ತಿರುಪತಿಗೆ ಪಾದಯಾತ್ರೆ ಮೂಲಕ ಹೋಗುವ ಭಕ್ತರಿಗೆ ತಿರುಪತಿ ಶ್ರೀವಾರಿ ಮೆಟ್ಟಿಲು ಮಾರ್ಗ ಪುನಾರಂಭಗೊಂಡಿದೆ. ಕಳೆದ ವರ್ಷದ ನವೆಂಬರ್ನಲ್ಲಿ ಸುರಿದ ಮಳೆಯಿಂದ ಪಾದಚಾರಿ ಮಾರ್ಗದ ಮೆಟ್ಟಿಲುಗಳಿಗೆ ಹಾನಿಯಾಗಿ ಈ ಮಾರ್ಗ ಬಂದ್ ಆಗಿತ್ತು.
ಮೆಟ್ಟಿಲುಗಳ ದುರಸ್ತಿ ಕಾರ್ಯ ಈಗ ಪೂರ್ಣಗೊಂಡಿದ್ದು ಗುರುವಾರ ಮೆಟ್ಟಿಲುಗಳನ್ನು ಸಾರ್ವಜನಿಕರ ಪ್ರವೇಶಕ್ಕೆ ಉದ್ಘಾಟಿಸಲಾಗಿದೆ. ತಿರುಪತಿಗೆ ಪಾದಯಾತ್ರೆ ಮೂಲಕ ದೇವರ ದರ್ಶನಕ್ಕೆ ಹೋಗುವವರಿಗೆ ಅನುಕೂಲವಾಗಿದೆ.
2021ರ ನವೆಂಬರ್ನಲ್ಲಿ ಬಂಗಾಳಕೊಲ್ಲಿಯಲ್ಲಿ ಉಂಟಾಗಿದ್ದ ವಾಯುಭಾರ ಕುಸಿತದಿಂದ ಭಾರೀ ಮಳೆಯಾಗಿತ್ತು. ತಿರುಪತಿ, ನೆಲ್ಲೂರು, ತಿರುಮಲ ಬೆಟ್ಟ, ಘಾಟ್ ರಸ್ತೆಗಳು ಸಂಪೂರ್ಣವಾಗಿ ಬಂದ್ ಆಗಿದ್ದವು. ದೇಗುಲ ಸಂಪೂರ್ಣವಾಗಿ ಜಲಾವೃತಗೊಂಡು ವಿಶ್ವತ ಅತ್ಯಂತ ಶ್ರೀಮಂತ ದೇವರಾದ ತಿರುಪತಿ ತಿಮ್ಮಪ್ಪನ ದೇಗುಲದ ಬಾಗಿಲು ಮುಚ್ಚವಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು.
.ಪಾದಾಚಾರಿ ಮಾರ್ಗ ಓಪನ್ :
ಪಾದಾಚಾರಿ ಮಾರ್ಗದಲ್ಲಿ ಎಲ್ಲೆಲ್ಲಿ ಮೆಟ್ಟಿಲುಗಳಿಗೆ ಹಾನಿಯಾಗಿತ್ತು ಅವುಗಳನ್ನು ಸಂಪೂರ್ಣ ದುರಸ್ಥಿ ಮಾಡಲಾಗಿದೆ. ಮಾರ್ಗ ಉದ್ಘಾಟನೆಗೂ ಮುನ್ನ 20 ಕಿ. ಮೀ. ದೂರದಲ್ಲಿರುವ ಶ್ರೀವಾರಿಮೆಟ್ಟುವಿನಲ್ಲಿ ನಡೆದ ಪೂಜೆಯಲ್ಲಿ ಟಿಟಿಡಿ ಅಧ್ಯಕ್ಷ ವೈ. ವಿ. ಸುಬ್ಬಾರೆಡ್ಡಿ, ಕಾರ್ಯನಿರ್ವಹಣಾಧಿಕಾರಿ ಕೆ. ಎಸ್. ಜವಾಹರರೆಡ್ಡಿ ಹಾಗೂ ಹೆಚ್ಚುವರಿ ಇಒ ಎ. ವಿ .ಧರ್ಮಾರೆಡ್ಡಿ ಭಾಗವಹಿಸಿದ್ದರು.
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More
ಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಬಳಿಕ ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣರನ್ನು ಅಮಾನತು ಮಾಡಿ ಜೆಡಿಎಸ್… Read More
ಬೆಂಗಳೂರು : ರಾಜ್ಯದ ಎರಡನೇ ಹಂತದ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಗತ್ಯ ಸೇವೆಗಳ ಇಲಾಖೆಗಳ ಸಿಬ್ಬಂದಿಗೆ ನಾಳೆಯಿಂದ 3 ದಿನಗಳ… Read More
ಬೆಂಗಳೂರು : ಮೇ 10ರಂದು - ಪ್ರಸಕ್ತ ಸಾಲಿನ SSLC ಪರೀಕ್ಷೆಯ ಫಲಿತಾಂಶ ಪ್ರಕಟಿಸಲು ಇಲಾಖೆ ಎಲ್ಲಾ ರೀತಿಯ ಸಿದ್ದತೆಗಳನ್ನು… Read More
ನವದೆಹಲಿ ,ಏಪ್ರಿಲ್ 30 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,550 ರೂಪಾಯಿ ದಾಖಲಾಗಿದೆ. 24… Read More
This website uses cookies.
Leave a Comment