Main News

ಭಾರತದ ಹೊಸ ಐಟಿ ನಿಯಮಾವಳಿಗಳನ್ನು ಪ್ರಶ್ನಿಸುವ ಯಾವುದೇ ಅಧಿಕಾರವಿಲ್ಲ‌- ಕೇಂದ್ರ

ಜಾಗತಿಕ ಮೆಸೇಜಿಂಗ್​ ವೇದಿಕೆಗಳನ್ನು ವಿದೇಶಿ ಹಾಗೂ ವಿದೇಶಿ ವಾಣಿಜ್ಯ ಸಂಸ್ಥೆ ಎಂದು ಕರೆಯುವ ಹೊಸ ಐಟಿ ನಿಯಮಗಳನ್ನು ಪ್ರಶ್ನಿಸಿ ವಾಟ್ಸಾಪ್​ ಹಾಗೂ ಫೇಸ್​ಬುಕ್​ ಸಲ್ಲಿಸಿದ್ದ ಅರ್ಜಿಯನ್ನು ಕೇಂದ್ರ ಸರ್ಕಾರ ವಿರೋಧ ಸೂಚಿಸಿ ತಳ್ಳಿ ಹಾಕಿದೆ.

ದೆಹಲಿ ಹೈಕೋರ್ಟ್​ನಲ್ಲಿ ಸಲ್ಲಿಸಲಾಗಿರುವ ಅಫಿಡವಿಟ್​ನಲ್ಲಿ ಕೇಂದ್ರ ಸರ್ಕಾರವು, ವಿದೇಶಿ ವಾಣಿಜ್ಯ ಸಂಸ್ಥೆಯಾಗಿರುವ ಫೇಸ್​ಬುಕ್​ ಹಾಗೂ ವಾಟ್ಸಾಪ್​​ಗೆ ಭಾರತದ ಸಾಂವಿಧಾನಿಕ ಕಾನೂನುಗಳನ್ನು ಪ್ರಶ್ನೆ ಮಾಡುವ ಅಧಿಕಾರವಿಲ್ಲ ಎಂದು ಹೇಳಿತ್ತು.

ಈ ಕಂಪನಿಯು ಭಾರತದಲ್ಲಿ ಯಾವುದೇ ವ್ಯಾಪಾರಿ ಸ್ಥಳವನ್ನು ಹೊಂದಿಲ್ಲ. ಕೇವಲ ವ್ಯವಹಾರದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದೆ ಎಂದು ಸ್ಪಷ್ಟನೆ ನೀಡಿದೆ.

ಭಾರತೀಯ ಸಂವಿಧಾನದ ಅಡಿಯಲ್ಲಿ ಇರುವ ಕಾನೂನು ನಿಬಂಧನೆಗಳನ್ನು ಪ್ರಶ್ನಿಸಲು ವಿದೇಶಿ ವಾಣಿಜ್ಯ ಸಂಸ್ಥೆಗಳಿಗೆ ಯಾವುದೇ ಅಧಿಕಾರ ಇರುವುದಿಲ್ಲ. ಈ ಹಕ್ಕುಗಳು ಕೇವಲ ದೇಶದ ನಾಗರಿಕರಿಗೆ ಮಾತ್ರ ಲಭ್ಯವಿದೆ ಎಂದು ಅಫಿಡವಿಟ್​ನಲ್ಲಿ ತಿಳಿಸಲಾಗಿದೆ.

ಹೊಸ ಐಟಿ ನಿಯಮಾವಳಿಗಳನ್ನು ನ್ಯಾಯಾಲಯದ ಎದುರು ಸಮರ್ಥಿಸಿಕೊಂಡಿರುವ ಕೇಂದ್ರ ಸರ್ಕಾರ ಇದು ಅಪರಾಧಗಳನ್ನು ತಡೆಯಲು ಕಾನೂನು ವ್ಯವಸ್ಥೆಗೆ ನೆರವಾಗಲಿದೆ ಎಂದು ಹೇಳಿದೆ.

ವಾಟ್ಸಾಪ್​ನ ಹೊಸ ನಿಯಮಾವಳಿಗಳ ವಿಚಾರವಾಗಿಯೂ ಅಫಿಡವಿಟ್​ನಲ್ಲಿ ವಿವರಣೆ ನೀಡಿರುವ ಕೇಂದ್ರ ಸರ್ಕಾರ ವಾಟ್ಸಾಪ್​ನ ಹೊಸ ನಿಯಮಾವಳಿಗಳು ಬಳಕೆದಾರರ ವೈಯಕ್ತಿಕ ಮಾಹಿತಿಗಳನ್ನು ಫೇಸ್​ಬುಕ್​ಗೆ ನೀಡುತ್ತದೆ. ಈ ನಿಯಮವು ರಾಷ್ಟ್ರದ ಭದ್ರತೆ ಹಾಗೂ ಅದರ ಸಾರ್ವಭೌಮತ್ವಕ್ಕೆ ಹಾನಿ ಉಂಟು .ಅಲ್ಲದೇ ವೈಯಕ್ತಿಕ ಖಾಸಗಿತನದ ಮೇಲೂ ಇದು ಪರಿಣಾಮ ಬೀರುತ್ತದೆ ಎಂದು ಹೇಳಿದೆ.

Team Newsnap
Leave a Comment
Share
Published by
Team Newsnap

Recent Posts

ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು

ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More

May 5, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More

May 5, 2024

ಲೋಕಾಯುಕ್ತರ ಹೆಸರಿನಲ್ಲಿ ಬೆಸ್ಕಾಂ ಎಂಡಿಗೆ ಬೆದರಿಕೆ – ದೂರು ದಾಖಲು

ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More

May 5, 2024

ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ

ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More

May 4, 2024

ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ

ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್​.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More

May 4, 2024

ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ

ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More

May 4, 2024