Karnataka

ಲೋಕ ಚುನಾವಣೆ: ಮತ ಎಣಿಕೆ ಕಾರ್ಯದಲ್ಲಿ ಯಾವುದೇ ಲೋಪ ಬೇಡ: ಡಾ. ಕುಮಾರ

ಮಂಡ್ಯ : ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ರ ಮತ ಎಣಿಕೆ ಕಾರ್ಯ ಜೂನ್ 4 ರಂದು ನಡೆಯಲಿದೆ, ಉತ್ತಮ ರೀತಿಯಲ್ಲಿ ತರಬೇತಿ ಪಡೆದು ಯಾವುದೇ ಲೋಪದೋಷವಿಲ್ಲದೇ ಮತ ಎಣಿಕೆ ಕಾರ್ಯ ಯಶಸ್ವಿಗೊಳಿಸಿ ಎಂದು ಜಿಲ್ಲಾಧಿಕಾರಿ ಡಾ. ಕುಮಾರ ಇವಿಎಂ ಮತ ಎಣಿಕೆ ಸಿಬ್ಬಂದಿಗಳಿಗೆ ಶುಭ ಹಾರೈಸಿ ಕರೆ ನೀಡಿದರು.

ಮಂಡ್ಯ ಅಂಬೇಡ್ಕರ್ ಭವನದಲ್ಲಿ ಗುರುವಾರ ಮಂಡ್ಯ ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ರ ಇವಿಎಂ ಮತ ಎಣಿಕೆ ಸಿಬ್ಬಂದಿಗಳಿಗೆ ಆಯೋಜಿಸಲಾದ ಚುನಾವಣಾ ತರಬೇತಿಯಲ್ಲಿ ಮಾತನಾಡಿದರು.

ಚುನಾವಣೆಯಲ್ಲಿ ಮತದಾನ ಕಾರ್ಯಗಳಿಗೆ ಸಂಬಂಧಿಸಿದಂತೆ ನೇಮಕಗೊಂಡಿದ್ದ ಸೆಕ್ಟರ್ ಅಧಿಕಾರಿಗಳು, ಎಆರ್ ಒ ಗಳು, ಪಿಆರ್ ಒಗಳು, ಮಾಸ್ಟರ್ ಟ್ರೇನರ್ ಗಳನ್ನೇ ಮತ ಎಣಿಕೆ ಸಿಬ್ಬಂದಿಗಳಾಗಿ ನೇಮಕ ಮಾಡಲಾಗಿದೆ. ಎಲ್ಲಾ ಮತ ಎಣಿಕೆ ಸಿಬ್ಬಂದಿಗಳಿಗೂ ಇವಿಎಂ ಬಳಕೆಯ ಅನುಭವವಿರುವುದರಿಂದ ಭಯ ಪಡದೆ ಧೈರ್ಯ ಹಾಗೂ ಆತ್ಮ ವಿಶ್ವಾಸದಿಂದ ಕಾರ್ಯ ನಿರ್ವಹಿಸಿ ಎಂದರು.

ಮತ ಎಣಿಕೆಯ ದಿನ ಎಲ್ಲಾ ಸಿಬ್ಬಂದಿಗಳು ನಿಗದಿಪಡಿಸುವ ಸಮಯಕ್ಕೆ ಸರಿಯಾಗಿ ಹಾಜರಿರಬೇಕು. ಮತ ಎಣಿಕೆ ಕೊಠಡಿಗೆ ಮೊಬೈಲ್ ಅನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಪ್ರತಿಯೊಂದು ಟೇಬಲ್ ಗಳ ಮೇಲೂ ಸಿ‌ಸಿ ಕ್ಯಾಮರಾ ಇದ್ದು, ಬಹಳ ಜಾಗರೂಕತೆಯಿಂದ ಮತ ಎಣಿಕೆ ನಡೆಸಿ ಎಂದರು.

ಕೆಲವು ಸಂದರ್ಭದಲ್ಲಿ ಮತ ಎಣಿಕೆಯ ಸಂದರ್ಭದಲ್ಲಿ ಇ.ವಿ.ಎಂ. ಗೆ ಸಂಬಂಧಿಸಿದಂತೆ ತಾಂತ್ರಿಕಾ ತೊಂದರೆ ಉಂಟಾಗಬಹುದು. ಕ್ಲೋಸ್ ಬಟನ್ ಉಪಯೋಗಿಸಿ ಕ್ಲೋಸ್ ಮಾಡದ ಪ್ರಕರಣ ಕಂಡು ಬರಬಹುದು ಇಂತಹ ಸಂದರ್ಭದಲ್ಲಿ ಯಾವ ರೀತಿ ಕೆಲಸ ನಿರ್ವಹಿಸಬೇಕು ಎಂದು ಚುನಾವಣಾ ಆಯೋಗ ನಿರ್ದೇಶನ ನೀಡಿದೆ ಅದನ್ನು ಅನುಸರಿಸಬೇಕು. ಸಮಸ್ಯೆ ಎದುರಾದಾಗ ಅದಕ್ಕೆ ತಹಶೀಲ್ದಾರ್ ಅಥವಾ ಸಹಾಯಕ ಚುನಾವಣಾಧಿಕಾರಿಗಳ ಬಳಿ ಪರಿಹಾರ ಪಡೆದುಕೊಳ್ಳುತ್ತೇವೆ ಎಂಬ ಮನೋಭಾವ ಇರಬರದು ಎಂದರು.

ಮತ ಎಣಿಕೆಗೆ ಸಂಬಂಧಿಸಿದಂತೆ ನಿಯೋಜಿಸಲಾಗುವ ಎಜೆಂಟ್ ಗಳ ಬಳಿ ಶಾಂತವಾಗಿ ವ್ಯವಹರಿಸಿ. ಅವರಿಗೆ ಸಂಶಯಗಳಿದ್ದಲ್ಲಿ ಅವುಗಳನ್ನು ಪರಿಹರಿಸಿ ಎಂದರು.

ಮತ ಎಣಿಕೆ ಮೇಲ್ವಿಚಾರಕರ ಜವಾಬ್ದಾರಿಯು ಬಹಳ ಮುಖ್ಯವಾಗಿದ್ದು, ಮೇಲ್ವಿಚಾರಕರು ಪ್ರತಿ ಇ.ವಿ.ಎಂ ಗಳಲ್ಲಿ ಎಣಿಕೆಯಾದ ತಕ್ಷಣ ನಿಖರವಾಗಿ ಅಂಕಿಆಂಶಗಳನ್ನು ಬರೆದುಕೊಳ್ಳಬೇಕು. ಇದರಲ್ಲಿ ತಪ್ಪಾದರೆ ಎಣಿಕೆ ಕೆಲಸಗಳು ಕಷ್ಟಕರವಾಗುತ್ತದೆ. ಆದರಿಂದ ತರಬೇತಿಯ ಅವಧಿಯಲ್ಲಿ ಸ್ಪಷ್ಟವಾದ ಮಾಹಿತಿ ಹಾಗೂ ಮಾರ್ಗದರ್ಶನ ಪಡೆಯಿರಿ. ಯಾವುದೇ ಗೊಂದಲವಿದ್ದರೂ ಇಲ್ಲಿಯೇ ಬಗೆಹರಿಸಿಕೊಳ್ಳಿ ಎಂದರು.ಮದುವೆ ಆಗಲು ವಧು ಸಿಗಲಿಲ್ಲವೆಂದು ಆತ್ಮಹತ್ಯೆಗೆ ಶರಣಾದ ಯುವಕ

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಡಾ ಎಚ್. ಎಲ್ ನಾಗರಾಜು, ಸಹಾಯಕ ಚುನಾವಣಾಧಿಕಾರಿಗಳಾದ ಮಹೇಶ್, ಆನಂದ್ ಕುಮಾರ್ , ಕೃಷ್ಣ ಕುಮಾರ್, ಲೋಕನಾಥ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Team Newsnap
Leave a Comment

Recent Posts

ಸರ್ಕಾರಿ ನೌಕರರಿಗೆ 27% ವೇತನ ಹೆಚ್ಚಳ : ಸಿಎಂ

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಈ ಬಾರಿಯ ಸಚಿವ ಸಂಪುಟ ಸಭೆಯಲ್ಲಿ ಸರ್ಕಾರಿ ನೌಕರರಿಗೆ ಶೇಕಡಾ 27 %ರಷ್ಟು ವೇತನ… Read More

June 20, 2024

KSRTC ಬಸ್ ಟಿಕೆಟ್ ದರ ಹೆಚ್ಚಳ..?

ಬೆಂಗಳೂರು : ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ರಾಜ್ಯದಲ್ಲಿ KSRTC ಬಸ್ ಟಿಕೆಟ್ ದರ ಹೆಚ್ಚಳ ಮಾಡುವ ಬಗ್ಗೆ ಸುಳಿವು… Read More

June 19, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಜೂನ್ 19 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,200 ರೂಪಾಯಿ ದಾಖಲಾಗಿದೆ. 24… Read More

June 19, 2024

ಪವಿತ್ರಾ ಗೌಡ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು

ಬೆಂಗಳೂರು: ಪವಿತ್ರಾ ಗೌಡ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು , ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ… Read More

June 18, 2024

ಪೆಂಡ್ರೈವ್ ಕೇಸ್ : ಪ್ರಜ್ವಲ್‌ ರೇವಣ್ಣಗೆ 14 ದಿನಗಳ ನ್ಯಾಯಾಂಗ ಬಂಧನ

ಬೆಂಗಳೂರು : 42ನೇ ಎಸಿಎಂಎಂ ನ್ಯಾಯಾಲಯ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಪ್ರಜ್ವಲ್‌ ರೇವಣ್ಣ ಅವರಿಗೆ 14 ದಿನಗಳ ನ್ಯಾಯಾಂಗ… Read More

June 18, 2024

ನಾಳೆ ಜೆಡಿಎಸ್ ನಿಂದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಇಂದು ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ದರ ಹೆಚ್ಚಿಸಿದ್ದನ್ನು ಖಂಡಿಸಿ ಬಿಜೆಪಿ ಪ್ರತಿಭಟನೆ ನಡೆಸಿದ್ದು… Read More

June 17, 2024