ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಕೇಂದ್ರ ಸರ್ಕಾರ ಜಾರಿಗೆ ತಂದ ನಂತರ ಅಪರಾಧಗಳಿಗೆ ಬ್ರೇಕ್ ಹಾಕಲು ಕ್ರೈಂ ವಿಭಾಗದಲ್ಲಿ ಹೊಸ ಕಾನೂನು ತರಲು ರಾಜ್ಯ ಸರ್ಕಾರ ಯೋಜನೆ ರೂಪಿಸಿದೆ.
ಸಾರ್ವಜನಿಕರ ದಾಖಲೆಗಳು, ರಾಜ್ಯ ಸರ್ಕಾರದ ರಹಸ್ಯ ವಿಷಯಗಳನ್ನು ಬಿಗಿಭದ್ರತೆಯಲ್ಲಿ ಕಾಪಾಡಲು ಹೊಸ ಕಾನೂನನ್ನ ತರಲು ಚಿಂತಿಸಲಾಗಿದೆ.
ನಿಮ್ಮದೇ ಮೊಬೈಲ್ಗೆ ಕೈ ಹಾಕಿ ದಾಖಲೆ ಕಳ್ಳತನ ಮಾಡುವ ಹಾಗೂ ನಿಮ್ಮದೇ ಖಾತೆಯಿಂದ ಲಕ್ಷಾಂತರ ರೂಪಾಯಿಗಳನ್ನು ಲಪಟಾಯಿಸುವ ಖದೀಮರು ಸಾಕಷ್ಟು ತುಂಬಿಕೊಂಡಿದ್ದಾರೆ.
ನೀವು ಕ್ಷಣ ಯಾಮಾರಿದ್ರೂ ಕಣ್ ಮುಚ್ಚಿ ತೆರೆಯೋದ್ರೊಳಗೆ ನಿಮ್ಮ ಖಾತೆಯಲ್ಲಿನ ಎಲ್ಲಾ ಕಾಂಚಾಣ ಫುಲ್ ಕ್ಲೀನ್. ಸದ್ಯ ಇಂತ ಸೈಬರ್ ಅಪರಾಧ ಪ್ರಕರಣಗಳಲ್ಲಿ ದೇಶದಲ್ಲೇ ಕರ್ನಾಟಕ ಎರಡನೇ ಸ್ಥಾನದಲ್ಲಿದೆ.
ಸೈಬರ್ ಅಪರಾಧದಲ್ಲಿ ರಾಜ್ಯ 2ನೇ ಸ್ಥಾನದಲ್ಲಿದೆ. ಸೈಬರ್ ಹ್ಯಾಕಿಂಗ್, ಡೇಟಾ ಕಳ್ಳತನ ಹಾಗೂ ಬ್ಯಾಂಕಿಂಗ್ಗಳಲ್ಲಿ ಅಕ್ರಮ ಸೇರಿದಂತೆ ಹಲವು ರೀತಿಯಲ್ಲಿ ಸೈಬರ್ ಲೋಕದಲ್ಲಿ ಪ್ರಕರಣಗಳು ನಿತ್ಯ ದಾಖಲಾಗುತ್ತವೆ. ಇದಕ್ಕೆ ಬ್ರೇಕ್ ಹಾಕಬೇಕಂತಲೇ ಬೇರೆ ರಾಜ್ಯಗಳಲ್ಲಿ ಚಾಲ್ತಿ ಇರುವ ಸೈಬರ್ ಪಾಲಿಸಿಯನ್ನು ರಾಜ್ಯದಲ್ಲಿ ಜಾರಿ ಮಾಡಲು ಪ್ಲ್ಯಾನ್ ನಡೆದಿದೆ.
ಜ್ಞಾನವಾಪಿ ಮಸೀದಿ ಪ್ರಕರಣದ ತೀರ್ಪು ಸೆಪ್ಟಂಬರ್ 12 ಕ್ಕೆ
ಹರಿಯಾಣ, ತಮಿಳುನಾಡು, ತೆಲಂಗಾಣ, ಮಹಾರಾಷ್ಟ್ರದಲ್ಲಿ ಚಾಲ್ತಿಯಲ್ಲಿರುವ ಸೈಬರ್ ಪಾಲಿಸಿಯನ್ನು ರಾಜ್ಯದಲ್ಲಿ ಜಾರಿ ಮಾಡಲು ಪ್ಲ್ಯಾನ್ ನಡೆದಿದೆ. ಈ ನೀತಿಯಿಂದ ಸೈಬರ್ ದಾಳಿಗಳ ಬಗ್ಗೆ ಬೆದರಿಕೆ ಬಂದಾಗ ಸರ್ಕಾರಿ ಸಂಸ್ಥೆಗಳ ಮೂಲಕ ಕಂಪ್ಯೂಟರ್ ಎಮರ್ಜೆನ್ಸಿ ವರ್ಕ್ ಟೀಂಗೆ ಮಾಹಿತಿ ನೀಡಲಾಗುತ್ತೆ. ಮಾತ್ರವಲ್ಲದೆ ಈ ಬಗ್ಗೆ ಜಾಗೃತಿ ತರಲು ಇಂಜಿನಿಯರಿಂಗ್, ಡಿಪ್ಲೊಮಾದಲ್ಲಿ ವಿಷಯವಾಗಿ ಬೋಧನೆ ಮಾಡುವುದು, ಅಗತ್ಯವಿರುವವರಿಗೆ ತರಬೇತಿ ಹಾಗೂ ಅರಿವು ಮೂಡಿಸಲಾಗುವುದು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು