Karnataka

SSLC ವಿದ್ಯಾರ್ಥಿಗಳಿಗೆ ಈ ಬಾರಿಯೂ ಶೇ.10 ರಷ್ಟು ಕೃಪಾಂಕ

2022-23ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಈ ಬಾರಿಯೂ ಕೊರೊನಾ ಬ್ಯಾಚ್ ಎಂದು ಪರಿಗಣಿಸಿ ಶೇ. 10 ರಷ್ಟು ಕೃಪಾಂಕ ನೀಡಲಾಗುವುದು.

ಎಸ್‌ಎಸ್ ಎಲ್ ಸಿ ಬೊರ್ಡ್ ನಿರ್ದೇಶಕ ರಾಮಚಂದ್ರ, ಈ ಬಾರಿಯೂ ಕೊರೊನಾ ಬ್ಯಾಚ್ ಎಂದು ಪರಿಗಣಿಸಿ ಶೇ.10 ರಷ್ಟು ಗ್ರೇಸ್ ಅಂಕ ನೀಡಲಾಗುವುದು. ಮೂರು ವಿಷಯಗಳಿಗೆ ಮಾತ್ರ ಗ್ರೇಸ್ ಮಾರ್ಕ್ ಅಂಕ ನೀಡಲಾಗುತ್ತದೆ.

ತೇರ್ಗಡೆ ಕಡಿಮೆ ಅಂಕ ಪಡೆಯುವ ವಿದ್ಯಾರ್ಥಿಗಳಿಗೆ ಮಾತ್ರ ಇದು ಅನ್ವಯವಾಗಲಿದೆ ಎಂದು ತಿಳಿಸಿದ್ದಾರೆ.

2022-23ನೇ ಸಾಲಿನ ಎಸ್ ಎಸ್ ಎಲ್ ಸಿ ಅಂತಿಮ ಪರೀಕ್ಷೆಗಳು 31-03-2023 ರಿಂದ 15-04-2023ರವರೆಗೆ ನಡೆಯಲಿದೆ.

ಎಸ್ ಎಸ್ ಎಲ್ ಸಿ ಪರೀಕ್ಷೆಗೆ 15,498 ಶಾಲೆಗಳಿಂದ 8,42,811 ವಿದ್ಯಾರ್ಥಿಗಳು ನೊಂದಾಯಿಸಿಕೊಂಡಿದ್ದಾರೆ. ಇವರಲ್ಲಿ ಶಾಲಾ ವಿದ್ಯಾರ್ಥಿಗಳು 7,94,611 ಆಗಿದ್ದರೇ ಪುನರಾವರ್ತಿತ ವಿದ್ಯಾರ್ಥಿಗಳು 20,750 ಆಗಿದ್ದಾರೆ. ಖಾಸಗಿ ಅಭ್ಯರ್ಥಿಗಳು 18,272. ಖಾಸಗಿ ಪುನರಾವರ್ತಿತ ಅಭ್ಯರ್ಥಿಗಳು 8,862 ಎಂದು ರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಾಹಿತಿ ನೀಡಿದೆ.
8,42,811 ನೋಂದಾಯಿತ ವಿದ್ಯಾರ್ಥಿಗಳಿಗಾಗಿ ರಾಜ್ಯಾಧ್ಯಂತ ಒಟ್ಟು 3,305 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ.

ಸರ್ಕಾರಿ ಶಾಲೆಗಳ 3,60,862, ಅನುದಾನಿತ ಶಾಲೆಗಳ 2,20,831 ಹಾಗೂ ಅನುದಾನ ರಹಿತ ಶಾಲೆಗಳ 2,61,811 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಹೇಳಿದೆ.
ಬಿ.ಇ.ಓ ನೇತೃತ್ವದ ಸಮಿತಿಯ ಸಮ್ಮುಖದಲ್ಲಿಯೇ ಪ್ರಶ್ನೆ ಪತ್ರಿಕೆಗಳನ್ನು ಆಯಾ ತಾಲೂಕು ಖಜಾನೆಗಳಿಂದ ಪರೀಕ್ಷೆ ಕೇಂದ್ರಗಳಿಗೆ ರವಾನಿಸಬೇಕು.

ಎಸ್ ಎಸ್ ಎಲ್ ಸಿ.

ಪರೀಕ್ಷೆಯ ವೇಳಾಪಟ್ಟಿ
ಮಾರ್ಚ್ 31- ಪ್ರಥಮ ಭಾಷೆ,
ಏಪ್ರಿಲ್ 3- ಗಣಿತ,
ಏಪ್ರಿಲ್ 6- ದ್ವಿತೀಯ ಭಾಷೆ
ಏಪ್ರಿಲ್ 10- ವಿಜ್ಞಾನ,
ಏಪ್ರಿಲ್ 12- ತೃತೀಯ ಭಾಷೆ
ಏಪ್ರಿಲ್ 15- ಸಮಾಜ ವಿಜ್ಞಾನ ವಿಷಯಗಳ ಪರೀಕ್ಷೆ ನಡೆಯಲಿದೆ.

ಇದನ್ನು ಓದಿ –ಆದರ್ಶ ಪುರುಷ , ಮರ್ಯಾದಾ ಪುರುಷೋತ್ತಮ ಶ್ರೀರಾಮ

#SSLC #Karnatakaboard #Gracemarks #Kkarnataka #goodnews #examination #ಕೊರೊನಾ_ಬ್ಯಾಚ್ # ಗ್ರೇಸ್_ಅಂಕ

Team Newsnap
Leave a Comment

Recent Posts

ಕ್ರೇಜಿವಾಲ್ ಗೆ ಮಧ್ಯಂತರ ಜಾಮೀನು ಪರಿಗಣನೆಗೆ ಸುಪ್ರೀಂ ಸೂಚನೆ

ನವದೆಹಲಿ : ಲೋಕಸಭೆ ಚುನಾವಣೆಯನ್ನು ಹಿನ್ನಲೆಯಲ್ಲಿ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌… Read More

May 3, 2024

ಬಿಜೆಪಿ ಜೊತೆಗಿನ ಮೈತ್ರಿ ಸದ್ಯಕ್ಕೆ ನನಗೆ ಮುಖ್ಯ ಅಲ್ಲ: ಎಚ್ ಡಿ ಕೆ

ರಾಯಚೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತೀವ್ರ ಪೇಚಿಗೆ ಸಿಲುಕಿರುವ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ… Read More

May 3, 2024

ಹೆಚ್.ಡಿ ರೇವಣ್ಣ ವಿರುದ್ಧ ಕಿಡ್ನಾಪ್ ಕೇಸ್ ದಾಖಲು

ಮೈಸೂರು : ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗನಿಂದ ರೇವಣ್ಣ ವಿರುದ್ಧ ದೂರು ದಾಖಲಿಸಲಾಗಿದ್ದು ,ಎಫ್‍ಐಆರ್… Read More

May 3, 2024

ರಾಮನಗರ : ಐಜೂರಿನಲ್ಲಿ ಕರಡಿ ಪ್ರತ್ಯಕ್ಷ

ರಾಮನಗರ : ಮೂರು ದಿನಗಳ ಹಿಂದೆ ಕರಡಿಯೊಂದು ಐಜೂರಿನ ಜನವಸತಿ ಪ್ರದೇಶದಲ್ಲಿ ನಿರ್ಭೀತಿಯಿಂದ ಓಡಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.… Read More

May 3, 2024

ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಕೇಸ್ ದಾಖಲು

ಬೆಂಗಳೂರು : . ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು , ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ ಸಿಆರ್ ಪಿಸಿ… Read More

May 3, 2024

ಪೊಲೀಸ್ ಠಾಣೆ ಸಮೀಪದಲ್ಲೇ ಪತ್ನಿಯನ್ನು ಕೊಂದ ಪತಿ

ಬೆಂಗಳೂರು : ಕೋರಮಂಗಲದ ಆರನೇ ಬ್ಲಾಕ್ ನಲ್ಲಿ , ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ… Read More

May 3, 2024