ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದಾಗ ರೈತರು ಮೃತಪಟ್ಟಿರುವ ಬಗ್ಗೆ ಸರ್ಕಾರದ ಬಳಿ ಯಾವುದೇ ದಾಖಲೆಗಳಿಲ್ಲ. ಹೀಗಾಗಿ ಪರಿಹಾರ ನೀಡುವ ಪ್ರಶ್ನೆಯೇ ಇಲ್ಲ
ಇದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಸಂಸತ್ನಲ್ಲಿ ಲಿಖಿತ ಪ್ರತಿಕ್ರಿಯೆ.
ಸಂಸತ್ ಅಧಿವೇಶನದಲ್ಲಿ ರೈತರ ಪ್ರತಿಭಟನೆ ಕುರಿತು ಪ್ರತಿಪಕ್ಷಗಳು ಧ್ವನಿ ಎತ್ತಿದವು. ಪ್ರತಿಭಟನೆ ವೇಳೆ ಸಾವಿಗೀಡಾದ ರೈತರ ಕುಟುಂಬಗಳಿಗೆ ಹಣಕಾಸು ನೆರವು ನೀಡಲು ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿದವು. ಇದಕ್ಕೆ ಪ್ರತಿಕ್ರಿಯಿಸಿರುವ ಕೃಷಿ ಸಚಿವರು, ಈ ಸಂಬಂಧ ಕೃಷಿ ಇಲಾಖೆಯಲ್ಲಿ ಯಾವುದೇ ದಾಖಲೆಗಳಿಲ್ಲ. ಆದ್ದರಿಂದ ಪರಿಹಾರ ನೀಡುವ ಪ್ರಶ್ನೆಯೇ ಬರುವುದಿಲ್ಲ ಎಂದು ತಿಳಿಸಿದ್ದಾರೆ.
ಕೇಂದ್ರದ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಕಳೆದ ಒಂದು ವರ್ಷದಿಂದ ಸಾವಿರಾರು ಸಂಖ್ಯೆಯಲ್ಲಿ ರೈತರು ದೆಹಲಿಯ ಗಡಿಭಾಗಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ವರ್ಷದ ಅವಧಿಯಲ್ಲಿ ಸುಮಾರು 700 ರೈತರು ಪ್ರತಿಭಟನಾ ಸ್ಥಳದಲ್ಲಿ ಮೃತಪಟ್ಟಿದ್ದಾರೆಂದು ರೈತ ನಾಯಕರು ಹಾಗೂ ಪ್ರತಿಪಕ್ಷಗಳು ಹೇಳಿವೆ.
ಮಸೂದೆಗಳನ್ನು ಚರ್ಚೆಗೆ ಒಳಪಡಿಸದೇ ಅಂಗೀಕಾರ ಸರಿಯಲ್ಲ. ಪ್ರತಿಭಟನೆ ವೇಳೆ ನೂರಾರು ರೈತರು ಸಾವನ್ನಪ್ಪಿದ್ದಾರೆ. ಅವರಿಗೆ ಕೇಂದ್ರ ಸರ್ಕಾರ ಪರಿಹಾರ ನೀಡಬೇಕು. ಹೀಗಾಗಿ ಮಸೂದೆಯನ್ನು ಚರ್ಚೆಗೆ ಒಳಪಡಿಸಬೇಕು ಎಂದು ವಿಪಕ್ಷಗಳು ಒತ್ತಾಯಿಸಿದ್ದವು. ಪ್ರತಿಪಕ್ಷಗಳ ವಿರೋಧದ ನಡುವೆಯೂ ಮಸೂದೆಗೆ ಅಂಗೀಕಾರ ನೀಡಲಾಯಿತು.
ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಗೋವಿಂದಪ್ಪ ಸಿದ್ದಾಪುರ ಎಂಬುವರು… Read More
ಮಂಗಳೂರು : ಬಂಟ್ವಾಳದ (Bantwal) ನಾವೂರಿನಲ್ಲಿ ಪೋಷಕರ ಎದುರೇ ಇಬ್ಬರು ಮಕ್ಕಳು ನೀರುಪಾಲಾದ ಘಟನೆ ನಡೆದಿದೆ. ಅನ್ಸಾರ್ ಅವರ ಪುತ್ರಿ… Read More
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ಬೆಂಗಳೂರು : ವಿಶೇಷ ತನಿಖಾ ತಂಡ (SIT) ಮುಖ್ಯಸ್ಥ ಬಿ.ಕೆ.ಸಿಂಗ್ , ಹಾಸನದ ಅಶ್ಲೀಲ ಮತ್ತು ಶೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ… Read More
ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More
ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More
This website uses cookies.
Leave a Comment