February 21, 2026

Newsnap Kannada

The World at your finger tips!

kota srinivas

ದೇವಸ್ಥಾನಗಳನ್ನು ಭಕ್ತರ ಕೈಗೆ ನೀಡಬೇಕೆಂಬ ಚಿಂತನೆ – ಸಚಿವ ಕೋಟ

Spread the love

ಹಿಂದೂ ದೇವಾಲಯಗಳನ್ನು ಸರ್ಕಾರದ ಹಿಡಿತದಿಂದ ತಪ್ಪಿಸಿ ಭಕ್ತರ ಕೈಗೆ ನೀಡಬೇಕು ಎಂಬ ಚಿಂತನೆ ಇದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಸರ್ಕಾರದ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳ ಹಸ್ತಾಂತರ ವಿಚಾರ ಸಂಬಂಧ ಮಾಧ್ಯಮಗಳ ಜೊತೆ ಮಾತನಾಡಿದರು.

ಬಿಜೆಪಿ, ಆರ್ ಎಸ್.ಎಸ್ ಕಾರ್ಯಕರ್ತರಿಗೆ ನೂರಾರು ಕೋಟಿ ಬೆಲೆ ಬಾಳುವ ದೇವಸ್ಥಾನಗಳನ್ನು ಹಸ್ತಾಂತರಿಸುವ ಅಜೆಂಡಾ ಎಂಬ ಡಿಕೆಶಿ ಆರೋಪಕ್ಕೆ ತಿರುಗೇಟು ನೀಡಿದರು.

ಹಿಂದೂ ದೇವಾಲಯಗಳನ್ನು ಸರ್ಕಾರದ ಹಿಡಿತದಿಂದ ತಪ್ಪಿಸಿ ಭಕ್ತರ ಕೈಗೆ ನೀಡಬೇಕು ಎಂಬ ಚಿಂತನೆ ಇದೆ. ಭಕ್ತರು ಅಂದ್ರೆ ಬಿಜೆಪಿ, ಆರ್.ಎಸ್.ಎಸ್ ಕಾರ್ಯಕರ್ತರು ಆಗಿರಬಹುದು. ಡಿಕೆಶಿ ಶಿವಕುಮಾರ್ ಕೂಡ ಆಗಿರಬಹುದು. ಭಕ್ತರು ಅಂದ್ರೆ ಎಲ್ಲರು ಬರುತ್ತಾರೆ. ನಾವು ಭಕ್ತರಿಗೆ ಕೊಡಬೇಕು ಅಂತ ಆಲೋಚಿಸಿದ್ದೇವೆ. ಇನ್ನೂ ಮಾರ್ಗಸೂಚಿ ಸಿದ್ಧಪಡಿಸಿಲ್ಲ ಎಂದರು.

error: Content is protected !!