ಬೆಂಗಳೂರು : ವೃಕ್ಷಮಾತೆ , ಪರಿಸರ ಪ್ರೇಮಿ ಸಾಲುಮರದ ತಿಮ್ಮಕ್ಕ ಭಾನುವಾರ ತಮ್ಮ ನಿವಾಸದಲ್ಲಿ ಕಾಲು ಜಾರಿ ಬಿದ್ದು ಬೆನ್ನು ಮೂಳೆ ಮುರಿದುಕೊಂಡಿದ್ದಾರೆ.
ತಿಮ್ಮಕ್ಕ ನನ್ನು ಜಯನಗರ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿದೆ. ಪದ್ಮಶ್ರೀ ಪುರಸ್ಕೃತ ಸಾಲುಮರದ ತಿಮ್ಮಕ್ಕ ಇಂದು ಸಂಜೆ 4.30ರ ವೇಳೆಗೆ ಬೆಂಗಳೂರಿನ ಮಂಜುನಾಥನಗರದಲ್ಲಿರುವ ತಮ್ಮ ಮನೆಯಲ್ಲಿ ಕಾಲು ಜಾರಿ ಬಿದ್ದು, ಬೆನ್ನು ಮೂಳೆಗೆ ಪೆಟ್ಟಾಗಿದೆ.
112 ವರ್ಷದ ಸಾಲುಮರದ ತಿಮ್ಮಕ್ಕ ಅವರಿಗೆ ಚಿಕಿತ್ಸೆ ಮುಂದುವರಿದಿದೆ. ಬೆನ್ನಿನ ಭಾಗಕ್ಕೆ ಸ್ವಲ್ಪ ಪೆಟ್ಟಾಗಿದೆ, ಉಳಿದಂತೆ ಅವರಿಗೆ ಯಾವುದೇ ಸಮಸ್ಯೆ ಇಲ್ಲ ಎಂದು ಕೌಟುಂಬಿಕ ಮೂಲಗಳಿಂದ ತಿಳಿದು ಬಂದಿದೆ.ಚಾಮರಾಜನಗರದಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಬೆಂಕಿಗೆ ಆಹುತಿ
ತುಮಕೂರಿನ ಗುಬ್ಬಿ ತಾಲೂಕಿನಲ್ಲಿ ಜನಿಸಿದ ತಿಮ್ಮಕ್ಕ ಪರಿಸರದ ಮೇಲಿನ ತಮ್ಮ ಪ್ರೀತಿಯಿಂದ ಸಾಲುಮರದ ತಿಮ್ಮಕ್ಕ ಎಂದೇ ಖ್ಯಾತಿ ಪಡೆದಿದ್ದಾರೆ.
- ಮೈಸೂರು : ಇವಿಎಂ, ವಿವಿ ಪ್ಯಾಟ್ ಗಳಿಗೆ ಬಿಗಿ ಭದ್ರತೆ: ಸ್ಟ್ರಾಂಗ್ ರೂಂ ಪರಿಶೀಲಿಸಿದ ಡಿಸಿ ಡಾ ರಾಜೇಂದ್ರ
- ಕೇಂದ್ರದಿಂದ ರಾಜ್ಯಕ್ಕೆ 3,454 ಕೋಟಿ ರು ಬರಪರಿಹಾರ ಘೋಷಣೆ
- 14 ಕ್ಷೇತ್ರಗಳ ಪೈಕಿ ಮಂಡ್ಯ ಕ್ಷೇತ್ರದಲ್ಲಿ ಹೆಚ್ಚು ಮತದಾನ: ಮಂಡ್ಯದಲ್ಲಿ ಶೇ 81.67 ರಷ್ಟು. ಮತದಾನ
- ಮಂಡ್ಯ , ಬೆಂಗಳೂರು ಕ್ಷೇತ್ರದ 9 ಗಂಟೆ ತನಕದ ಮತದಾನದ ವಿವರ
- ಮೂವರು ಯುವಕರು ರೈಲಿಗೆ ಸಿಲುಕಿ ದುರ್ಮರಣ
- ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ