ಪ್ರಿಯಾಂಕ್ ಖರ್ಗೆಗೆ ತಮ್ಮ ಮನೆಯ ಹೆಂಚು ತೂತು ಎಂಬುದೇ ಗೊತ್ತಿಲ್ಲ ಎಂದು ಟ್ವೀಟ್ ಮಾಡುವ ಮೂಲಕ ಲಂಚ-ಮಂಚದ ಸರ್ಕಾರ ಎಂದು ಆರೋಪ ಮಾಡಿರುವ ಮಾಜಿ ಸಚಿವ ಪ್ರಿಯಾಂಕ್ ಖರ್ಗೆಯವರಿಗೆ ಬಿಜೆಪಿ ತಿರಗೇಟು ನೀಡಿದೆ.
ಈ ಸರ್ಕಾರದಲ್ಲಿ ಹಣ ಕೊಡದೇ ಯಾವುದೇ ಕೆಲಸ ಕೊಡಲ್ಲ. ಯುವಕರು ಸರ್ಕಾರಿ ನೌಕರಿ ಪಡೆಯಬೇಕು ಅಂದರೆ ಲಂಚ ಕೊಡಬೇಕು. ಇದನ್ನು ಓದಿ –ಮೈಸೂರಿನ ಇರ್ವಿನ್ ರಸ್ತೆ ವಿಸ್ತರಣೆ ಕಾಮಗಾರಿ ಸುಗಮ:ಅಡ್ಡಿಯಾಗಿದ್ದ ಮಸೀದಿ ಗೋಡೆ ತೆರವು
ಯುವತಿಯರು ನೌಕರಿ ಪಡೆಯಬೇಕು ಅಂದ್ರೆ ಮಂಚ ಹತ್ತಬೇಕಾಗಿದೆ. ಹೀಗಾಗಿ ಸದ್ಯ ರಾಜ್ಯದಲ್ಲಿರುವುದು ಲಂಚ- ಮಂಚದ ಸರ್ಕಾರವಾಗಿದೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದರು.
ಟ್ವೀಟ್ ಮಾಡಿರುವ ಬಿಜೆಪಿ, ಸಾವಿರಾರು ಮಹಿಳೆಯರು, ಪ್ರತಿಭಾವಂತರು, ವಿದ್ಯಾವಂತರು ಕಷ್ಟಪಟ್ಟು, ಅನೇಕ ಪರೀಕ್ಷೆಗಳನ್ನು ಉತ್ತೀರ್ಣರಾಗಿ, ಕೆಲಸ ಗಿಟ್ಟಿಸಿಕೊಳ್ಳುತ್ತಾರೆ. ಪ್ರಿಯಾಂಕ್ ಖರ್ಗೆ ಅವರೇ ನಿಮ್ಮ ಈ ಮಾತುಗಳು, ಅಷ್ಟು ಜನ ಮಹಿಳೆಯರಿಗೆ ಅವಮಾನ ಮಾಡಿದಂತಲ್ಲವೇ ಎಂದು ಪ್ರಶ್ನಿಸಿ ಕೂಡಲೇ ಕ್ಷಮೆಯಾಚಿಸಿ ಎಂದು ಆಗ್ರಹಿಸಿದೆ.
ಕಾಂಗ್ರೆಸ್ ನಾಯಕರ ರಾತ್ರಿ ಬದುಕಿನ ರಂಗ-ಬಿರಂಗಿ ಬಗ್ಗೆ ಸಾಕಷ್ಟು ದಂತಕತೆಗಳು ಮಾತ್ರವಲ್ಲ, ಗುಪ್ತಸಿಡಿಗಳೂ ಇವೆ. ಜೂನಿಯರ್ ಖರ್ಗೆ ಅವರೇ, ಸಭ್ಯಸ್ಥರ ಮುಖವಾಡ ಹಾಕಿ ಸಮಾಜದ ಕಣ್ಣಿಗೆ ಗಣ್ಯರೆಂದು ಬಿಂಬಿಸಿಕೊಂಡ ಕಾಂಗ್ರೆಸ್ ಗೋಮುಖ ವ್ಯಾಘ್ರಗಳ ಪಟ್ಟಿ ನೀಡಿದರೆ ಸಮರ್ಥನೆ ಮಾಡಿಕೊಳ್ಳುವುದಕ್ಕೂ ನಿಮಗೆ ಕಷ್ಟವಾಗಬಹುದು ಎಂದು ಟಾಂಗ್ ನೀಡಿದ್ದಾರೆ.
- ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
- ರೇವಣ್ಣ ರಿಲೀಸ್ : ಬಿಗ್ ರಿಲೀಪ್
- ನನ್ನನ್ನು ಯಾರು ಅಪಹರಣ ಮಾಡಿಲ್ಲ, ಮಗ ತಪ್ಪು ದೂರು ಕೊಟ್ಟಿದ್ದಾನೆ ಎಂದ ಕಿಡ್ನ್ಯಾಪ್ ಸಂತ್ರಸ್ತೆ
- ಸರಿಯಾದ ಸಮಯಕ್ಕೆ ಆಂಬ್ಯುಲೆನ್ಸ್ ಬಂದಿದ್ದರೆ ಮಂಡ್ಯದ ನಟಿ ಪವಿತ್ರಾ ಸಾಯುತ್ತಿರಲಿಲ್ಲ- ಗೆಳೆಯ ಚಂದ್ರಕಾಂತ್
- CBSE 12 ನೇ ತರಗತಿಯ ಫಲಿತಾಂಶ ಪ್ರಕಟ: ಇಲ್ಲಿದೆ ಫಲಿತಾಂಶವನ್ನು ಪರಿಶೀಲಿಸಲು ನೇರ ಲಿಂಕ್
- ರಾಜ್ಯದಾದ್ಯಂತ ಮುಂದಿನ 5 ದಿನ ಭಾರಿ ಮಳೆ