Main News

ಹೈನೋದ್ಯಮದ ಮಾಡಿಕೊಂಡಿದ್ದ ಯುವತಿ ಈಗ ಜಿಲ್ಲಾ ನ್ಯಾಯಾಧೀಶೆ

ಹೈನುಗಾರಿಕೆ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ರೈತನ ಮಗಳು ಸೋನಾಲ್​ (26) ರಾಜಸ್ಥಾನದಲ್ಲಿ ನ್ಯಾಯಾಧೀಶೆ ಹುದ್ದೆಗೆ ಆಯ್ಕೆ ಯಾಗಿದ್ದಾಳೆ.

2018ರಲ್ಲಿ ಆರ್​ಜೆಎಎಸ್ ಪರೀಕ್ಷೆ ಪಾಸ್​ ಮಾಡಿದ್ದ ಸೋನಾಲ್​ ತರಬೇತಿ ಪೂರ್ಣಗೊಳಿಸಿದ್ದಾರೆ. ಕೆಲವೇ ದಿನಗಳಲ್ಲಿ ನ್ಯಾಯಾಧೀಶೆಯಾಗಿ ನೇಮಕ ಆಗಲಿದ್ದಾರೆ.

ಸೋನಾಲ್​ ಎಲ್​ಎಲ್​ಬಿ ಹಾಗೂ ಎಲ್​ಎಲ್​ಎಂ ಪರೀಕ್ಷೆಗಳಲ್ಲಿ ಪ್ರಥಮ ಸ್ಥಾನ ಪಡೆದಿದ್ದರು. ಇದಾದ ಬಳಿಕ ಒಂದು ವರ್ಷಗಳ ತರಬೇತಿ ಪೂರ್ಣಗೊಳಿಸಿದ ಸೋನಾಲ್​ ರಾಜಸ್ಥಾನದ ಸೆಷನ್ಸ್ ನ್ಯಾಯಾಲಯದಲ್ಲಿ ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್​ ಆಗಿ ನೇಮಕ ಗೊಳ್ಳಲಿದ್ದಾರೆ.

ತಂದೆ ಲಾಲ್​ ಶರ್ಮಾರ ಹೈನೋದ್ಯಮಕ್ಕೂ ಸಹಾಯ ಮಾಡೋ ಸೋನಾಲ್​, ಪದವೀಧರೆಯಾಗಿದ್ದರೂ ಸಹ ಬೆಳಗ್ಗೆ 4 ಗಂಟೆಗೇ ಎದ್ದು ಹಸುವಿನ ಹಾಲು ಕರೆಯೋದು, ಕೊಟ್ಟಿಗೆ ಸ್ವಚ್ಛಗೊಳಿಸೋದು, ಸಗಣಿ ಸಂಗ್ರಹಿಸೋದು ಜೊತೆಗೆ ಮನೆ ಮನೆಗೆ ತೆರಳಿ ಹಾಲನ್ನೂ ನೀಡುತ್ತಾರೆ.

ಕಳೆದ ವರ್ಷ ಡಿಸೆಂಬರ್​ನಲ್ಲೇ ಫಲಿತಾಂಶ ಘೋಷಣೆಯಾಗಿತ್ತು. ಆದರೆ ಸೋನಾಲ್​ ಕಟ್​ ಆಫ್​ ಅಂಕಕ್ಕಿಂತ 1 ಅಂಕ ಕಡಿಮೆ ಪಡೆದ ಕಾರಣ ಅವಕಾಶ ಲಭ್ಯ ವಾಗಿರಲಿಲ್ಲ.

ಈಗ ಆಯ್ಕೆಯಾದ ಕೆಲ ವಿದ್ಯಾರ್ಥಿಗಳು ಸೇವೆಗೆ ನೇಮಕವಾಗದ ಕಾರಣ ಸೋನಾಲ್​ ಅದೃಷ್ಟ ಒಲಿದು ಬಂದಿದೆ.

Team Newsnap
Leave a Comment
Share
Published by
Team Newsnap

Recent Posts

ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ

2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್​ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More

May 18, 2024

SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ

ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More

May 17, 2024

ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More

May 17, 2024

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್‌ನಲ್ಲಿ ಘೋಷಣೆ… Read More

May 16, 2024

ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More

May 16, 2024

ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ

ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More

May 16, 2024