ಜಾಗತಿಕ ಮೆಸೇಜಿಂಗ್ ವೇದಿಕೆಗಳನ್ನು ವಿದೇಶಿ ಹಾಗೂ ವಿದೇಶಿ ವಾಣಿಜ್ಯ ಸಂಸ್ಥೆ ಎಂದು ಕರೆಯುವ ಹೊಸ ಐಟಿ ನಿಯಮಗಳನ್ನು ಪ್ರಶ್ನಿಸಿ ವಾಟ್ಸಾಪ್ ಹಾಗೂ ಫೇಸ್ಬುಕ್ ಸಲ್ಲಿಸಿದ್ದ ಅರ್ಜಿಯನ್ನು ಕೇಂದ್ರ ಸರ್ಕಾರ ವಿರೋಧ ಸೂಚಿಸಿ ತಳ್ಳಿ ಹಾಕಿದೆ.
ದೆಹಲಿ ಹೈಕೋರ್ಟ್ನಲ್ಲಿ ಸಲ್ಲಿಸಲಾಗಿರುವ ಅಫಿಡವಿಟ್ನಲ್ಲಿ ಕೇಂದ್ರ ಸರ್ಕಾರವು, ವಿದೇಶಿ ವಾಣಿಜ್ಯ ಸಂಸ್ಥೆಯಾಗಿರುವ ಫೇಸ್ಬುಕ್ ಹಾಗೂ ವಾಟ್ಸಾಪ್ಗೆ ಭಾರತದ ಸಾಂವಿಧಾನಿಕ ಕಾನೂನುಗಳನ್ನು ಪ್ರಶ್ನೆ ಮಾಡುವ ಅಧಿಕಾರವಿಲ್ಲ ಎಂದು ಹೇಳಿತ್ತು.
ಈ ಕಂಪನಿಯು ಭಾರತದಲ್ಲಿ ಯಾವುದೇ ವ್ಯಾಪಾರಿ ಸ್ಥಳವನ್ನು ಹೊಂದಿಲ್ಲ. ಕೇವಲ ವ್ಯವಹಾರದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದೆ ಎಂದು ಸ್ಪಷ್ಟನೆ ನೀಡಿದೆ.
ಭಾರತೀಯ ಸಂವಿಧಾನದ ಅಡಿಯಲ್ಲಿ ಇರುವ ಕಾನೂನು ನಿಬಂಧನೆಗಳನ್ನು ಪ್ರಶ್ನಿಸಲು ವಿದೇಶಿ ವಾಣಿಜ್ಯ ಸಂಸ್ಥೆಗಳಿಗೆ ಯಾವುದೇ ಅಧಿಕಾರ ಇರುವುದಿಲ್ಲ. ಈ ಹಕ್ಕುಗಳು ಕೇವಲ ದೇಶದ ನಾಗರಿಕರಿಗೆ ಮಾತ್ರ ಲಭ್ಯವಿದೆ ಎಂದು ಅಫಿಡವಿಟ್ನಲ್ಲಿ ತಿಳಿಸಲಾಗಿದೆ.
ಹೊಸ ಐಟಿ ನಿಯಮಾವಳಿಗಳನ್ನು ನ್ಯಾಯಾಲಯದ ಎದುರು ಸಮರ್ಥಿಸಿಕೊಂಡಿರುವ ಕೇಂದ್ರ ಸರ್ಕಾರ ಇದು ಅಪರಾಧಗಳನ್ನು ತಡೆಯಲು ಕಾನೂನು ವ್ಯವಸ್ಥೆಗೆ ನೆರವಾಗಲಿದೆ ಎಂದು ಹೇಳಿದೆ.
ವಾಟ್ಸಾಪ್ನ ಹೊಸ ನಿಯಮಾವಳಿಗಳ ವಿಚಾರವಾಗಿಯೂ ಅಫಿಡವಿಟ್ನಲ್ಲಿ ವಿವರಣೆ ನೀಡಿರುವ ಕೇಂದ್ರ ಸರ್ಕಾರ ವಾಟ್ಸಾಪ್ನ ಹೊಸ ನಿಯಮಾವಳಿಗಳು ಬಳಕೆದಾರರ ವೈಯಕ್ತಿಕ ಮಾಹಿತಿಗಳನ್ನು ಫೇಸ್ಬುಕ್ಗೆ ನೀಡುತ್ತದೆ. ಈ ನಿಯಮವು ರಾಷ್ಟ್ರದ ಭದ್ರತೆ ಹಾಗೂ ಅದರ ಸಾರ್ವಭೌಮತ್ವಕ್ಕೆ ಹಾನಿ ಉಂಟು .ಅಲ್ಲದೇ ವೈಯಕ್ತಿಕ ಖಾಸಗಿತನದ ಮೇಲೂ ಇದು ಪರಿಣಾಮ ಬೀರುತ್ತದೆ ಎಂದು ಹೇಳಿದೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ