ಹೈನುಗಾರಿಕೆ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ರೈತನ ಮಗಳು ಸೋನಾಲ್ (26) ರಾಜಸ್ಥಾನದಲ್ಲಿ ನ್ಯಾಯಾಧೀಶೆ ಹುದ್ದೆಗೆ ಆಯ್ಕೆ ಯಾಗಿದ್ದಾಳೆ.
2018ರಲ್ಲಿ ಆರ್ಜೆಎಎಸ್ ಪರೀಕ್ಷೆ ಪಾಸ್ ಮಾಡಿದ್ದ ಸೋನಾಲ್ ತರಬೇತಿ ಪೂರ್ಣಗೊಳಿಸಿದ್ದಾರೆ. ಕೆಲವೇ ದಿನಗಳಲ್ಲಿ ನ್ಯಾಯಾಧೀಶೆಯಾಗಿ ನೇಮಕ ಆಗಲಿದ್ದಾರೆ.
ಸೋನಾಲ್ ಎಲ್ಎಲ್ಬಿ ಹಾಗೂ ಎಲ್ಎಲ್ಎಂ ಪರೀಕ್ಷೆಗಳಲ್ಲಿ ಪ್ರಥಮ ಸ್ಥಾನ ಪಡೆದಿದ್ದರು. ಇದಾದ ಬಳಿಕ ಒಂದು ವರ್ಷಗಳ ತರಬೇತಿ ಪೂರ್ಣಗೊಳಿಸಿದ ಸೋನಾಲ್ ರಾಜಸ್ಥಾನದ ಸೆಷನ್ಸ್ ನ್ಯಾಯಾಲಯದಲ್ಲಿ ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್ ಆಗಿ ನೇಮಕ ಗೊಳ್ಳಲಿದ್ದಾರೆ.
ತಂದೆ ಲಾಲ್ ಶರ್ಮಾರ ಹೈನೋದ್ಯಮಕ್ಕೂ ಸಹಾಯ ಮಾಡೋ ಸೋನಾಲ್, ಪದವೀಧರೆಯಾಗಿದ್ದರೂ ಸಹ ಬೆಳಗ್ಗೆ 4 ಗಂಟೆಗೇ ಎದ್ದು ಹಸುವಿನ ಹಾಲು ಕರೆಯೋದು, ಕೊಟ್ಟಿಗೆ ಸ್ವಚ್ಛಗೊಳಿಸೋದು, ಸಗಣಿ ಸಂಗ್ರಹಿಸೋದು ಜೊತೆಗೆ ಮನೆ ಮನೆಗೆ ತೆರಳಿ ಹಾಲನ್ನೂ ನೀಡುತ್ತಾರೆ.
ಕಳೆದ ವರ್ಷ ಡಿಸೆಂಬರ್ನಲ್ಲೇ ಫಲಿತಾಂಶ ಘೋಷಣೆಯಾಗಿತ್ತು. ಆದರೆ ಸೋನಾಲ್ ಕಟ್ ಆಫ್ ಅಂಕಕ್ಕಿಂತ 1 ಅಂಕ ಕಡಿಮೆ ಪಡೆದ ಕಾರಣ ಅವಕಾಶ ಲಭ್ಯ ವಾಗಿರಲಿಲ್ಲ.
ಈಗ ಆಯ್ಕೆಯಾದ ಕೆಲ ವಿದ್ಯಾರ್ಥಿಗಳು ಸೇವೆಗೆ ನೇಮಕವಾಗದ ಕಾರಣ ಸೋನಾಲ್ ಅದೃಷ್ಟ ಒಲಿದು ಬಂದಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ