ಹೈನೋದ್ಯಮದ ಮಾಡಿಕೊಂಡಿದ್ದ ಯುವತಿ ಈಗ ಜಿಲ್ಲಾ ನ್ಯಾಯಾಧೀಶೆ

Team Newsnap
1 Min Read

ಹೈನುಗಾರಿಕೆ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ರೈತನ ಮಗಳು ಸೋನಾಲ್​ (26) ರಾಜಸ್ಥಾನದಲ್ಲಿ ನ್ಯಾಯಾಧೀಶೆ ಹುದ್ದೆಗೆ ಆಯ್ಕೆ ಯಾಗಿದ್ದಾಳೆ.

2018ರಲ್ಲಿ ಆರ್​ಜೆಎಎಸ್ ಪರೀಕ್ಷೆ ಪಾಸ್​ ಮಾಡಿದ್ದ ಸೋನಾಲ್​ ತರಬೇತಿ ಪೂರ್ಣಗೊಳಿಸಿದ್ದಾರೆ. ಕೆಲವೇ ದಿನಗಳಲ್ಲಿ ನ್ಯಾಯಾಧೀಶೆಯಾಗಿ ನೇಮಕ ಆಗಲಿದ್ದಾರೆ.

ಸೋನಾಲ್​ ಎಲ್​ಎಲ್​ಬಿ ಹಾಗೂ ಎಲ್​ಎಲ್​ಎಂ ಪರೀಕ್ಷೆಗಳಲ್ಲಿ ಪ್ರಥಮ ಸ್ಥಾನ ಪಡೆದಿದ್ದರು. ಇದಾದ ಬಳಿಕ ಒಂದು ವರ್ಷಗಳ ತರಬೇತಿ ಪೂರ್ಣಗೊಳಿಸಿದ ಸೋನಾಲ್​ ರಾಜಸ್ಥಾನದ ಸೆಷನ್ಸ್ ನ್ಯಾಯಾಲಯದಲ್ಲಿ ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್​ ಆಗಿ ನೇಮಕ ಗೊಳ್ಳಲಿದ್ದಾರೆ.

ತಂದೆ ಲಾಲ್​ ಶರ್ಮಾರ ಹೈನೋದ್ಯಮಕ್ಕೂ ಸಹಾಯ ಮಾಡೋ ಸೋನಾಲ್​, ಪದವೀಧರೆಯಾಗಿದ್ದರೂ ಸಹ ಬೆಳಗ್ಗೆ 4 ಗಂಟೆಗೇ ಎದ್ದು ಹಸುವಿನ ಹಾಲು ಕರೆಯೋದು, ಕೊಟ್ಟಿಗೆ ಸ್ವಚ್ಛಗೊಳಿಸೋದು, ಸಗಣಿ ಸಂಗ್ರಹಿಸೋದು ಜೊತೆಗೆ ಮನೆ ಮನೆಗೆ ತೆರಳಿ ಹಾಲನ್ನೂ ನೀಡುತ್ತಾರೆ.

ಕಳೆದ ವರ್ಷ ಡಿಸೆಂಬರ್​ನಲ್ಲೇ ಫಲಿತಾಂಶ ಘೋಷಣೆಯಾಗಿತ್ತು. ಆದರೆ ಸೋನಾಲ್​ ಕಟ್​ ಆಫ್​ ಅಂಕಕ್ಕಿಂತ 1 ಅಂಕ ಕಡಿಮೆ ಪಡೆದ ಕಾರಣ ಅವಕಾಶ ಲಭ್ಯ ವಾಗಿರಲಿಲ್ಲ.

ಈಗ ಆಯ್ಕೆಯಾದ ಕೆಲ ವಿದ್ಯಾರ್ಥಿಗಳು ಸೇವೆಗೆ ನೇಮಕವಾಗದ ಕಾರಣ ಸೋನಾಲ್​ ಅದೃಷ್ಟ ಒಲಿದು ಬಂದಿದೆ.

Share This Article
Leave a comment