ಕರೋನಾ ಪರಿಸ್ಥಿತಿ ಸೂಕ್ಷ್ಮ ಎಂದು ಪರಿಗಣಿಸಲ್ಪಟ್ಟ ರಾಜ್ಯದ 10 ಜಿಲ್ಲೆಗಳಲ್ಲಿ ಶೇ.100 ರಷ್ಟು ಭೌತಿಕ ತಪಾಸಣಾ ಕೇಂದ್ರಗಳನ್ನು ಆರಂಭಿಸುವ ಬಗ್ಗೆ ಚಿಂತನೆ ನಡೆದಿದೆ ಎಂದು ಅರಣ್ಯ ಕನ್ನಡ ಮತ್ತು ಸಂಸ್ಕೃತಿ ಹಾಗೂ ವಾರ್ ರೂಂ, ಕಾಲ್ ಸೆಂಟರ್ ನಿರ್ವಹಣೆ ಮತ್ತು ಸೋಂಕಿತರಿಗೆ ವೈದ್ಯಕೀಯ ಸಲಹೆ ವ್ಯವಸ್ಥೆಯ
ಮೇಲ್ವಿಚಾರಣೆಯ ನೋಡಲ್ ಸಚಿವ ಅರವಿಂದ ಲಿಂಬಾವಳಿ ಹೇಳಿದರು.
ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ಆರೋಗ್ಯ ಸೌಧದಲ್ಲಿ 10 ಜಿಲ್ಲೆಗಳ ಜಿಲ್ಲಾಧಿಕಾರಿಗಳು, ನಗರಸಭೆ ಆಯುಕ್ತರು ಮತ್ತು ಜಿಲ್ಲಾ ಆರೋಗ್ಯಾಧಿಕಾರಿಗಳ ಜೊತೆ ವಿಡಿಯೋ ಸಂವಾದ ನಡೆಸಿ ಮಾತನಾಡುತ್ತಿದ್ದರು.
ಈಗ ಜಿಲ್ಲೆಗಳಲ್ಲಿ ಕರೋನಾ ಪರಿಸ್ಥಿತಿ ನಿರ್ವಹಣೆ ಹೇಗೆ ನಡೆಯುತ್ತಿದೆ ಎಂಬುದರ ಮಾಹಿತಿ ಪಡೆದ ಸಚಿವರು, ಇದನ್ನು ಇನ್ನೂ ಪರಿಣಾಮಕಾರಿಯಾಗಿ ಸಲು ಪ್ರತಿ ಜಿಲ್ಲೆಯಲ್ಲೂ, ವಿಶೇಷವಾಗಿ ನಗರ ಪ್ರದೇಶಗಳಲ್ಲಿ ವಾರ್ಡ್ ವಾರು (ಟ್ರಯೇಜಿಂಗ್ ಸೆಂಟರ್) ಭೌತಿಕ ತಪಾಸಣಾ ಕೇಂದ್ರ ಆರಂಭಿಸುವ ಬಗ್ಗೆ ಜಿಲ್ಲಾಡಳಿತಗಳ ಅಭಿಪ್ರಾಯ ಮುಖ್ಯ ಎಂದರು.
ಜಿಲ್ಲಾಮಟ್ಟದಲ್ಲಿ ಭೌತಿಕ ತಪಾಸಣಾ ಕೇಂದ್ರ ಆರಂಭಕ್ಕೆ ಬೇಕಾದ ಮೂಲ ಸೌಕರ್ಯಗಳು ಮತ್ತು ಮಾನವ ಸಂಪನ್ಮೂಲ ಲಭ್ಯತೆಗಳ ಬಗ್ಗೆ ಪರಿಶೀಲನೆ ನಡೆಸಿ ಕೂಡಲೇ ತಿಳಿಸುವಂತೆ ಸೂಚಿಸಿದರು. ಸಂಚಾರಿ ತಪಾಸಣಾ ಕೇಂದ್ರ ಆರಂಭಿಸುವುದು ಕುರಿತಂತೆ ಅನೇಕ ಸಲಹೆಗಳನ್ನು ಸಕಾರಾತ್ಮಕವಾಗಿ ಸ್ವೀಕರಿಸಿದ ಸಚಿವ ಅರವಿಂದ ಲಿಂಬಾವಳಿ ಇದನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದು ಅಂತಿಮಗೊಳಿಸಲಾಗುವುದು ಎಂದು ಹೇಳಿದರು.
ದಕ್ಷಿಣ ಕನ್ನಡ, ಹುಬ್ಬಳ್ಳಿ -ಧಾರವಾಡ, ಗುಲ್ಬರ್ಗ,ದಾವಣಗೆರೆ,ಬೆಳಗಾವಿ,ಶಿವಮೊಗ್ಗ, ಮಡಿಕೇರಿ, ಉಡುಪಿ,ಮಂಡ್ಯ ಜಿಲ್ಲೆಯ ಅಧಿಕಾರಿಗಳು ಇದರಲ್ಲಿ ಭಾಗವಹಿಸಿದ್ದರು.
ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More
ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More
ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More
ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More
ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More
This website uses cookies.
Leave a Comment