ಮೈತ್ರಿ ಸರ್ಕಾರದಲ್ಲಿ‌ ಸಿದ್ದು ಒತ್ತಡ ಸಾಕಾಗಿತ್ತು : ನಾನು ಪ್ರಥಮ ದರ್ಜೆ ಗುಮಾಸ್ತನಾಗಿದ್ದೆ- ಎಚ್ ಡಿ ಕೆ

Team Newsnap
1 Min Read

ಸಿದ್ದರಾಮಯ್ಯ ಸದಾ ಒತ್ತಡ ಹೇರುತ್ತಿದ್ದರು. ನನಗೆ ಯಾವುದೇ ಸ್ವಾತಂತ್ರ್ಯ ಇರಲಿಲ್ಲ. ಹೀಗಾಗಿ ನಾನು ಎಫ್ ಡಿಎ ಕ್ಲರ್ಕ್ ರೀತಿಯಲ್ಲಿ ಕೆಲಸ ಮಾಡಿದೆ.

ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಬಾಗಲಕೋಟೆಯಲ್ಲಿ ಸುದ್ದಿಗಾರರ ಜೊತೆ ತಮ್ಮ ನೋವು ತೋಡಿಕೊಂಡರು.

ನಾನು ಸಿಎಂ ಆಗಿದ್ದರೂ ಕೂಡ ಸ್ವತಂತ್ರವಾಗಿ ಕೆಲಸ ಮಾಡಲು ಸಿದ್ದರಾಮಯ್ಯ ಬಿಡುತ್ತಿರಲಿಲ್ಲ. ಹಳೆಯ ನೀರಾವರಿ ಯೋಜನೆಯನ್ನು ಮುಂದುವರಿಸುವಂತೆ ಮಾಜಿ ಸಿಎಂ ಸಿದ್ದರಾಮಯ್ಯ ಒತ್ತಡ ಹೇರುತ್ತಿದ್ರೆ, ರೈತರ ಸಾಲಮನ್ನಾ ಮಾಡುವಂತೆ ಬಿಜೆಪಿ ನಾಯಕರು ಒತ್ತಡ ಹೇರುತ್ತಿದ್ದರು ಎಂದು ಹೇಳಿದರು.

ನಾನು ಮುಖ್ಯಮಂತ್ರಿಯಾಗಿದ್ದರೂ ಕೂಡ ತಾನು ಎಫ್ ಡಿಎ ಕ್ಲರ್ಕ್ ಆಗಿ ಕೆಲಸ ಮಾಡಿದ್ದೇನೆ ಎಂದು ನೊಂದು ಹೇಳಿದರು.

ವಿಧಾನ ಪರಿಷತ್ ಸದಸ್ಯ ವಿಶ್ವನಾಥ್ ವಿರುದ್ದ ಹರಿಹಾಯ್ದಿದ ಕುಮಾರಸ್ವಾಮಿ, ಸಾಹಿತಿ ಕೋಟಾದಲ್ಲಿ ಎಂಎಲ್ ಸಿ ಆಗಿದ್ದಾರೆ. ಈಗಾಗಲೇ ಎಲ್ಲಾ ಪಕ್ಷಕ್ಕೂ ಸೇರ್ಪಡೆಯಾಗಿದ್ದಾರೆ. ಮುಂದೆ ಯಾವ ಪಕ್ಷಕ್ಕೆ ಸೇರುತ್ತಾರೋ ಗೊತ್ತಿಲ್ಲ. ಜೆಡಿಎಸ್ ವಿರುದ್ದ ಆರೋಪ ಮಾಡಿದ್ದಾರೆ. ಇದೀಗ ಬಿಜೆಪಿ ವಿರುದ್ದವೂ ಆರೋಪಿಸುತ್ತಿದ್ದಾರೆ ಎಂದು ಲೇವಡಿ ಮಾಡಿದ್ದಾರೆ.

Share This Article
Leave a comment