Karnataka

ನಾಳೆ ‘ಕರ್ನಾಟಕ ಬಂದ್’ ಇಲ್ಲ : ವಾಟಾಳ್ ನಾಗರಾಜ್

ಹಲವರ ವಿರೋಧಗಳ ಬಳಿಕ ಕನ್ನಡಪರ ಸಂಘಟನೆಗಳು ನಾಳೆ ನಡೆಯಬೇಕಿದ್ದ ಕರ್ನಾಟಕ ಬಂದ್​ ಅನ್ನು ಹಿಂದಕ್ಕೆ ಪಡೆಯಲಾಗಿದೆ ಎಂದು ವಾಟಾಳ್ ನಾಗರಾಜ್ ತಿಳಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ಕನ್ನಡಿಗರ ಮೇಲೆ ನಡೆಯುತ್ತಿರುವ ದಬ್ಬಾಳಿಕೆ ಹಾಗೂ ಬೆಳಗಾವಿಯಲ್ಲಿ ಎಂಇಎಸ್​ ನಡೆಸುತ್ತಿರುವ ಪುಂಡಾಟವನ್ನು ಖಂಡಿಸಿ ಡಿಸೆಂಬರ್ 31 ರಂದು ಕರ್ನಾಟಕ ಬಂದ್ ಮಾಡಲಾಗುವುದು ಎಂದು ಕನ್ನಡಪರ ಸಂಘಟನೆಗಳು ಡಿಸೆಂಬರ್ 22 ರಂದು ಘೋಷಣೆ ಮಾಡಿದ್ದವು.

ಹಲವು ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದವು. ಹೀಗಾಗಿ ಇಂದು ಸಂಜೆ ಕನ್ನಡ ಪರ ಹೋರಾಟಗಾರರಾದ ವಾಟಾಳ್ ನಾಗರಾಜ್, ಪ್ರವೀಣ್ ಶೆಟ್ಟಿ ಹಾಗೂ ಉಮೇಶ್ ಬಣಕಾರ್  ಸೇರಿ ಹಲವು ಮುಖಂಡರು ಸಿಎಂ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ್ದರು. ಭೇಟಿ ಬಳಿಕ ನಾಳೆ ಕರ್ನಾಟಕ ಬಂದ್ ಮಾಡುವ ನಿರ್ಧಾರವನ್ನು ಹಿಂಪಡೆದುಕೊಂಡಿರುವುದಾಗಿ ತಿಳಿಸಿದ್ದಾರೆ.

ಎಂಇಎಸ್ ನಿಷೇಧದ ಭರವಸೆ :

ಕನ್ನಡ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಮಾತನಾಡಿ, ಬಂದ್ ಬೇಡ ಎಂದು ಸಿಎಂ ಎರಡು ಬಾರಿ ಮಾತಾಡಿದರು.

ಎಂಇಎಸ್ ನಿಷೇಧ ಮಾಡುವ ಭರವಸೆ ನೀಡಿದರು. ಕಾನೂನು ಪ್ರಕಾರ ನಿಷೇಧ ಮಾಡಲು ಪ್ರಯತ್ನ ಮಾಡ್ತೀವಿ. ಬಂದ್ ಹಿಂಪಡೆಯಲು ಸಿಎಂ ಮನವಿ ಮಾಡಿದರು. ಅವರ ಮಾತಿಗೆ ಗೌರವ ಕೊಟ್ಟು ಬಂದ್ ವಾಪಸ್ ಪಡೆಯುವುದಾಗಿ ಹೇಳಿದರು.

ವ್ಯಾಪಾರ ವಹಿವಾಟು ಮಾಡಬಹುದು :

ಕನ್ನಡದ ರಕ್ಷಣೆಗೆ ಸರ್ಕಾರ ಯಾವತ್ತು ಬದ್ಧವಾಗಿದೆ. ಕನ್ನಡ ಸಂಘಟನೆ ನಾಳೆ ಕರೆ ಕೊಟ್ಟಿರುವ ಬಂದ್‍ನ್ನು ವಾಪಸ್ ತೆಗೆದುಕೊಂಡಿದೆ. ನಾಳೆ ಬಂದ್ ಇಲ್ಲ. ಎಲ್ಲರೂ ಕೂಡ ಎಂದಿನಂತೆ ವ್ಯಾಪಾರ ವ್ಯವಹಾರಗಳನ್ನು ನಡೆಸಬಹುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದರು.

Team Newsnap
Leave a Comment
Share
Published by
Team Newsnap

Recent Posts

SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ

ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More

May 17, 2024

ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More

May 17, 2024

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್‌ನಲ್ಲಿ ಘೋಷಣೆ… Read More

May 16, 2024

ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More

May 16, 2024

ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ

ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More

May 16, 2024

ಪ್ರಜ್ವಲ್ ಪೆಂಡ್ರೈವ್ ಪ್ರಕರಣ : 10 ಪೆನ್ ಡ್ರೈವ್ ಪ್ರೀತಂ ಗೌಡ ಆಪ್ತರ ಮನೆಯಲ್ಲಿ ಪತ್ತೆ

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅಧಿಕಾರಿಗಳು ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಆಪ್ತರ… Read More

May 16, 2024