ಮಂಡ್ಯ, ವರುಣಾ ಅಥವಾ ಶಿಕಾರಿಪುರ ಅಂತಾ ಏನೂ ಇಲ್ಲ. ಪಕ್ಷದ ವರಿಷ್ಠರು ಹೇಳಿದ ಕಡೆ ನಾನು ಸ್ಪರ್ಧೆ ಮಾಡುತ್ತೇನೆ ಎಂದು ಬಿಜೆಪಿ ಯುವ ನಾಯಕ ಬಿ ವೈ ವಿಜಯೇಂದ್ರ ಹೇಳಿದರು.
ಮಂಡ್ಯದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮಂಡ್ಯದಲ್ಲಿ ಮನೆ ಮಾಡಲೇಬೇಕು ಅಂತಾ ಏನಿಲ್ಲ. ಜನರ ಮನಸ್ಸಿನಲ್ಲಿ ಮನೆ ಮಾಡಿದರೆ ಸಾಕು ಎಂದರು.ಮಾರ್ಚ್ 1 ರಿಂದ ತಿರುಪತಿ ದೇವಸ್ಥಾನ ದರ್ಶನಕ್ಕಾಗಿ ಹೊಸ ವ್ಯವಸ್ಥೆ ಜಾರಿ
ರಾಜ್ಯದ ಯುವ ಮೋರ್ಚಾ ಸಮಾವೇಶದ ಹೊಣೆ ನನಗೆ ನೀಡಿದ್ದಾರೆ. ರಾಜ್ಯಾದ್ಯಂತ ಸಂಚರಿಸಿ ಪಕ್ಷ ಸಂಘಟನೆಯ ಕೆಲಸ ಮಾಡುತ್ತೇನೆ. ಡಬಲ್ ಇಂಜಿನ್ ಸರ್ಕಾರವನ್ನು ರಾಜ್ಯದ ಜನ ಒಪ್ಪಿದ್ದಾರೆ. ಅಭಿವೃದ್ಧಿ, ಹಿಂದುತ್ವದ ಅಜೆಂಡಾದಡಿ ನಾವು ಮತ ಕೇಳುತ್ತೇವೆ. ಹಳೇ ಮೈಸೂರು ಭಾಗ ಸೇರಿ ರಾಜ್ಯದಲ್ಲಿ ಮತ್ತೆ ಬಿಜೆಪಿ ಗೆಲ್ಲುತ್ತೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ನಿನ್ನೆ ಮಂಡ್ಯ ತಾಲೂಕಿನ ಮಾಚಹಳ್ಳಿಗೆ ಮೊದಲ ಬಾರಿಗೆ ವಿಜಯೇಂದ್ರ ಭೇಟಿ ನೀಡಿದ್ದರು. ಜೆಡಿಎಸ್ ಭದ್ರಕೋಟೆಯಾಗಿರುವ ಮಂಡ್ಯವನ್ನು ಛಿದ್ರಗೊಳಿಸಲು ಮುಂದಾಗಿದ್ದರು. ಇದೀಗ ಅಲ್ಲಿಂದನೇ ಸ್ಪರ್ಧಿಸುತ್ತಿದ್ದಾರೆ ಎಂಬ ಪ್ರಶ್ನೆ ಕಾಡಿತ್ತು.ಈ ವಿಚಾರವಾಗಿ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಒಟ್ಟಾರೆಯಾಗಿ ಮುಂದಿನ ದಿನಗಳಲ್ಲಿ ಯಾವ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುತ್ತಾರೆ ಎಂಬುದು ಕಾದುನೋಡಬೇಕಿದೆ.
- ಮೈಸೂರು : ಇವಿಎಂ, ವಿವಿ ಪ್ಯಾಟ್ ಗಳಿಗೆ ಬಿಗಿ ಭದ್ರತೆ: ಸ್ಟ್ರಾಂಗ್ ರೂಂ ಪರಿಶೀಲಿಸಿದ ಡಿಸಿ ಡಾ ರಾಜೇಂದ್ರ
- ಕೇಂದ್ರದಿಂದ ರಾಜ್ಯಕ್ಕೆ 3,454 ಕೋಟಿ ರು ಬರಪರಿಹಾರ ಘೋಷಣೆ
- 14 ಕ್ಷೇತ್ರಗಳ ಪೈಕಿ ಮಂಡ್ಯ ಕ್ಷೇತ್ರದಲ್ಲಿ ಹೆಚ್ಚು ಮತದಾನ: ಮಂಡ್ಯದಲ್ಲಿ ಶೇ 81.67 ರಷ್ಟು. ಮತದಾನ
- ಮಂಡ್ಯ , ಬೆಂಗಳೂರು ಕ್ಷೇತ್ರದ 9 ಗಂಟೆ ತನಕದ ಮತದಾನದ ವಿವರ
- ಮೂವರು ಯುವಕರು ರೈಲಿಗೆ ಸಿಲುಕಿ ದುರ್ಮರಣ
- ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ