75 ಸಾವಿರ ನಗದು ಹಾಗೂ ಚಿನ್ನಾಭರಣಗಳನ್ನು ಕಳ್ಳರು ಯುವರಾಜ್ ಸಿಂಗ್ ಅವರ ಮನೆಯಲ್ಲಿ ಕದ್ದೊಯ್ದಿದ್ದು, ಮನೆಗೆಲಸದವರ ಮೇಲೆ ಆರೋಪ ಕೇಳಿ ಬರುತ್ತಿದೆ.
ಶಬ್ನಮ್ ಸಿಂಗ್ ( ಯುವರಾಜ್ ಸಿಂಗ್ ಅವರ ತಾಯಿ )ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು , ಮನೆಗೆಲಸದ ಸಿಬ್ಬಂದಿಗಳಾದ ಲಲಿತಾ ದೇವಿ ಮತ್ತು ಬಿಹಾರ ಮೂಲದ ಅಡುಗೆ ಸಿಬಂದಿ ಸಿಲ್ದಾರ್ ಪಾಲ್ ಅವರ ಮೇಲೆ ಅನುಮಾನ ವ್ಯಕ್ತಪಡಿಸಿದ್ದಾರೆ.
ಯುವರಾಜ್ ಸಿಂಗ್ ಅವರ ತಾಯಿ ಶಬ್ನಮ್ ಸಿಂಗ್ ಸೆಪ್ಟೆಂಬರ್ 2023 ರಿಂದ ಗುರ್ಗಾಂವ್ನಲ್ಲಿರುವ ತಮ್ಮ ಎರಡನೇ ನಿವಾಸದಲ್ಲಿ ವಾಸಿಸುತ್ತಿದ್ದರು . ಬಳಿಕ ಅಕ್ಟೋಬರ್ 5, 2023 ರಂದು ಅವರು ಪಂಚಕುಲದ ಮನೆಗೆ ಹಿಂದಿರುಗಿದ್ದಾರೆ, ಈ ವೇಳೆ ಮನೆಯಲ್ಲಿದ್ದ ಸುಮಾರು 75,000 ರೂಪಾಯಿ ಮೌಲ್ಯದ ಆಭರಣಗಳು ಮತ್ತು ಇತರ ವಸ್ತುಗಳು ಕಪಾಟಿನಲ್ಲಿ ಕಾಣೆಯಾಗಿವೆ ಎಂದು ತಿಳಿಸಿದ್ದಾರೆ.
ಅದೇ ಸಮಯದಲ್ಲಿ ಮನೆಕೆಲಸದ ಸಿಬಂದಿಗಳಾದ ಲಲಿತಾ ದೇವಿ ಮತ್ತು ಸಿಲ್ದಾರ್ ಪಾಲ್ ಇದ್ದಕ್ಕಿದ್ದಂತೆ ತಮ್ಮ ಕೆಲಸವನ್ನು ತೊರೆದು ಹೋಗಿದ್ದಾರೆ .
ಇದರಿಂದಾಗಿ ಮನೆಯಲ್ಲಿ ಕಳ್ಳತನವಾದ ವಿಚಾರದಲ್ಲಿ ಮನೆಕೆಲಸದ ಸಿಬ್ಬಂದಿಗಳ ಕೈಚಳಕ ಇರಬಹುದು ಎಂದು ಅನುಮಾನ ವ್ಯಕ್ತಪಡಿಸಿದ್ದು, ಕೂಲಂಕುಷ ವಿಚಾರಣೆ ನಡೆಸಬೇಕೆಂದು ಯುವರಾಜ್ ಸಿಂಗ್ ತಾಯಿ ಪೊಲೀಸರಲ್ಲಿ ಒತ್ತಾಯಿಸಿದ್ದಾರೆ.ಎನ್.ವಿ ಅಂಜಾರಿಯಾ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾ ನೇಮಕ
ಶಬ್ನಮ್ ಸಿಂಗ್ ಅವರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿತನಿಖೆ ನಡೆಸುತ್ತಿದ್ದಾರೆ.
ಮುಂಬೈ: ನಿನ್ನೆ ಬೀಸಿದ ಬಿರುಗಾಳಿಗೆ ನಗರದಲ್ಲಿ ತಲೆಎತ್ತಿದ್ದ ಅಕ್ರಮ ಜಾಹಿರಾತು ಫಲಕ ಕುಸಿದು, 8 ಮಂದಿ ಸಾವನ್ನಪ್ಪಿದ್ದು, 60 ಜನರು… Read More
ಐದು ದಿನಗಳ ಜೈಲು ವಾಸಕ್ಕೆ ಅಂತ್ಯ 5 ಲಕ್ಷ ರು ಬಾಂಡ್ , ಎಸ್ ಐಟಿ ತನಿಖೆಗೆ ಸಹಕರಿಸಬೇಕು ಎಂಬ… Read More
ಬೆಂಗಳೂರು : ಪ್ರಜ್ವಲ್ ರೇವಣ್ಣ ವಿಚಾರದ ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಿನಕ್ಕೊಂದು ಟ್ವಿಸ್ಟ್ ಪಡೆದುಕೊಳ್ಳುತ್ತಲೇ ಇದೆ. ಈ ಕೇಸ್ನಲ್ಲಿ ಸಂತ್ರಸ್ತೆ… Read More
ಹೈದ್ರಾಬಾದ್ : ನಿಜ ಹೇಳಬೇಕು ಅಂದ್ರೆ ಅಪಘಾವಾದ ಸ್ಥಳಕ್ಕೆ ಆಂಬ್ಯುಲೆನ್ಸ್ ಸುಮಾರು 20 ನಿಮಿಷಗಳ ಕಾಲ ತಡವಾಗಿ ಬಂದಿದ್ದಕ್ಕೆ ಆಕೆ… Read More
ನವದೆಹಲಿ : ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ( CBSE ) 12ನೇ ತರಗತಿ ಫಲಿತಾಂಶ ಇಂದು ಪ್ರಕಟವಾಗಿದ್ದು… Read More
ಬೆಂಗಳೂರು : ಮುಂದಿನ 5 ದಿನ ರಾಜ್ಯದಾದ್ಯಂತ ಭಾರಿ ಮಳೆ ಆಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ… Read More
This website uses cookies.
Leave a Comment