಲಾಗಿದೆ.

Team Newsnap
Leave a Comment
Share
Published by
Team Newsnap

Recent Posts

ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ

ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More

May 4, 2024

ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ

ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್​.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More

May 4, 2024

ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ

ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More

May 4, 2024

ಶಕುನಿ ಪಾತ್ರಧಾರಿ ವೇದಿಕೆಯ ಮೇಲೆಯೇ ಕುಸಿದು ಬಿದ್ದು ಸಾವು

ನಿನ್ನೆ ರಾತ್ರಿ 72ರ ವಯಸ್ಸಿನ ಎನ್.ಮುನಿಕೆಂಪಣ್ಣ ಶಕುನಿ (Shakuni) ವೇಷದಲ್ಲಿ ವೇದಿಕೆಗೆ ಬಂದು ಪಾತ್ರ ನಿರ್ವಹಿಸುತ್ತಲೇ ವೇದಿಕೆಯ ಮೇಲೆ ಕುಸಿದು… Read More

May 4, 2024

ಬಿಜೆಪಿಯವರು ಏಕೆ ಪ್ರಜ್ವಲ್ ರೇವಣ್ಣ ಕೇಸ್ ಬಗ್ಗೆ ಮಾತನಾಡುತ್ತಿಲ್ಲ ?ಡಿ.ಕೆ.ಶಿವಕುಮಾರ್

ಬಾಗಲಕೋಟೆ : ಡಿಸಿಎಂ ಡಿ.ಕೆ.ಶಿವಕುಮಾರ್ , ಬಿಜೆಪಿ ಮುಖಂಡರು ಪ್ರಜ್ವಲ್ ರೇವಣ್ಣ ಬಗ್ಗೆ ಯಾಕೆ ಮಾತನಾಡುತ್ತಿಲ್ಲ ? ಹೆಣ್ಣುಮಕ್ಕಳಿಗೆ ಸಾಂತ್ವನ… Read More

May 4, 2024

ರೇವಣ್ಣ ಅಪಹರಣ ಕೇಸ್‌ : ಎಸ್‌ಐಟಿ ವಿಶೇಷ ತಂಡದಿಂದ 40 ಕಡೆ ರೇಡ್‌

ಬೆಂಗಳೂರು : ನೆನ್ನೆ ವಿಶೇಷ ತನಿಖಾ ತಂಡ (ಎಸ್‌ಐಟಿ) , ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಂದ ಲೈಂಗಿಕ ಶೋಷಣೆಗೆ ಒಳಗಾಗಿದ್ದಳು… Read More

May 4, 2024